<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬಲ್ಲಿಗಂಗೆ ಶಾಸಕ ಸೋಭಾಂದೇಬ್ ಚಟ್ಟೋಪಾಧ್ಯಾಯ ಅವರನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೇಮಿಸಿದೆ.</p>.<p>ಧನೇಖಾಲಿ ಶಾಸಕಿ ಅಸಿಮಾ ಪಾತ್ರ ಮತ್ತು ಚೌರಂಗಿ ಶಾಸಕಿ ನಯನಾ ಬಂಡೋಪಾಧ್ಯಾಯ ಅವರು ವಿರೋಧ ಪಕ್ಷದ ಉಪ ನಾಯಕಿಯರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪಕ್ಷವು ಶನಿವಾರ ಸಂಜೆ ಘೋಷಿಸಿತ್ತು. </p>.<p>ಕೋಲ್ಕತ್ತ ಬಂದರು ಶಾಸಕ ಫಿರ್ಹಾದ್ ಹಕೀಮ್ ಅವರನ್ನು ವಿಧಾನಸಭೆಯ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ. ಹಕೀಮ್ ಕೋಲ್ಕತ್ತ ಮಹಾನಗರ ಪಾಲಿಕೆಯ ಮೇಯರ್ ಕೂಡ ಆಗಿದ್ದಾರೆ.</p>.<p>ಹೊಸದಾಗಿ ನೇಮಕಗೊಂಡ ನಾಯಕರು ಬಂಗಾಳದ ಜನರ ಹಿತಾಸಕ್ತಿಗಾಗಿ ಬದ್ಧತೆಯಿಂದ ಕೆಲಸ ಮಾಡುತ್ತಾರೆ ಎಂದು ಟಿಎಂಸಿ ಹೇಳಿದೆ.</p>.<p>ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. 294 ಸದಸ್ಯ ಬಲದ ಸದನದಲ್ಲಿ 207 ಸ್ಥಾನಗಳನ್ನು ಗೆದ್ದು ಮೊದಲ ಬಾರಿಗೆ ರಾಜ್ಯದಲ್ಲಿ ಸರ್ಕಾರ ರಚಿಸಿದೆ. ಶನಿವಾರ ಬೆಳಿಗ್ಗೆ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. </p>.Video | ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುಗಾರಂಭ: ಸುವೇಂದು ಅಧಿಕಾರಿ ಮುಖ್ಯಮಂತ್ರಿ .<p>2021ರ ಮೇ ತಿಂಗಳಲ್ಲಿ ಮಮತಾ ಬ್ಯಾನರ್ಜಿ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದರು. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅವರ ನೇತೃತ್ವದ ಟಿಎಂಸಿ ಪಕ್ಷ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಚುನಾವಣಾ ಸೋಲಿನ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮಮತಾ ನಿರಾಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬಲ್ಲಿಗಂಗೆ ಶಾಸಕ ಸೋಭಾಂದೇಬ್ ಚಟ್ಟೋಪಾಧ್ಯಾಯ ಅವರನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೇಮಿಸಿದೆ.</p>.<p>ಧನೇಖಾಲಿ ಶಾಸಕಿ ಅಸಿಮಾ ಪಾತ್ರ ಮತ್ತು ಚೌರಂಗಿ ಶಾಸಕಿ ನಯನಾ ಬಂಡೋಪಾಧ್ಯಾಯ ಅವರು ವಿರೋಧ ಪಕ್ಷದ ಉಪ ನಾಯಕಿಯರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪಕ್ಷವು ಶನಿವಾರ ಸಂಜೆ ಘೋಷಿಸಿತ್ತು. </p>.<p>ಕೋಲ್ಕತ್ತ ಬಂದರು ಶಾಸಕ ಫಿರ್ಹಾದ್ ಹಕೀಮ್ ಅವರನ್ನು ವಿಧಾನಸಭೆಯ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ. ಹಕೀಮ್ ಕೋಲ್ಕತ್ತ ಮಹಾನಗರ ಪಾಲಿಕೆಯ ಮೇಯರ್ ಕೂಡ ಆಗಿದ್ದಾರೆ.</p>.<p>ಹೊಸದಾಗಿ ನೇಮಕಗೊಂಡ ನಾಯಕರು ಬಂಗಾಳದ ಜನರ ಹಿತಾಸಕ್ತಿಗಾಗಿ ಬದ್ಧತೆಯಿಂದ ಕೆಲಸ ಮಾಡುತ್ತಾರೆ ಎಂದು ಟಿಎಂಸಿ ಹೇಳಿದೆ.</p>.<p>ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. 294 ಸದಸ್ಯ ಬಲದ ಸದನದಲ್ಲಿ 207 ಸ್ಥಾನಗಳನ್ನು ಗೆದ್ದು ಮೊದಲ ಬಾರಿಗೆ ರಾಜ್ಯದಲ್ಲಿ ಸರ್ಕಾರ ರಚಿಸಿದೆ. ಶನಿವಾರ ಬೆಳಿಗ್ಗೆ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. </p>.Video | ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುಗಾರಂಭ: ಸುವೇಂದು ಅಧಿಕಾರಿ ಮುಖ್ಯಮಂತ್ರಿ .<p>2021ರ ಮೇ ತಿಂಗಳಲ್ಲಿ ಮಮತಾ ಬ್ಯಾನರ್ಜಿ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದರು. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅವರ ನೇತೃತ್ವದ ಟಿಎಂಸಿ ಪಕ್ಷ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಚುನಾವಣಾ ಸೋಲಿನ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮಮತಾ ನಿರಾಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>