<p><strong>ಪಣಜಿ:</strong> ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿರುದ್ಧ ಬೆದರಿಕೆ ಹೇಳಿಕೆ ನೀಡಿದ್ದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ರಾಮಾ ಕಂಕಣಕರ್ ಎನ್ನುವವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p><p>ನಗರದ ಆಜಾದ್ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಾವಂತ್ ವಿರುದ್ಧ ಅವಹೇಳನಕಾರಿ ಮತ್ತು ದ್ವೇಷಪೂರಿತ ಹೇಳಿಕೆ ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪಣಜಿ ಪೊಲೀಸರು ತಿಳಿಸಿದ್ದಾರೆ.</p><p>ಎಫ್ಐಆರ್ನಲ್ಲಿ ಆರೋಪಿಯು ‘ಮುಖ್ಯಮಂತ್ರಿಯನ್ನು ಜೀವಂತವಾಗಿ ಸುಟ್ಟುಹಾಕುತ್ತೇವೆ’ ಎಂದು ಹೇಳಿಕೆ ನೀಡಿದ್ದರು. ಇದು ಸಾಮಾನ್ಯ ಜನರಲ್ಲಿ ದ್ವೇಷ ಭಾವನೆ ಹುಟ್ಟುಹಾಕುವುದಲ್ಲದೆ ಮುಖ್ಯಮಂತ್ರಿಯ ವಿರುದ್ಧವೂ ಪ್ರಚೋದನೆ ನೀಡಿದಂತಾಗಲಿದೆ ಎಂದು ಉಲ್ಲೇಖಿಸಲಾಗಿದೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಕ್ರಿಮಿನಲ್ ಬೆದರಿಕೆ ಮತ್ತು ಸಾರ್ವಜನಿಕ ಕಿಡಿಗೇಡಿತನ ಅಡಿ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಆರೋಪಿಗೆ ಸಮನ್ಸ್ ನೀಡಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿರುವುದಾಗಿ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿರುದ್ಧ ಬೆದರಿಕೆ ಹೇಳಿಕೆ ನೀಡಿದ್ದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ರಾಮಾ ಕಂಕಣಕರ್ ಎನ್ನುವವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p><p>ನಗರದ ಆಜಾದ್ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಾವಂತ್ ವಿರುದ್ಧ ಅವಹೇಳನಕಾರಿ ಮತ್ತು ದ್ವೇಷಪೂರಿತ ಹೇಳಿಕೆ ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪಣಜಿ ಪೊಲೀಸರು ತಿಳಿಸಿದ್ದಾರೆ.</p><p>ಎಫ್ಐಆರ್ನಲ್ಲಿ ಆರೋಪಿಯು ‘ಮುಖ್ಯಮಂತ್ರಿಯನ್ನು ಜೀವಂತವಾಗಿ ಸುಟ್ಟುಹಾಕುತ್ತೇವೆ’ ಎಂದು ಹೇಳಿಕೆ ನೀಡಿದ್ದರು. ಇದು ಸಾಮಾನ್ಯ ಜನರಲ್ಲಿ ದ್ವೇಷ ಭಾವನೆ ಹುಟ್ಟುಹಾಕುವುದಲ್ಲದೆ ಮುಖ್ಯಮಂತ್ರಿಯ ವಿರುದ್ಧವೂ ಪ್ರಚೋದನೆ ನೀಡಿದಂತಾಗಲಿದೆ ಎಂದು ಉಲ್ಲೇಖಿಸಲಾಗಿದೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಕ್ರಿಮಿನಲ್ ಬೆದರಿಕೆ ಮತ್ತು ಸಾರ್ವಜನಿಕ ಕಿಡಿಗೇಡಿತನ ಅಡಿ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಆರೋಪಿಗೆ ಸಮನ್ಸ್ ನೀಡಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿರುವುದಾಗಿ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>