ತಂತ್ರಜ್ಞಾನವು ಇದೀಗ ಅಪಾಯಕಾರಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದ ನ್ಯಾಯಮೂರ್ತಿ ದೀಪಕ್ ಗುಪ್ತಾ ಮತ್ತು ಅನಿರುದ್ಧ್ ಬೋಸ್ ಅವರ ನ್ಯಾಯಪೀಠವು ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವೊಂದು ವಿಷಯ/ ಸಂದೇಶಗಳ ಮೂಲ ಯಾವುದು ಎಂಬುದು ಪತ್ತೆ ಹಚ್ಚುವುದು ಕಷ್ಟ . ಹಾಗಾಗಿ ಕೇಂದ್ರ ಸರ್ಕಾರ ಇದನ್ನು ತಡೆಯಲು ಈಗಲೇ ಕಾರ್ಯ ಪ್ರವೃತ್ತವಾಗಬೇಕು ಎಂದಿದೆ.