ಲಖನೌ: ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರವಹಿಸಲಿರುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ‘ಯುಪಿ ಜೋಡೊ ಯಾತ್ರೆ’ಯನ್ನು ಬುಧವಾರ ಆರಂಭಿಸಿದೆ.
ಸಹರನ್ಪುರದ ಶಾಕಂಬರಿ ದೇವಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಜಯ್ ರಾಯ್ ಅವರು ಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಬಿಜೆಪಿಗೆ ಎದಿರೇಟು ನೀಡಲು ಪಕ್ಷವು ಮೃದು ಹಿಂದುತ್ವದ ಮೊರೆ ಹೋಗಲಿದೆ ಎಂಬ ಸೂಚನೆಯನ್ನು ನೀಡಲಾಗಿದೆ.
ಮೊದಲ ಹಂತದಲ್ಲಿ ಯಾತ್ರೆಯು 11 ಜಿಲ್ಲೆಗಳ 15 ಲೋಕಸಭಾ ಕ್ಷೇತ್ರಗಳಿಗೆ ತೆರಳಲಿದೆ ಎಂದು ಮೂಲಗಳು ತಿಳಿಸಿವೆ.