ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂರ್ಯನಲ್ಲಿಗೆ ಇಸ್ರೊ; ಸೆಪ್ಟೆಂಬರ್‌ನಲ್ಲಿ 'ಆದಿತ್ಯ' ಯೋಜನೆ: ಸೋಮನಾಥ್

Published 24 ಆಗಸ್ಟ್ 2023, 9:46 IST
Last Updated 24 ಆಗಸ್ಟ್ 2023, 9:46 IST
ಅಕ್ಷರ ಗಾತ್ರ

ಬೆಂಗಳೂರು: ಚಂದ್ರಯಾನ-3ರ ಯಶಸ್ಸಿನ ಬೆನ್ನಲ್ಲೇ ಮುಂದಿನ ಯೋಜನೆ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಅಧ್ಯಕ್ಷ ಎಸ್. ಸೋಮನಾಥ್ ವಿವರಣೆ ನೀಡಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಎಕ್ಸ್‌ನಲ್ಲಿ (ಟ್ವಿಟರ್) ಪೋಸ್ಟ್ ಮಾಡಿದೆ.

ಸೂರ್ಯನ ಅಧ್ಯಯನಕ್ಕಾಗಿ ಸೆಪ್ಟೆಂಬರ್‌ ತಿಂಗಳ ಮೊದಲ ವಾರದಲ್ಲಿ 'ಆದಿತ್ಯ ಎಲ್-1' ಉಪಗ್ರಹ ಉಡಾವಣೆಗೆ ಸಿದ್ಧವಾಗಿದೆ ಎಂದು ಅವರು ಖಚಿತಪಡಿಸಿದ್ದಾರೆ.

ಗಗನಯಾನ ಯೋಜನೆ ಇನ್ನೂ ಪ್ರಗತಿಯಲ್ಲಿದೆ. 2025ರ ವೇಳೆಗೆ ಮಾನವಸಹಿತ ಕಾರ್ಯಾಚರಣೆ ಮಾಡುವ ಗುರಿ ಹೊಂದಿದ್ದೇವೆ. ಇದಕ್ಕೂ ಮೊದಲು ಅನೇಕ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸಬೇಕಿದೆ ಎಂದು ಹೇಳಿದ್ದಾರೆ.

ಚಂದ್ರಯಾನ-3 ಯೋಜನೆ ಯಶಸ್ಸಿನ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕ್ಷಣವನ್ನು ವಿವರಿಸಲಾಗದು. ಸಾಫ್ಟ್ ಲ್ಯಾಂಡಿಂಗ್ ಸವಾಲಿನಿಂದ ಕೂಡಿತ್ತು. ಈ ಯೋಜನೆಯ ಯಶಸ್ಸಿಗಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದರು.

ಪ್ರಗ್ಯಾನ್ ರೋವರ್ ಎರಡು ಉಪಕರಣಗಳನ್ನು ಹೊಂದಿದೆ. ಇವೆರಡು ಚಂದ್ರನ ಮೇಲ್ಮೈಯಲ್ಲಿ ಧಾತುರೂಪದ ಸಂಯೋಜನೆಯ ಸಂಶೋಧನೆ ಮತ್ತು ರಾಸಾಯನಿಕ ಸಂಯೋಜನೆಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT