ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಗುಂಡು ಹಾರಿಸಿಕೊಂಡು ಯೋಧ ಸಾವು

Published 11 ಅಕ್ಟೋಬರ್ 2023, 6:11 IST
Last Updated 11 ಅಕ್ಟೋಬರ್ 2023, 6:11 IST
ಅಕ್ಷರ ಗಾತ್ರ

ಶ್ರೀನಗರ: ಸೇನಾ ಯೋಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮು –ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತಪಾಲ್ ಸಿಂಗ್ ಮೃತ ಯೋಧ. ಅವರನ್ನು ಮ್ಯಾನ್ಕೊಟೆ ಸೆಕ್ಟರ್‌ನಲ್ಲಿ ಫಾರ್ವರ್ಡ್ ಪೋಸ್ಟ್‌ಗೆ ನಿಯೋಜನೆ ಮಾಡಲಾಗಿತ್ತು. ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಸಹೋದ್ಯೋಗಿಯೊಬ್ಬರು ಅವರ ಕೊಠಡಿಗೆ ಹೋದಾಗ ಅಮೃತಪಾಲ್ ತಮ್ಮ ಗನ್ ಜೊತೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ.

ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ತಗುಲಿ ಸಿಂಗ್ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಇದು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎಂಬುದು ತನಿಖೆ ಬಳಿಕ ತಿಳಿಯಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT