ಆದರೆ, ಈ ಆರೋಪವನ್ನು ತಿರುವಣ್ಣಾಮಲೈ ಜಿಲ್ಲಾ ಪೊಲೀಸರು ತಳ್ಳಿಹಾಕಿದ್ದು, ‘ಮಹಿಳೆಯನ್ನು ಅರೆಬೆತ್ತಲೆಯಾಗಿ ಥಳಿಸಿರುವ ಘಟನೆ ನಮ್ಮಲ್ಲಿ ನಡೆದಿಲ್ಲ. ಇದು ಎರಡು ಗುಂಪುಳ ನಡುವಿನ ವಾಕ್ಸಮರ ಅಷ್ಟೇ. ಅದಾಗ್ಯೂ ಪ್ರಕರಣದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ’ ಎಂದು ಟ್ವಿಟರ್ನಲ್ಲಿ ಪತ್ರಿಕಾ ಪ್ರಕಟಣೆ ಹಂಚಿಕೊಂಡಿದ್ದಾರೆ.
‘ಯೋಧನ ಕುಟುಂಬದವರಿಗೂ ಹಾಗೂ ಗ್ರಾಮದ ಸೆಲ್ವಮೂರ್ತಿ ಎನ್ನುವವರಿಗೆ ದೇವಸ್ಥಾನದ ಜಾಗವೊಂದರ ಅಂಗಡಿ ಬಗೆಗಿನ ತಕರಾರು ಇದು. ಯೋಧನ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದರು, ಅವರನ್ನು ನಮ್ಮ ಪೊಲೀಸರು ವಿಚಾರಿಸಿದ್ದು, ಎರಡೂ ಕಡೆಯವರು ಪರಸ್ಪರ ದೂರು ಸಲ್ಲಿಸಿದ್ದಾರೆ’ ಎಂದು ಹೇಳಿದ್ದಾರೆ.
ಯೋಧನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಕೆಲವರು ಇದು ಡಿಎಂಕೆ ಕಾರ್ಯಕರ್ತರ ಗೂಂಡಾಗಿರಿ ಎಂದು ಆರೋಪಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಯೊಧನ ಪತ್ನಿಯ ಮೇಲೆ ಹಲ್ಲೆ ಮಾಡಿರುವುದು ತೀವ್ರ ಖಂಡನೀಯ. ನಾನು, ನಮ್ಮ ಕಾರ್ಯಕರ್ತರು ಸ್ಥಳಕ್ಕೆ ತೆರಳಲಿದ್ದೇವೆ ಎಂದು ತಿಳಿಸಿದ್ದಾರೆ.