ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸೇನೆಯ ಪ್ಯಾರಾಟ್ರೂಪರ್ಸ್, ರಾಜ್ಯ ಪೊಲೀಸರು ಮತ್ತು ಸಿಆರ್ಪಿಎಫ್ (ಕೇಂದ್ರ ಮೀಸಲು ಪೊಲೀಸ್ ಪಡೆ) ಯೋಧರು ಜತೆಯಾಗಿ ನಸುಕಿನ ಜಾವ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಸೇನಾ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಚಕಮಕಿ ನಡೆದಿದೆ.