ರಜೌರಿ: ಗಡಿ ನಿಯಂತ್ರಣಾ ರೇಖೆಯ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆಯು ಶನಿವಾರ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ವೇಳೆ ಭಾರತವೂ ಪ್ರತಿರೋಧ ತೋರಿದೆ.
ಲ್ಯಾನ್ಸ್ ನಾಯ್ಕ್, ಡೆಹ್ರಾಡೂನ್ ಮೂಲದಸಂದೀಪ್ ತಪ್ಪಾ(35) ಹತ ಯೋಧ. ಭಾರತೀಯ ಸೇನೆಯಲ್ಲಿ ಅವರು 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು ಎಂದು ಭಾರತೀಯ ಸೇನೆಯ ವಕ್ತಾರ ಲೆಫ್ಟಿನೆಂಟ್ ದೇವೇಂದ್ರ ಆನಂದ್ ಹೇಳಿದ್ದಾರೆ.
Indian Army: Lance Naik Sandeep Thapa has lost his life in ceasefire violation by Pakistan in Nowshera Sector, Rajouri; firing underway. #JammuAndKashmirpic.twitter.com/guCG4i1hgj
‘ಅವರೊಬ್ಬ ವೀರ ಯೋಧ. ಅವರ ಸೇವೆ ಮತ್ತು ತ್ಯಾಗಕ್ಕೆ ಭಾರತ ಎಂದೆಂದಿಗೂ ಋಣಿಯಾಗಿರುತ್ತದೆ,’ ಎಂದೂ ಅವರು ಹೇಳಿದ್ದಾರೆ.
Army Sources: A Pakistani post opposite the RAJOURI sector (J&K) has been hit in action by Indian Army today. The exchange of fire between the two sides is still on after Pakistan violated ceasefire. One Indian Army soldier lost his life this morning in Pakistani firing pic.twitter.com/ws4rnRQndr
‘ನೌಶೆರಾ ಸೆಕ್ಟರ್ನಲ್ಲಿ ಪಾಕಿಸ್ತಾನವೂ ಶನಿವಾರ ಬೆಳಗ್ಗೆ 6.30ರಲ್ಲಿ ಅಪ್ರಚೋದಿತ ದಾಳಿ ನಡೆಸಿದೆ. ಇದಕ್ಕೆ ಭಾರತವೂ ಪ್ರತಿರೋಧ ತೋರಿದೆ. ಎರಡೂ ದೇಶಗಳ ನಡುವೆ ಗುಂಡಿನ ಕಾಳಗ ನಡೆದಿದೆ. ಸದ್ಯ ಪರಿಸ್ಥಿತಿ ತಹಬದಿಗೆ ಬಂದಿದೆ,’ಎಂದು ದೇವೇಂದ್ರ ಆನಂದ್ ತಿಳಿಸಿದ್ದಾರೆ.
ಭಾರತವೂ ಪೂಂಛ್ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿ ನಾಲ್ವರು ಯೋಧರನ್ನು ಕೊಂದಿದೆ ಎಂದು ಪಾಕಿಸ್ತಾನ ಎರಡು ದಿನಗಳ ಹಿಂದಷ್ಟೇ ಆರೋಪಿಸಿತ್ತು. ಆದರೆ, ಭಾರತ ಈ ಆರೋಪಗಳನ್ನು ತಳ್ಳಿ ಹಾಕಿತ್ತು. ಈ ಬೆಳವಣಿಗೆ ಹಸಿಯಾಗಿರುವಾಗಲೇ ಪಾಕ್ ಕದನ ವಿರಾಮ ಉಲ್ಲಂಘಿಸಿದೆ.