ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಲಬಾಂಬ್‌ ಸ್ಫೋಟ: ‘ಅಗ್ನಿವೀರ್’ ಯೋಧ ಸಾವು

Published 18 ಜನವರಿ 2024, 13:35 IST
Last Updated 18 ಜನವರಿ 2024, 13:35 IST
ಅಕ್ಷರ ಗಾತ್ರ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಗುರುವಾರ ಸಂಭವಿಸಿದ ನೆಲಬಾಂಬ್‌ ಸ್ಫೋಟದಲ್ಲಿ ‘ಅಗ್ನಿವೀರ್’ ಯೋಧ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಸೈನಿಕರು ವಾಡಿಕೆಯಂತೆ ಗಸ್ತು ತಿರುಗುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಗಾಯಗೊಂಡಿದ್ದ ಮೂವರು ಸೈನಿಕರನ್ನು ಉಧಂಪುರದ  ಕಮಾಂಡ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರಲ್ಲಿ ಒಬ್ಬರು ಮೃತಪಟ್ಟರು ಎಂದು ವರದಿಯಾಗಿದೆ. ಮೃತಪಟ್ಟವರನ್ನು ಅಗ್ನಿವೀರ್‌ ಯೋಧ ಲೂಧಿಯಾನದ ಅಜಯ್‌ ಸಿಂಗ್‌ ಎಂದು ಗುರುತಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT