<p><strong>ನವದೆಹಲಿ</strong>: ಭಾರಿ ಪ್ರಮಾಣದಲ್ಲಿ ಘನ ತ್ಯಾಜ್ಯ ಸೃಷ್ಟಿಯಾಗುವ ಸಂಘ–ಸಂಸ್ಥೆಗಳು ಕಸವನ್ನು ನಾಲ್ಕು ಹಂತಗಳಲ್ಲಿ ಬೇರ್ಪಡಿಸುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರವು ಬುಧವಾರ ಹೊಸ ನಿಯಮಗಳನ್ನು ಪ್ರಕಟಿಸಿದೆ.</p><p>ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ ತ್ಯಾಜ್ಯ ಹಾಗೂ ವಿಶೇಷ ಕಾಳಜಿಯ ತ್ಯಾಜ್ಯ ಎಂದು ವರ್ಗೀಕರಿಸಲಾಗಿದೆ.</p><p>ಹೊಸ ನಿಯಮಗಳು ಏಪ್ರಿಲ್ 1ರಿಂದ ಜಾರಿಗೆ ಬರಲಿವೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಬುಧವಾರ ತಿಳಿಸಿದ್ದಾರೆ.</p><p>ಹೊಸ ನಿಯಮಗಳ ಪ್ರಕಾರ, ಸುಮಾರು 20,000 ಚದರ ಮೀಟರ್ ಅಥವಾ ಅದಕ್ಕಿಂತ ಹೆಚ್ಚಿನ ಸ್ಥಳದಲ್ಲಿ ಇಲ್ಲವೇ, 40,000 ಲೀಟರ್ ಅಥವಾ ಅದಕ್ಕಿಂತ ಹೆಚ್ಚಿನ ನೀರು ಬಳಸುವ, ಇಲ್ಲವೇ ನಿತ್ಯ 100 ಕೆ.ಜಿ ಅಥವಾ ಅದಕ್ಕಿಂತ ಹೆಚ್ಚು ಘನತ್ಯಾಜ್ಯ ಉದ್ಪಾದಿಸುವ ಸಂಸ್ಥೆಗಳು / ಘಟಕಗಳನ್ನು ಬೃಹತ್ ಘನ ತ್ಯಾಜ್ಯ ಉದ್ಪಾದಕರು ಎಂದು ಪರಿಗಣಿಸಲಾಗುತ್ತದೆ.</p><p>ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಸಾರ್ವಜನಿಕ ವಲಯದ ಸಂಸ್ಥೆಗಳು, ಸಂಘ–ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು, ವಸತಿ ಸಂಘಟನೆಗಳು ಇದರ ವ್ಯಾಪ್ತಿಗೆ ಬರುತ್ತವೆ.</p><p>ಈ ಸಂಸ್ಥೆಗಳು ತಮ್ಮಲ್ಲಿ ಸೃಷ್ಟಿಯಾಗುವ ತಾಜ್ಯವನ್ನು ನಿಯಮಾನುಸಾರ, ಪರಿಸರಕ್ಕೆ ಹಾನಿಯಾಗದಂತೆ ಸಂಗ್ರಹಿಸಿ, ಸಾಗಿಸಿ, ಸಂಸ್ಕರಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕಿದೆ. ಸರ್ಕಾರದ ಈ ಕ್ರಮವು, ಸ್ಥಳೀಯ ಸಂಸ್ಥೆಗಳ ಮೇಲಿನ ಹೊರೆಯನ್ನು ತಗ್ಗಿಸಲಿದ್ದು, ತ್ಯಾಜ್ಯ ವಿಕೇಂದ್ರೀಕರಣವನ್ನು ಉತ್ತೇಜಿಸಲಿದೆ ಎಂದು ನಿರೀಕ್ಷಿಸಲಾಗಿದೆ.</p><p>ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವ ಅವಕಾಶ ಸ್ಥಳೀಯ ಸಂಸ್ಥೆಗಳ ಬೈಲಾಗಳಲ್ಲಿದೆ.</p><p>'ಪರಿಷ್ಕೃತ ನಿಯಮಗಳು ಪರಿಣಾಮಕಾರಿ ಘನ ತ್ಯಾಜ್ಯ ವಿಂಗಡಣೆ ಮತ್ತು ನಿರ್ವಹಣೆಗೆ ಒತ್ತು ನೀಡುತ್ತವೆ' ಎಂದು ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರಿ ಪ್ರಮಾಣದಲ್ಲಿ ಘನ ತ್ಯಾಜ್ಯ ಸೃಷ್ಟಿಯಾಗುವ ಸಂಘ–ಸಂಸ್ಥೆಗಳು ಕಸವನ್ನು ನಾಲ್ಕು ಹಂತಗಳಲ್ಲಿ ಬೇರ್ಪಡಿಸುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರವು ಬುಧವಾರ ಹೊಸ ನಿಯಮಗಳನ್ನು ಪ್ರಕಟಿಸಿದೆ.</p><p>ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ ತ್ಯಾಜ್ಯ ಹಾಗೂ ವಿಶೇಷ ಕಾಳಜಿಯ ತ್ಯಾಜ್ಯ ಎಂದು ವರ್ಗೀಕರಿಸಲಾಗಿದೆ.</p><p>ಹೊಸ ನಿಯಮಗಳು ಏಪ್ರಿಲ್ 1ರಿಂದ ಜಾರಿಗೆ ಬರಲಿವೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಬುಧವಾರ ತಿಳಿಸಿದ್ದಾರೆ.</p><p>ಹೊಸ ನಿಯಮಗಳ ಪ್ರಕಾರ, ಸುಮಾರು 20,000 ಚದರ ಮೀಟರ್ ಅಥವಾ ಅದಕ್ಕಿಂತ ಹೆಚ್ಚಿನ ಸ್ಥಳದಲ್ಲಿ ಇಲ್ಲವೇ, 40,000 ಲೀಟರ್ ಅಥವಾ ಅದಕ್ಕಿಂತ ಹೆಚ್ಚಿನ ನೀರು ಬಳಸುವ, ಇಲ್ಲವೇ ನಿತ್ಯ 100 ಕೆ.ಜಿ ಅಥವಾ ಅದಕ್ಕಿಂತ ಹೆಚ್ಚು ಘನತ್ಯಾಜ್ಯ ಉದ್ಪಾದಿಸುವ ಸಂಸ್ಥೆಗಳು / ಘಟಕಗಳನ್ನು ಬೃಹತ್ ಘನ ತ್ಯಾಜ್ಯ ಉದ್ಪಾದಕರು ಎಂದು ಪರಿಗಣಿಸಲಾಗುತ್ತದೆ.</p><p>ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ಸಾರ್ವಜನಿಕ ವಲಯದ ಸಂಸ್ಥೆಗಳು, ಸಂಘ–ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು, ವಸತಿ ಸಂಘಟನೆಗಳು ಇದರ ವ್ಯಾಪ್ತಿಗೆ ಬರುತ್ತವೆ.</p><p>ಈ ಸಂಸ್ಥೆಗಳು ತಮ್ಮಲ್ಲಿ ಸೃಷ್ಟಿಯಾಗುವ ತಾಜ್ಯವನ್ನು ನಿಯಮಾನುಸಾರ, ಪರಿಸರಕ್ಕೆ ಹಾನಿಯಾಗದಂತೆ ಸಂಗ್ರಹಿಸಿ, ಸಾಗಿಸಿ, ಸಂಸ್ಕರಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕಿದೆ. ಸರ್ಕಾರದ ಈ ಕ್ರಮವು, ಸ್ಥಳೀಯ ಸಂಸ್ಥೆಗಳ ಮೇಲಿನ ಹೊರೆಯನ್ನು ತಗ್ಗಿಸಲಿದ್ದು, ತ್ಯಾಜ್ಯ ವಿಕೇಂದ್ರೀಕರಣವನ್ನು ಉತ್ತೇಜಿಸಲಿದೆ ಎಂದು ನಿರೀಕ್ಷಿಸಲಾಗಿದೆ.</p><p>ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವ ಅವಕಾಶ ಸ್ಥಳೀಯ ಸಂಸ್ಥೆಗಳ ಬೈಲಾಗಳಲ್ಲಿದೆ.</p><p>'ಪರಿಷ್ಕೃತ ನಿಯಮಗಳು ಪರಿಣಾಮಕಾರಿ ಘನ ತ್ಯಾಜ್ಯ ವಿಂಗಡಣೆ ಮತ್ತು ನಿರ್ವಹಣೆಗೆ ಒತ್ತು ನೀಡುತ್ತವೆ' ಎಂದು ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>