<p><strong>ನವದೆಹಲಿ</strong>: ಮುಂದಿನ ಎರಡು ತಿಂಗಳಲ್ಲಿ ಭಾರತ ಮತ್ತು ಅಮೆರಿಕದ ನಡುವೆ ವಾಣಿಜ್ಯ ಒಪ್ಪಂದ ಅಂತಿಮಗೊಳ್ಳುವ ನಿರೀಕ್ಷೆ ಇದೆ, ಶೇಕಡ 25ರಷ್ಟು ಇರುವ ದಂಡ ಸುಂಕವನ್ನು ಕೈಬಿಡುವ ಸಾಧ್ಯತೆ ಇದೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಹೇಳಿದ್ದಾರೆ.</p><p>ಅಲ್ಲದೆ, ಶೇ 25ರಷ್ಟು ಇರುವ ಪ್ರತಿಸುಂಕವನ್ನು ಶೇ 10–15ಕ್ಕೆ ಇಳಿಕೆ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ. ‘ಶೇ 25ರಷ್ಟು ಇರುವ ದಂಡ ಸುಂಕದ ವಿಚಾರವು ಮುಂದಿನ ಎರಡು ತಿಂಗಳಲ್ಲಿ ಇತ್ಯರ್ಥ ಕಾಣುತ್ತದೆ ಎಂಬುದು ನನ್ನ ವೈಯಕ್ತಿಕ ವಿಶ್ವಾಸ’ ಎಂದು ಅವರು ಕೋಲ್ಕತ್ತದಲ್ಲಿ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.</p><p>ವಾಣಿಜ್ಯ ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕದ ಅಧಿಕಾರಿಗಳು ಭಾರತದ ಪ್ರತಿನಿಧಿಗಳನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿದ್ದಾರೆ. </p><p>ರಷ್ಯಾದಿಂದ ಕಚ್ಚಾ ತೈಲ ಖರೀದಿಸುತ್ತಿರುವ ಕಾರಣಕ್ಕೆ ಅಮೆರಿಕವು ಭಾರತದ ಸರಕುಗಳ ಮೇಲೆ ಶೇ 25ರಷ್ಟು ಹೆಚ್ಚುವರಿ ದಂಡ ತೆರಿಗೆ ವಿಧಿಸಿದೆ. ‘ನವೆಂಬರ್ 30ರ ನಂತರದಲ್ಲಿ ಈ ಹೆಚ್ಚುವರಿ ತೆರಿಗೆಯು ಇರುವುದಿಲ್ಲ ಎಂಬುದು ನನ್ನ ನಂಬಿಕೆ’ ಎಂದು ನಾಗೇಶ್ವರನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂದಿನ ಎರಡು ತಿಂಗಳಲ್ಲಿ ಭಾರತ ಮತ್ತು ಅಮೆರಿಕದ ನಡುವೆ ವಾಣಿಜ್ಯ ಒಪ್ಪಂದ ಅಂತಿಮಗೊಳ್ಳುವ ನಿರೀಕ್ಷೆ ಇದೆ, ಶೇಕಡ 25ರಷ್ಟು ಇರುವ ದಂಡ ಸುಂಕವನ್ನು ಕೈಬಿಡುವ ಸಾಧ್ಯತೆ ಇದೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಹೇಳಿದ್ದಾರೆ.</p><p>ಅಲ್ಲದೆ, ಶೇ 25ರಷ್ಟು ಇರುವ ಪ್ರತಿಸುಂಕವನ್ನು ಶೇ 10–15ಕ್ಕೆ ಇಳಿಕೆ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ. ‘ಶೇ 25ರಷ್ಟು ಇರುವ ದಂಡ ಸುಂಕದ ವಿಚಾರವು ಮುಂದಿನ ಎರಡು ತಿಂಗಳಲ್ಲಿ ಇತ್ಯರ್ಥ ಕಾಣುತ್ತದೆ ಎಂಬುದು ನನ್ನ ವೈಯಕ್ತಿಕ ವಿಶ್ವಾಸ’ ಎಂದು ಅವರು ಕೋಲ್ಕತ್ತದಲ್ಲಿ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.</p><p>ವಾಣಿಜ್ಯ ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕದ ಅಧಿಕಾರಿಗಳು ಭಾರತದ ಪ್ರತಿನಿಧಿಗಳನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿದ್ದಾರೆ. </p><p>ರಷ್ಯಾದಿಂದ ಕಚ್ಚಾ ತೈಲ ಖರೀದಿಸುತ್ತಿರುವ ಕಾರಣಕ್ಕೆ ಅಮೆರಿಕವು ಭಾರತದ ಸರಕುಗಳ ಮೇಲೆ ಶೇ 25ರಷ್ಟು ಹೆಚ್ಚುವರಿ ದಂಡ ತೆರಿಗೆ ವಿಧಿಸಿದೆ. ‘ನವೆಂಬರ್ 30ರ ನಂತರದಲ್ಲಿ ಈ ಹೆಚ್ಚುವರಿ ತೆರಿಗೆಯು ಇರುವುದಿಲ್ಲ ಎಂಬುದು ನನ್ನ ನಂಬಿಕೆ’ ಎಂದು ನಾಗೇಶ್ವರನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>