<p><strong>ಮುಂಬೈ:</strong> ‘ಪಕ್ಷಪಾತ ಧೋರಣೆ ಹಾಗೂ ಪ್ರಾಬಲ್ಯ ಮೆರೆಯುವ ಪ್ರವೃತ್ತಿ ಹೊಂದಿರುವ ಕೆಲವು ಬೇಜವಾಬ್ದಾರಿ ರಾಷ್ಟ್ರಗಳು ವಿಶ್ವಸಂಸ್ಥೆಯ ಕಡಲ ಕಾನೂನನ್ನು (ಯುಎನ್ಸಿಎಲ್ಒಎಸ್) ತಪ್ಪಾಗಿ ವ್ಯಾಖ್ಯಾನಿಸುತ್ತಿವೆ’ ಎಂದು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಭಾನುವಾರ ಟೀಕಿಸಿದರು.</p>.<p>ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ ‘ಐಎನ್ಎಸ್ ವಿಶಾಖಪಟ್ಟಣಂ’ ಅನ್ನು ನೌಕಾಪಡೆಗೆ ಸೇರ್ಪಡೆಗೊಳಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರೋಕ್ಷವಾಗಿ ಚೀನಾ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>‘ಕೆಲವು ರಾಷ್ಟ್ರಗಳು ತಮಗೆ ತೋಚಿದಂತೆ ವ್ಯಾಖ್ಯಾನ ಮಾಡುವ ಮೂಲಕ ಕಡಲ ಕಾನೂನನ್ನು ದುರ್ಬಲಗೊಳಿಸುತ್ತಿರುವುದು ಕಳವಳಕಾರಿ’ ಎಂದರು.</p>.<p>‘ಕಡಲ ರಕ್ಷಣೆ ವಿಷಯದಲ್ಲಿ ಜವಾಬ್ದಾರಿ ಭಾಗಿದಾರ ದೇಶವಾಗಿರುವ ಭಾರತ, ಒಮ್ಮತದ ತಳಹದಿ ಮೇಲೆ ರೂಪಿಸಲಾಗಿರುವ ತತ್ವಗಳನ್ನು ಬೆಂಬಲಿಸುತ್ತದೆ. ಶಾಂತಿಯುತವಾದ ಹಾಗೂ ನಿಯಮಗಳಿಗೆ ಬದ್ಧವಾಗಿರುವ ಕಡಲ ರಕ್ಷಣಾ ವ್ಯವಸ್ಥೆಯನ್ನು ಬಯಸುತ್ತದೆ’ ಎಂದು ಹೇಳಿದರು.</p>.<p>‘ಇಂಡೊ–ಪೆಸಿಫಿಕ್ ಪ್ರದೇಶದಲ್ಲಿ ಮುಕ್ತ ವ್ಯಾಪಾರ, ನೌಕಾಯಾನದ ಸ್ವಾತಂತ್ರ್ಯ ಹಾಗೂ ಈ ಪ್ರದೇಶದ ಎಲ್ಲ ಭಾಗಿದಾರ ರಾಷ್ಟ್ರಗಳ ಹಿತಾಸಕ್ತಿ ರಕ್ಷಣೆಗೆ ಭಾರತ ಬೆಂಬಲ ನೀಡುತ್ತದೆ’ ಎಂದು ಅವರು ಹೇಳಿದರು.</p>.<p>ದಕ್ಷಿಣ ಚೀನಾ ಸಮುದ್ರವು ಸಂವಹನ ವ್ಯವಸ್ಥೆ ಹೊಂದಿರುವ ಪ್ರಮುಖ ಸಾಗರ ಮಾರ್ಗವಾಗಿದ್ದು, ಹೈಡ್ರೋಕಾರ್ಬನ್ಗಳಿಂದ ಸಂಪದ್ಭರಿತವಾಗಿದೆ. ಹೀಗಾಗಿ ಈ ಪ್ರದೇಶದಲ್ಲಿ ಚೀನಾ ತನ್ನ ಮಿಲಿಟರಿ ಪ್ರಾಬಲ್ಯವನ್ನು ಹೆಚ್ಚಿಸುತ್ತಿದೆ. ಇದು ಇಂಡೊ–ಪೆಸಿಫಿಕ್ ಪ್ರದೇಶದ ರಾಷ್ಟ್ರಗಳ ಕಳವಳಕ್ಕೆ ಕಾರಣವಾಗಿದೆ. ಚೀನಾದ ಈ ನಡೆಗೆ ಜಾಗತಿಕವಾಗಿಯೂ ಭಾರಿ ಟೀಕೆ ವ್ಯಕ್ತವಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಪಕ್ಷಪಾತ ಧೋರಣೆ ಹಾಗೂ ಪ್ರಾಬಲ್ಯ ಮೆರೆಯುವ ಪ್ರವೃತ್ತಿ ಹೊಂದಿರುವ ಕೆಲವು ಬೇಜವಾಬ್ದಾರಿ ರಾಷ್ಟ್ರಗಳು ವಿಶ್ವಸಂಸ್ಥೆಯ ಕಡಲ ಕಾನೂನನ್ನು (ಯುಎನ್ಸಿಎಲ್ಒಎಸ್) ತಪ್ಪಾಗಿ ವ್ಯಾಖ್ಯಾನಿಸುತ್ತಿವೆ’ ಎಂದು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಭಾನುವಾರ ಟೀಕಿಸಿದರು.</p>.<p>ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ ‘ಐಎನ್ಎಸ್ ವಿಶಾಖಪಟ್ಟಣಂ’ ಅನ್ನು ನೌಕಾಪಡೆಗೆ ಸೇರ್ಪಡೆಗೊಳಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರೋಕ್ಷವಾಗಿ ಚೀನಾ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>‘ಕೆಲವು ರಾಷ್ಟ್ರಗಳು ತಮಗೆ ತೋಚಿದಂತೆ ವ್ಯಾಖ್ಯಾನ ಮಾಡುವ ಮೂಲಕ ಕಡಲ ಕಾನೂನನ್ನು ದುರ್ಬಲಗೊಳಿಸುತ್ತಿರುವುದು ಕಳವಳಕಾರಿ’ ಎಂದರು.</p>.<p>‘ಕಡಲ ರಕ್ಷಣೆ ವಿಷಯದಲ್ಲಿ ಜವಾಬ್ದಾರಿ ಭಾಗಿದಾರ ದೇಶವಾಗಿರುವ ಭಾರತ, ಒಮ್ಮತದ ತಳಹದಿ ಮೇಲೆ ರೂಪಿಸಲಾಗಿರುವ ತತ್ವಗಳನ್ನು ಬೆಂಬಲಿಸುತ್ತದೆ. ಶಾಂತಿಯುತವಾದ ಹಾಗೂ ನಿಯಮಗಳಿಗೆ ಬದ್ಧವಾಗಿರುವ ಕಡಲ ರಕ್ಷಣಾ ವ್ಯವಸ್ಥೆಯನ್ನು ಬಯಸುತ್ತದೆ’ ಎಂದು ಹೇಳಿದರು.</p>.<p>‘ಇಂಡೊ–ಪೆಸಿಫಿಕ್ ಪ್ರದೇಶದಲ್ಲಿ ಮುಕ್ತ ವ್ಯಾಪಾರ, ನೌಕಾಯಾನದ ಸ್ವಾತಂತ್ರ್ಯ ಹಾಗೂ ಈ ಪ್ರದೇಶದ ಎಲ್ಲ ಭಾಗಿದಾರ ರಾಷ್ಟ್ರಗಳ ಹಿತಾಸಕ್ತಿ ರಕ್ಷಣೆಗೆ ಭಾರತ ಬೆಂಬಲ ನೀಡುತ್ತದೆ’ ಎಂದು ಅವರು ಹೇಳಿದರು.</p>.<p>ದಕ್ಷಿಣ ಚೀನಾ ಸಮುದ್ರವು ಸಂವಹನ ವ್ಯವಸ್ಥೆ ಹೊಂದಿರುವ ಪ್ರಮುಖ ಸಾಗರ ಮಾರ್ಗವಾಗಿದ್ದು, ಹೈಡ್ರೋಕಾರ್ಬನ್ಗಳಿಂದ ಸಂಪದ್ಭರಿತವಾಗಿದೆ. ಹೀಗಾಗಿ ಈ ಪ್ರದೇಶದಲ್ಲಿ ಚೀನಾ ತನ್ನ ಮಿಲಿಟರಿ ಪ್ರಾಬಲ್ಯವನ್ನು ಹೆಚ್ಚಿಸುತ್ತಿದೆ. ಇದು ಇಂಡೊ–ಪೆಸಿಫಿಕ್ ಪ್ರದೇಶದ ರಾಷ್ಟ್ರಗಳ ಕಳವಳಕ್ಕೆ ಕಾರಣವಾಗಿದೆ. ಚೀನಾದ ಈ ನಡೆಗೆ ಜಾಗತಿಕವಾಗಿಯೂ ಭಾರಿ ಟೀಕೆ ವ್ಯಕ್ತವಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>