ಕಾರ್ಯಾಚರಣೆಯ ವೇಳೆ ನಕ್ಸಲರು ಮನಬಂದಂತೆ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಮೃತಪಟ್ಟಿದ್ದಾರೆ. ಮೃತರಲ್ಲಿ ಒಬ್ಬನನ್ನು ಪೆರಿಮಲಿ ದಳದ ನಾಯಕ ವಾಸು ಎಂದು ಗುರುತಿಸಲಾಗಿದೆ. ಎಕೆ–47 ರೈಫೆಲ್, ಎಎನ್ಎಸ್ಎಸ್ ರೈಫೆಲ್, ನಕ್ಸಲರ ಬರವಣಿಗೆ ಸೇರಿದಂತೆ ಕೆಲವು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೀಲೋತ್ಪಾಲ್ ತಿಳಿಸಿದ್ದಾರೆ.