<p><strong>ವಯನಾಡ್</strong>: ವಯನಾಡ್ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿರುವ ಕೆಲವು ಪ್ರದೇಶಗಳನ್ನು ಶಾಶ್ವತವಾಗಿ ವಾಸಯೋಗ್ಯವಲ್ಲ ಎಂದು ಘೋಷಿಸುವ ಸಾಧ್ಯತೆಗಳಿವೆ.</p>.<p>ಜುಲೈ 30ರಂದು ಸಂಭವಿಸಿದ್ದ ಭೀಕರ ಭೂಕುಸಿತದಲ್ಲಿ ಬದುಕುಳಿದ ಹಲವರು ಆಘಾತಕ್ಕೊಳಗಾಗಿದ್ದು, ತಮ್ಮ ಮನೆಗಳಿಗೆ ಮರಳಲು ಹಿಂಜರಿಯುತ್ತಿದ್ದಾರೆ. ಅವರು ಪರ್ಯಾಯ ವ್ಯವಸ್ಥೆಯ ನಿರೀಕ್ಷೆಯಲ್ಲಿದ್ದಾರೆ.</p>.<p>ತೀವ್ರವಾಗಿ ತತ್ತರಿಸಿರುವ ಪುಂಜಿರಿಮಟ್ಟಮ್, ಚೂರಲ್ಮಲ ಮತ್ತು ಮುಂಡಕ್ಕೈ ಗ್ರಾಮಗಳಲ್ಲಿ ಪುನವರ್ಸತಿ ಕಲ್ಪಿಸಲು ಪ್ರಯತ್ನಿಸುತ್ತಿರುವ ಅಧಿಕಾರಿಗಳು, ‘ಪುಂಜಿರಿಮಟ್ಟಮ್ ಮತ್ತು ಚೂರಲ್ಮಲದಲ್ಲಿ ಭವಿಷ್ಯದಲ್ಲಿ ಜನರು ವಾಸವಿರಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಗಾಯತ್ರಿ ನದಿಯಲ್ಲಿ ದೊಡ್ಡ ದೊಡ್ಡ ಬಂಡೆಗಳು, ಮರಗಳು ಕೊಚ್ಚಿಬಂದ ಪರಿಣಾಮ ಕೆಲ ಪ್ರದೇಶಗಳಲ್ಲಿ ಈ ಹಿಂದೆ ಇದ್ದ ಭೌಗೋಳಿಕ ಸಂರಚನೆಯು ಸಂಪೂರ್ಣವಾಗಿ ಬದಲಾಗಿದೆ. ಮನೆ, ಶಾಲೆ. ದೇವಸ್ಥಾನ ಮತ್ತು ಇತರ ಸಾರ್ವಜನಿಕ ಕಟ್ಟಡಗಳು ನೆಲಸಮವಾಗಿವೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ನಮ್ಮ ಮನೆ, ಅಂಗಡಿ ಎಲ್ಲವನ್ನು ಕಳೆದುಕೊಂಡಿದ್ದೇವೆ. ಮತ್ತೆ ಅಲ್ಲಿ ಹೋಗಿ ಜೀವನ ನಡೆಸಲು ಸಾಧ್ಯವಿಲ್ಲ. ಸರ್ಕಾರ ನಮಗೆ ಸಹಾಯ ಮಾಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ’ ಎಂದು ನಿರಾಶ್ರಿತರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಯನಾಡ್</strong>: ವಯನಾಡ್ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿರುವ ಕೆಲವು ಪ್ರದೇಶಗಳನ್ನು ಶಾಶ್ವತವಾಗಿ ವಾಸಯೋಗ್ಯವಲ್ಲ ಎಂದು ಘೋಷಿಸುವ ಸಾಧ್ಯತೆಗಳಿವೆ.</p>.<p>ಜುಲೈ 30ರಂದು ಸಂಭವಿಸಿದ್ದ ಭೀಕರ ಭೂಕುಸಿತದಲ್ಲಿ ಬದುಕುಳಿದ ಹಲವರು ಆಘಾತಕ್ಕೊಳಗಾಗಿದ್ದು, ತಮ್ಮ ಮನೆಗಳಿಗೆ ಮರಳಲು ಹಿಂಜರಿಯುತ್ತಿದ್ದಾರೆ. ಅವರು ಪರ್ಯಾಯ ವ್ಯವಸ್ಥೆಯ ನಿರೀಕ್ಷೆಯಲ್ಲಿದ್ದಾರೆ.</p>.<p>ತೀವ್ರವಾಗಿ ತತ್ತರಿಸಿರುವ ಪುಂಜಿರಿಮಟ್ಟಮ್, ಚೂರಲ್ಮಲ ಮತ್ತು ಮುಂಡಕ್ಕೈ ಗ್ರಾಮಗಳಲ್ಲಿ ಪುನವರ್ಸತಿ ಕಲ್ಪಿಸಲು ಪ್ರಯತ್ನಿಸುತ್ತಿರುವ ಅಧಿಕಾರಿಗಳು, ‘ಪುಂಜಿರಿಮಟ್ಟಮ್ ಮತ್ತು ಚೂರಲ್ಮಲದಲ್ಲಿ ಭವಿಷ್ಯದಲ್ಲಿ ಜನರು ವಾಸವಿರಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಗಾಯತ್ರಿ ನದಿಯಲ್ಲಿ ದೊಡ್ಡ ದೊಡ್ಡ ಬಂಡೆಗಳು, ಮರಗಳು ಕೊಚ್ಚಿಬಂದ ಪರಿಣಾಮ ಕೆಲ ಪ್ರದೇಶಗಳಲ್ಲಿ ಈ ಹಿಂದೆ ಇದ್ದ ಭೌಗೋಳಿಕ ಸಂರಚನೆಯು ಸಂಪೂರ್ಣವಾಗಿ ಬದಲಾಗಿದೆ. ಮನೆ, ಶಾಲೆ. ದೇವಸ್ಥಾನ ಮತ್ತು ಇತರ ಸಾರ್ವಜನಿಕ ಕಟ್ಟಡಗಳು ನೆಲಸಮವಾಗಿವೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ನಮ್ಮ ಮನೆ, ಅಂಗಡಿ ಎಲ್ಲವನ್ನು ಕಳೆದುಕೊಂಡಿದ್ದೇವೆ. ಮತ್ತೆ ಅಲ್ಲಿ ಹೋಗಿ ಜೀವನ ನಡೆಸಲು ಸಾಧ್ಯವಿಲ್ಲ. ಸರ್ಕಾರ ನಮಗೆ ಸಹಾಯ ಮಾಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ’ ಎಂದು ನಿರಾಶ್ರಿತರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>