<p><strong>ನವದೆಹಲಿ:</strong> ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 'ಕೇಂದ್ರ ಸರ್ಕಾರವು ರೈತರೆಡೆಗೆ ಸೂಕ್ಷ್ಮ ಸಂವೇದನೆಯನ್ನು ಹೊಂದಿಲ್ಲ ಮತ್ತು ಪ್ರಜಾಸತ್ತಾತ್ಮಕವಲ್ಲದ ರೀತಿಯಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದೆ' ಎಂದಿದ್ದಾರೆ.</p>.<p>ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಸೋನಿಯಾ ಗಾಂಧಿ ಮಾತನಾಡಿದರು. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮೃತರಾಗಿರುವ 700 ರೈತರಿಗೆ ನಮನ ಸಲ್ಲಿಸಿದರು. ಸಭೆಯಲ್ಲಿ ರಾಹುಲ್ ಗಾಂಧಿ ಕೂಡ ಇದ್ದರು.</p>.<p>ಎಂಎಸ್ಪಿಗೆ ಕಾನೂನಿನ ಖಾತರಿ ಬೇಕೆನ್ನುವ ರೈತರ ಬೇಡಿಕೆಗೆ ಬೇಷರತ್ ಬೆಂಬಲವನ್ನು ಮುಂದುವರಿಸಿರುವ ಅವರು, ಪ್ರತಿಭಟನೆ ವೇಳೆ ಮೃತಪಟ್ಟ ರೈತರಿಗೆ ಪಕ್ಷದ ಸದಸ್ಯರು ಗೌರವ ಸೂಚಿಸಬೇಕು ಎಂದು ಕರೆ ನೀಡಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/we-are-hopeful-progressing-towards-resolution-farmer-leaders-after-skm-committee-meeting-890913.html" itemprop="url">ಸರ್ಕಾರದೊಂದಿಗೆ ರೈತ ಸಂಘಟನೆಗಳ ಮಾತುಕತೆ; ಆಶಾದಾಯಕವಾಗಿದ್ದೇವೆ ಎಂದ ಎಸ್ಕೆಎಂ </a></p>.<p>ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ಅಗತ್ಯ ಪರಿಹಾರ ನೀಡುವಂತೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಈ ಮಧ್ಯೆ ಪಕ್ಷದ ಸಂಸದ ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ ಲೋಕಸಭೆಯಲ್ಲಿ ಪ್ರತಿಭಟನೆ ವೇಳೆ ಮೃತಪಟ್ಟಿದ್ದ ರೈತರ ಮಾಹಿತಿಯನ್ನು ಮುಂದಿಟ್ಟಿದ್ದರು.</p>.<p>'ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ವಿಸ್ತೃತ ಚರ್ಚೆ ನಡೆಯಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿದ್ದರೂ ಕೇಂದ್ರ ಸರ್ಕಾರ ಅದನ್ನು ಕಡೆಗಣಿಸುತ್ತಿದೆ' ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.</p>.<p>'ರಾಜ್ಯಸಭೆ ಕಲಾಪದಿಂದ 12 ಮಂದಿ ಸದಸ್ಯರನ್ನು ಅಮಾನತು ಮಾಡಿರುವ ವಿಚಾರವು ' ಹಿಂದೆದೂ ಕಂಡಿಲ್ಲದ ಮತ್ತು ಒಪ್ಪಿಕೊಳ್ಳಲಾಗದ್ದು' ಎಂದು ಟೀಕಿಸಿರುವ ಅವರು, ಪಕ್ಷವು ಅವರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ. ಕೇಂದ್ರವು ಕೂಡಲೇ ಅವರ ಅಮಾನತು ಆದೇಶವನ್ನು ಹಿಂಪಡೆಯಬೇಕು' ಎಂದು ಒತ್ತಾಯಿಸಿದ್ದಾರೆ.</p>.<p>'ತನ್ನ ಆರ್ಥಿಕ ನಷ್ಟವನ್ನು ತುಂಬಿಕೊಳ್ಳಲು ದೇಶದ ಸಾರ್ವಜನಿಕ ಆಸ್ತಿಯನ್ನು ಮಾರುತ್ತಿರುವ ಮೋದಿ ನೇತೃತ್ವದ ಸರ್ಕಾರವು ಆರೋಪಿ ಸ್ಥಾನದಲ್ಲಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 'ಕೇಂದ್ರ ಸರ್ಕಾರವು ರೈತರೆಡೆಗೆ ಸೂಕ್ಷ್ಮ ಸಂವೇದನೆಯನ್ನು ಹೊಂದಿಲ್ಲ ಮತ್ತು ಪ್ರಜಾಸತ್ತಾತ್ಮಕವಲ್ಲದ ರೀತಿಯಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದೆ' ಎಂದಿದ್ದಾರೆ.</p>.<p>ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಸೋನಿಯಾ ಗಾಂಧಿ ಮಾತನಾಡಿದರು. ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮೃತರಾಗಿರುವ 700 ರೈತರಿಗೆ ನಮನ ಸಲ್ಲಿಸಿದರು. ಸಭೆಯಲ್ಲಿ ರಾಹುಲ್ ಗಾಂಧಿ ಕೂಡ ಇದ್ದರು.</p>.<p>ಎಂಎಸ್ಪಿಗೆ ಕಾನೂನಿನ ಖಾತರಿ ಬೇಕೆನ್ನುವ ರೈತರ ಬೇಡಿಕೆಗೆ ಬೇಷರತ್ ಬೆಂಬಲವನ್ನು ಮುಂದುವರಿಸಿರುವ ಅವರು, ಪ್ರತಿಭಟನೆ ವೇಳೆ ಮೃತಪಟ್ಟ ರೈತರಿಗೆ ಪಕ್ಷದ ಸದಸ್ಯರು ಗೌರವ ಸೂಚಿಸಬೇಕು ಎಂದು ಕರೆ ನೀಡಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/we-are-hopeful-progressing-towards-resolution-farmer-leaders-after-skm-committee-meeting-890913.html" itemprop="url">ಸರ್ಕಾರದೊಂದಿಗೆ ರೈತ ಸಂಘಟನೆಗಳ ಮಾತುಕತೆ; ಆಶಾದಾಯಕವಾಗಿದ್ದೇವೆ ಎಂದ ಎಸ್ಕೆಎಂ </a></p>.<p>ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ಅಗತ್ಯ ಪರಿಹಾರ ನೀಡುವಂತೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಈ ಮಧ್ಯೆ ಪಕ್ಷದ ಸಂಸದ ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ ಲೋಕಸಭೆಯಲ್ಲಿ ಪ್ರತಿಭಟನೆ ವೇಳೆ ಮೃತಪಟ್ಟಿದ್ದ ರೈತರ ಮಾಹಿತಿಯನ್ನು ಮುಂದಿಟ್ಟಿದ್ದರು.</p>.<p>'ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ವಿಸ್ತೃತ ಚರ್ಚೆ ನಡೆಯಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿದ್ದರೂ ಕೇಂದ್ರ ಸರ್ಕಾರ ಅದನ್ನು ಕಡೆಗಣಿಸುತ್ತಿದೆ' ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.</p>.<p>'ರಾಜ್ಯಸಭೆ ಕಲಾಪದಿಂದ 12 ಮಂದಿ ಸದಸ್ಯರನ್ನು ಅಮಾನತು ಮಾಡಿರುವ ವಿಚಾರವು ' ಹಿಂದೆದೂ ಕಂಡಿಲ್ಲದ ಮತ್ತು ಒಪ್ಪಿಕೊಳ್ಳಲಾಗದ್ದು' ಎಂದು ಟೀಕಿಸಿರುವ ಅವರು, ಪಕ್ಷವು ಅವರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ. ಕೇಂದ್ರವು ಕೂಡಲೇ ಅವರ ಅಮಾನತು ಆದೇಶವನ್ನು ಹಿಂಪಡೆಯಬೇಕು' ಎಂದು ಒತ್ತಾಯಿಸಿದ್ದಾರೆ.</p>.<p>'ತನ್ನ ಆರ್ಥಿಕ ನಷ್ಟವನ್ನು ತುಂಬಿಕೊಳ್ಳಲು ದೇಶದ ಸಾರ್ವಜನಿಕ ಆಸ್ತಿಯನ್ನು ಮಾರುತ್ತಿರುವ ಮೋದಿ ನೇತೃತ್ವದ ಸರ್ಕಾರವು ಆರೋಪಿ ಸ್ಥಾನದಲ್ಲಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>