‘ತೆಲಂಗಾಣದಲ್ಲಿರುವ ಭೂಮಾಲೀಕರ ಸರ್ಕಾರವನ್ನು ಜನರ ಸರ್ಕಾರವನ್ನಾಗಿ ನಾವೆಲ್ಲರೂ ಪರಿವರ್ತಿಸಬೇಕೆಂದು ನಾನು ಆಶಿಸುತ್ತೇನೆ. ರಾಜ್ಯದಲ್ಲಿ ಸತ್ಯ ಮತ್ತು ಪ್ರಾಮಾಣಿಕ ಸರ್ಕಾರವನ್ನು ತರುವ ಮೂಲಕ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ’ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.
‘ಸೋನಿಯಾ ಅಮ್ಮ ಎಂದು ಕರೆಯುವ ಮೂಲಕ ನೀವು ನನಗೆ ಬಹಳ ಗೌರವವನ್ನು ನೀಡಿದ್ದೀರಿ. ನನ್ನನ್ನು ತಾಯಿಯ ರೀತಿ ಕಾಣುವ ಮೂಲಕ ಅಪಾರ ಪ್ರೀತಿ ಮತ್ತು ಗೌರವವನ್ನು ತೋರಿಸಿದ್ದೀರಿ. ಅದಕ್ಕೆ ನಾನು ಯಾವಗಲೂ ಋಣಿಯಾಗಿರುತ್ತೇನೆ’ ಎಂದು ಸೋನಿಯಾ ಹೇಳಿದ್ದಾರೆ.
‘ತೆಲಂಗಾಣದ ಸಹೋದರಿಯರು, ಸಹೋದರರು, ತಾಯಂದಿರು, ಮಕ್ಕಳು ಎಲ್ಲರು ತಮ್ಮ ಅಧಿಕಾರವನ್ನು ಬಳಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಬದಲಾವಣೆಯನ್ನು ತರಬೇಕೆಂದು ನಾನು ಕೇಳಿಕೊಳ್ಳುತ್ತೇನೆ. ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಎಂದು ಸೋನಿಯಾ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.