<p><strong>ನವದೆಹಲಿ:</strong> ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ವೇಗದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು, ಕೋವಿಡ್ನ ಮೂರನೇ ಅಲೆ ಎದುರಿಸಲು ಅಗತ್ಯ ಸಿದ್ಧತೆಯಾಗಬೇಕು ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೂ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ನಿತ್ಯ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಬೇಕು. ಈ ವರ್ಷಾಂತ್ಯಕ್ಕೆ ಶೇ 75ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡುವಂತಾಗಬೇಕು. ಈ ಸಂಬಂಧ ಲಸಿಕೆ ನೀಡುವ ಪ್ರಕ್ರಿಯೆಯ ವೇಗ ಹೆಚ್ಚಿಸುವಂತೆ ಕೇಂದ್ರ ಸರ್ಕಾರದ ಮೇಲೆ ಪಕ್ಷದ ಕಾರ್ಯಕರ್ತರು ಒತ್ತಡ ಹೇರುವುದನ್ನು ಮುಂದುವರಿಸಬೇಕು‘ ಎಂದು ಕರೆ ನೀಡಿದರು.</p>.<p>‘ಲಸಿಕೆ ಪೂರೈಕೆ ಆಧಾರದ ಮೇಲೆಯೇ ಲಸಿಕೆ ನೀಡಿಕೆ ವೇಗ ಅವಲಂಬಿತವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ನಮ್ಮ ಪಕ್ಷ ಒತ್ತಡ ಹಾಕಿದ್ದರಿಂದಲೇ ಕೇಂದ್ರ ಸರ್ಕಾರ ಲಸಿಕೆ ನೀಡಿಕೆಯ ವೇಗ ಹೆಚ್ಚಿಸಿದೆ. ಆ ಒತ್ತಡ ಹಾಕುವ ಪ್ರಕ್ರಿಯೆ ಮುಂದುವರಿಯಬೇಕು‘ ಎಂದು ಹೇಳಿದರು.</p>.<p>‘ಲಸಿಕೆ ಹಾಕಿಸಿಕೊಳ್ಳಲು ನಡೆಯುತ್ತಿರುವ ನೋಂದಣಿ ವಿಷಯದಲ್ಲೂ ಪಕ್ಷದ ಕಾರ್ಯಕರ್ತರು ಗಮನಹರಿಸಬೇಕು. ಇದರಿಂದ ಲಸಿಕೆ ಹಾಕುವ ವೇಗ ಹೆಚ್ಚಿಸುವ ಜತೆಗೆ, ಲಸಿಕೆ ಹಾಳಾಗುವುದನ್ನೂ ಕಡಿತಗೊಳಿಸಬಹುದು‘ ಎಂದು ಸಲಹೆ ನೀಡಿದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/gujarat-rahul-gandhi-appears-before-surat-court-in-defamation-case-841866.html" target="_blank">ಮಾನಹಾನಿ ಪ್ರಕರಣ: ಸೂರತ್ ನ್ಯಾಯಾಲಯಕ್ಕೆ ಹಾಜರಾದ ರಾಹುಲ್ ಗಾಂಧಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ವೇಗದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು, ಕೋವಿಡ್ನ ಮೂರನೇ ಅಲೆ ಎದುರಿಸಲು ಅಗತ್ಯ ಸಿದ್ಧತೆಯಾಗಬೇಕು ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೂ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ನಿತ್ಯ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಬೇಕು. ಈ ವರ್ಷಾಂತ್ಯಕ್ಕೆ ಶೇ 75ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡುವಂತಾಗಬೇಕು. ಈ ಸಂಬಂಧ ಲಸಿಕೆ ನೀಡುವ ಪ್ರಕ್ರಿಯೆಯ ವೇಗ ಹೆಚ್ಚಿಸುವಂತೆ ಕೇಂದ್ರ ಸರ್ಕಾರದ ಮೇಲೆ ಪಕ್ಷದ ಕಾರ್ಯಕರ್ತರು ಒತ್ತಡ ಹೇರುವುದನ್ನು ಮುಂದುವರಿಸಬೇಕು‘ ಎಂದು ಕರೆ ನೀಡಿದರು.</p>.<p>‘ಲಸಿಕೆ ಪೂರೈಕೆ ಆಧಾರದ ಮೇಲೆಯೇ ಲಸಿಕೆ ನೀಡಿಕೆ ವೇಗ ಅವಲಂಬಿತವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ನಮ್ಮ ಪಕ್ಷ ಒತ್ತಡ ಹಾಕಿದ್ದರಿಂದಲೇ ಕೇಂದ್ರ ಸರ್ಕಾರ ಲಸಿಕೆ ನೀಡಿಕೆಯ ವೇಗ ಹೆಚ್ಚಿಸಿದೆ. ಆ ಒತ್ತಡ ಹಾಕುವ ಪ್ರಕ್ರಿಯೆ ಮುಂದುವರಿಯಬೇಕು‘ ಎಂದು ಹೇಳಿದರು.</p>.<p>‘ಲಸಿಕೆ ಹಾಕಿಸಿಕೊಳ್ಳಲು ನಡೆಯುತ್ತಿರುವ ನೋಂದಣಿ ವಿಷಯದಲ್ಲೂ ಪಕ್ಷದ ಕಾರ್ಯಕರ್ತರು ಗಮನಹರಿಸಬೇಕು. ಇದರಿಂದ ಲಸಿಕೆ ಹಾಕುವ ವೇಗ ಹೆಚ್ಚಿಸುವ ಜತೆಗೆ, ಲಸಿಕೆ ಹಾಳಾಗುವುದನ್ನೂ ಕಡಿತಗೊಳಿಸಬಹುದು‘ ಎಂದು ಸಲಹೆ ನೀಡಿದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/gujarat-rahul-gandhi-appears-before-surat-court-in-defamation-case-841866.html" target="_blank">ಮಾನಹಾನಿ ಪ್ರಕರಣ: ಸೂರತ್ ನ್ಯಾಯಾಲಯಕ್ಕೆ ಹಾಜರಾದ ರಾಹುಲ್ ಗಾಂಧಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>