<p><strong>ನವದೆಹಲಿ</strong>: ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಕುರಿತು ನರೇಂದ್ರ ಮೋದಿ ಸರ್ಕಾರದ ಮೌನವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ತೀವ್ರವಾಗಿ ಟೀಕಿಸಿದ್ದಾರೆ.</p><p>'ದಿ ಇಂಡಿಯನ್ ಎಕ್ಸ್ಪ್ರೆಸ್’ನಲ್ಲಿ ಪ್ರಕಟವಾದ ತಮ್ಮ ಲೇಖನದಲ್ಲಿ, ‘ಈ ವಿಷಯದಲ್ಲಿ ಸರ್ಕಾರದ ‘ಆತಂಕಕಾರಿ’ ಮೌನದ ಕುರಿತು ಬಜೆಟ್ ಅಧಿವೇಶದನ ಎರಡನೇ ಅವಧಿಯಲ್ಲಿ ಮುಕ್ತವಾಗಿ ಚರ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.</p><p>‘ಸರ್ಕಾರದ ಈ ನಡೆಯು ತಟಸ್ಥ ಧೋರಣೆಯಲ್ಲ, ಬದಲಿಗೆ ತಿರಸ್ಕಾರವಾಗಿದೆ. ಇದು ಭಾರತದ ವಿದೇಶಾಂಗ ನೀತಿಯ ದಿಕ್ಕು ಹಾಗೂ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಸಂಶಯಗಳನ್ನು ಮೂಡಿಸಿದೆ’ ಎಂದು ಅವರು ಹೇಳಿದ್ದಾರೆ.</p><p>‘ಸಂಧಾನ ಮಾತುಕತೆಗಳು ನಡೆಯುತ್ತಿರುವ ಮಧ್ಯೆಯೇ ಸಾರ್ವಭೌಮ ದೇಶದ ಮುಖ್ಯಸ್ಥರೊಬ್ಬರ ಹತ್ಯೆಯು ಸಮಕಾಲೀನ ಅಂತರರಾಷ್ಟ್ರೀಯ ಸಂಬಂಧಗಳಲ್ಲಿನ ಗಂಭೀರ ಬಿರುಕನ್ನು ಸೂಚಿಸುತ್ತದೆ. ಈ ಹತ್ಯೆಯನ್ನು ಖಂಡಿಸುವುದರಿಂದ ಭಾರತ ಸರ್ಕಾರ ದೂರ ಉಳಿದಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p><p>‘ಆರಂಭದಲ್ಲಿ, ಅಮೆರಿಕ-ಇಸ್ರೇಲ್ ನಡೆಸಿದ ಬೃಹತ್ ದಾಳಿಯನ್ನು ನಿರ್ಲಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಅದಕ್ಕೂ ಮೊದಲು ನಡೆದ ಘಟನೆಗಳ ಸರಮಾಲೆಯನ್ನು ಪ್ರಸ್ತಾಪಿಸದೆ ಕೇವಲ ಯುಎಇ ಮೇಲಿನ ಇರಾನ್ನ ಪ್ರತೀಕಾರದ ದಾಳಿಯನ್ನು ಖಂಡಿಸುವುದಕ್ಕೆ ಸೀಮಿತರಾದರು‘ ಎಂದು ಕಿಡಿಕಾರಿದ್ದಾರೆ.</p><p>‘ವಿದೇಶಿ ನಾಯಕರೊಬ್ಬರ ಉದ್ದೇಶಿತ ಹತ್ಯೆಯ ಸಂದರ್ಭದಲ್ಲಿ ನಮ್ಮ ದೇಶವು ಅಂತರರಾಷ್ಟ್ರೀಯ ಕಾನೂನಿನ ರಕ್ಷಣೆಗೆ ನಿಲ್ಲದಿದ್ದಾಗ ಅದು ನಮ್ಮ ವಿದೇಶಾಂಗ ನೀತಿಯ ಬಗ್ಗೆ ಗಂಭೀರ ಅನುಮಾನಗಳನ್ನು ಹುಟ್ಟುಹಾಕುತ್ತದೆ’ ಎಂದು ಅವರು ತಮ್ಮ ಲೇಖನದಲ್ಲಿ ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಕುರಿತು ನರೇಂದ್ರ ಮೋದಿ ಸರ್ಕಾರದ ಮೌನವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ತೀವ್ರವಾಗಿ ಟೀಕಿಸಿದ್ದಾರೆ.</p><p>'ದಿ ಇಂಡಿಯನ್ ಎಕ್ಸ್ಪ್ರೆಸ್’ನಲ್ಲಿ ಪ್ರಕಟವಾದ ತಮ್ಮ ಲೇಖನದಲ್ಲಿ, ‘ಈ ವಿಷಯದಲ್ಲಿ ಸರ್ಕಾರದ ‘ಆತಂಕಕಾರಿ’ ಮೌನದ ಕುರಿತು ಬಜೆಟ್ ಅಧಿವೇಶದನ ಎರಡನೇ ಅವಧಿಯಲ್ಲಿ ಮುಕ್ತವಾಗಿ ಚರ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.</p><p>‘ಸರ್ಕಾರದ ಈ ನಡೆಯು ತಟಸ್ಥ ಧೋರಣೆಯಲ್ಲ, ಬದಲಿಗೆ ತಿರಸ್ಕಾರವಾಗಿದೆ. ಇದು ಭಾರತದ ವಿದೇಶಾಂಗ ನೀತಿಯ ದಿಕ್ಕು ಹಾಗೂ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಸಂಶಯಗಳನ್ನು ಮೂಡಿಸಿದೆ’ ಎಂದು ಅವರು ಹೇಳಿದ್ದಾರೆ.</p><p>‘ಸಂಧಾನ ಮಾತುಕತೆಗಳು ನಡೆಯುತ್ತಿರುವ ಮಧ್ಯೆಯೇ ಸಾರ್ವಭೌಮ ದೇಶದ ಮುಖ್ಯಸ್ಥರೊಬ್ಬರ ಹತ್ಯೆಯು ಸಮಕಾಲೀನ ಅಂತರರಾಷ್ಟ್ರೀಯ ಸಂಬಂಧಗಳಲ್ಲಿನ ಗಂಭೀರ ಬಿರುಕನ್ನು ಸೂಚಿಸುತ್ತದೆ. ಈ ಹತ್ಯೆಯನ್ನು ಖಂಡಿಸುವುದರಿಂದ ಭಾರತ ಸರ್ಕಾರ ದೂರ ಉಳಿದಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p><p>‘ಆರಂಭದಲ್ಲಿ, ಅಮೆರಿಕ-ಇಸ್ರೇಲ್ ನಡೆಸಿದ ಬೃಹತ್ ದಾಳಿಯನ್ನು ನಿರ್ಲಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಅದಕ್ಕೂ ಮೊದಲು ನಡೆದ ಘಟನೆಗಳ ಸರಮಾಲೆಯನ್ನು ಪ್ರಸ್ತಾಪಿಸದೆ ಕೇವಲ ಯುಎಇ ಮೇಲಿನ ಇರಾನ್ನ ಪ್ರತೀಕಾರದ ದಾಳಿಯನ್ನು ಖಂಡಿಸುವುದಕ್ಕೆ ಸೀಮಿತರಾದರು‘ ಎಂದು ಕಿಡಿಕಾರಿದ್ದಾರೆ.</p><p>‘ವಿದೇಶಿ ನಾಯಕರೊಬ್ಬರ ಉದ್ದೇಶಿತ ಹತ್ಯೆಯ ಸಂದರ್ಭದಲ್ಲಿ ನಮ್ಮ ದೇಶವು ಅಂತರರಾಷ್ಟ್ರೀಯ ಕಾನೂನಿನ ರಕ್ಷಣೆಗೆ ನಿಲ್ಲದಿದ್ದಾಗ ಅದು ನಮ್ಮ ವಿದೇಶಾಂಗ ನೀತಿಯ ಬಗ್ಗೆ ಗಂಭೀರ ಅನುಮಾನಗಳನ್ನು ಹುಟ್ಟುಹಾಕುತ್ತದೆ’ ಎಂದು ಅವರು ತಮ್ಮ ಲೇಖನದಲ್ಲಿ ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>