<p><strong>ನವದೆಹಲಿ:</strong> ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ವರ್ಷದ 100 ದಿನಗಳ ಬದಲು 150 ದಿನ ದುಡಿಮೆ ನೀಡಬೇಕು. ದಿನಕ್ಕೆ ಕನಿಷ್ಠ ಕೂಲಿ ಮೊತ್ತವನ್ನು ₹400ಕ್ಕೆ ನಿಗದಿಪಡಿಸಬೇಕು ಎಂದು ಕಾಂಗ್ರೆಸ್ನ ಸೋನಿಯಾ ಗಾಂಧಿ ಆಗ್ರಹಿಸಿದ್ದಾರೆ.</p><p>ರಾಜ್ಯಸಭೆಯಲ್ಲಿ ಶೂನ್ಯ ವೇಳೆ ಮಾತನಾಡಿದ ಅವರು, ‘ಯುಪಿಎ ಸರ್ಕಾರದಲ್ಲಿ ಪ್ರಧಾನಮಂತ್ರಿಯಾಗಿದ್ದ ಡಾ. ಮನಮೋಹನ್ ಸಿಂಗ್ ಅವರು 2005ರಲ್ಲಿ ಎಂಜಿನರೇಗಾ ಯೋಜನೆ ಜಾರಿಗೊಳಿಸಿದರು. ಗ್ರಾಮೀಣ ಭಾಗದ ಲಕ್ಷಾಂತರ ಬಡವರಿಗೆ ಇದು ದುಡಿಮೆ ನೀಡಿ ಆಸರೆಯಾಯಿತು. ಆದರೆ ಹಾಲಿ ಬಿಜೆಪಿ ಸರ್ಕಾರವು, ಸದ್ದಿಲ್ಲದೆ ಈ ಯೋಜನೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.</p><p>‘ಹತ್ತು ವರ್ಷಗಳ ಹಿಂದಿನ ಜಿಡಿಪಿಗೆ ಹೋಲಿಸಿದಲ್ಲಿ ಬಜೆಟ್ನಲ್ಲಿ ಇಂದಿಗೂ ಅದೇ ಮೊತ್ತವನ್ನೇ (₹86 ಸಾವಿರ ಕೋಟಿ) ಮೀಸಲಿಡಲಾಗುತ್ತಿದೆ. ಸದ್ಯದ ಹಣದುಬ್ಬರಕ್ಕೆ ಇದನ್ನು ಹೋಲಿಸಿದರೆ, ₹4 ಸಾವಿರ ಕೋಟಿ ಕಡಿಮೆಯೇ ಆಗಿದೆ. ಹಿಂದಿನ ವರ್ಷಗಳ ಬಾಕಿ ಹಣವನ್ನು ಪಾವತಿಸಲು ಹೆಚ್ಚುವರಿಯಾಗಿ ಶೇ 20ರಷ್ಟು ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.</p><p>‘ಸಮಸ್ಯೆ ಇಷ್ಟಕ್ಕೇ ಕೊನೆಗೊಳ್ಳದೆ, ಆಧಾರ್ ಸಂಖ್ಯೆ ಆಧರಿಸಿ ವೇತನ ಪಾವತಿ, ಮೊಬೈಲ್ ಮೂಲಕ ಹಾಜರಾತಿಯು ವೇತನ ಪಾವತಿಯಲ್ಲಿ ವಿಳಂಬವಾಗುತ್ತಿದೆ. ಈ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಬೇಕು’ ಎಂದು ಸೋನಿಯಾ ಹೇಳಿದ್ದಾರೆ.</p><p>‘2024ರಲ್ಲಿ ಚುನಾವಣೆ ಹೊಸ್ತಿಲಲ್ಲಿದ್ದ ಸರ್ಕಾರವು ನರೇಗಾ ವೇತನವನ್ನು ಸಾಂಕೇತಿಕ ಎಂಬಂತೆ ಶೇ 3ರಿಂದ 10ರಷ್ಟು ಹೆಚ್ಚಳ ಮಾಡಿತ್ತು. ವೇತನವು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿದೆ. ಉತ್ತರಾಖಂಡದಲ್ಲಿ ₹237 ಇದ್ದರೆ, ಆಂಧ್ರಪ್ರದೇಶದಲ್ಲಿ ₹300 ಇದೆ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ಘನತೆಯ ದುಡಿಮೆ ಮತ್ತು ಆರ್ಥಿಕ ಭದ್ರತೆಯನ್ನು ಒದಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ವರ್ಷದ 100 ದಿನಗಳ ಬದಲು 150 ದಿನ ದುಡಿಮೆ ನೀಡಬೇಕು. ದಿನಕ್ಕೆ ಕನಿಷ್ಠ ಕೂಲಿ ಮೊತ್ತವನ್ನು ₹400ಕ್ಕೆ ನಿಗದಿಪಡಿಸಬೇಕು ಎಂದು ಕಾಂಗ್ರೆಸ್ನ ಸೋನಿಯಾ ಗಾಂಧಿ ಆಗ್ರಹಿಸಿದ್ದಾರೆ.</p><p>ರಾಜ್ಯಸಭೆಯಲ್ಲಿ ಶೂನ್ಯ ವೇಳೆ ಮಾತನಾಡಿದ ಅವರು, ‘ಯುಪಿಎ ಸರ್ಕಾರದಲ್ಲಿ ಪ್ರಧಾನಮಂತ್ರಿಯಾಗಿದ್ದ ಡಾ. ಮನಮೋಹನ್ ಸಿಂಗ್ ಅವರು 2005ರಲ್ಲಿ ಎಂಜಿನರೇಗಾ ಯೋಜನೆ ಜಾರಿಗೊಳಿಸಿದರು. ಗ್ರಾಮೀಣ ಭಾಗದ ಲಕ್ಷಾಂತರ ಬಡವರಿಗೆ ಇದು ದುಡಿಮೆ ನೀಡಿ ಆಸರೆಯಾಯಿತು. ಆದರೆ ಹಾಲಿ ಬಿಜೆಪಿ ಸರ್ಕಾರವು, ಸದ್ದಿಲ್ಲದೆ ಈ ಯೋಜನೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.</p><p>‘ಹತ್ತು ವರ್ಷಗಳ ಹಿಂದಿನ ಜಿಡಿಪಿಗೆ ಹೋಲಿಸಿದಲ್ಲಿ ಬಜೆಟ್ನಲ್ಲಿ ಇಂದಿಗೂ ಅದೇ ಮೊತ್ತವನ್ನೇ (₹86 ಸಾವಿರ ಕೋಟಿ) ಮೀಸಲಿಡಲಾಗುತ್ತಿದೆ. ಸದ್ಯದ ಹಣದುಬ್ಬರಕ್ಕೆ ಇದನ್ನು ಹೋಲಿಸಿದರೆ, ₹4 ಸಾವಿರ ಕೋಟಿ ಕಡಿಮೆಯೇ ಆಗಿದೆ. ಹಿಂದಿನ ವರ್ಷಗಳ ಬಾಕಿ ಹಣವನ್ನು ಪಾವತಿಸಲು ಹೆಚ್ಚುವರಿಯಾಗಿ ಶೇ 20ರಷ್ಟು ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.</p><p>‘ಸಮಸ್ಯೆ ಇಷ್ಟಕ್ಕೇ ಕೊನೆಗೊಳ್ಳದೆ, ಆಧಾರ್ ಸಂಖ್ಯೆ ಆಧರಿಸಿ ವೇತನ ಪಾವತಿ, ಮೊಬೈಲ್ ಮೂಲಕ ಹಾಜರಾತಿಯು ವೇತನ ಪಾವತಿಯಲ್ಲಿ ವಿಳಂಬವಾಗುತ್ತಿದೆ. ಈ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಬೇಕು’ ಎಂದು ಸೋನಿಯಾ ಹೇಳಿದ್ದಾರೆ.</p><p>‘2024ರಲ್ಲಿ ಚುನಾವಣೆ ಹೊಸ್ತಿಲಲ್ಲಿದ್ದ ಸರ್ಕಾರವು ನರೇಗಾ ವೇತನವನ್ನು ಸಾಂಕೇತಿಕ ಎಂಬಂತೆ ಶೇ 3ರಿಂದ 10ರಷ್ಟು ಹೆಚ್ಚಳ ಮಾಡಿತ್ತು. ವೇತನವು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿದೆ. ಉತ್ತರಾಖಂಡದಲ್ಲಿ ₹237 ಇದ್ದರೆ, ಆಂಧ್ರಪ್ರದೇಶದಲ್ಲಿ ₹300 ಇದೆ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ಘನತೆಯ ದುಡಿಮೆ ಮತ್ತು ಆರ್ಥಿಕ ಭದ್ರತೆಯನ್ನು ಒದಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>