<p><strong>ನವದೆಹಲಿ</strong>: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ವಿರೋಧಿಸಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ‘ಇಂಡಿಯಾ’ ಒಕ್ಕೂಟದ ಹಲವು ಸಂಸದರು ಸಂಸತ್ನಲ್ಲಿ ಬುಧವಾರವೂ ಪ್ರತಿಭಟನೆ ನಡೆಸಿದರು.</p>.<p>ಪ್ರಿಯಾಂಕಾ ಗಾಂಧಿ ಮತ್ತು ವಿರೋಧ ಪಕ್ಷಗಳ ಇತರ ಸಂಸದರು ಎಸ್ಐಆರ್ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ಸಂಸತ್ತಿನ ಮಕರ ದ್ವಾರದ ಸಮೀಪ ‘ಎಸ್ಐಆರ್–ಪ್ರಜಾಪ್ರಭುತ್ವ ವಿರೋಧಿ’ ಘೋಷಣೆಯ ದೊಡ್ಡ ಬ್ಯಾನರ್ ಹಿಡಿದು ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಸ್ಪಿ, ಆರ್ಜೆಡಿ ಸಂಸದರು ‘ಎಸ್ಐಆರ್ ನಿಲ್ಲಿಸಿ’ ಫಲಕಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.</p>.<p><strong>ಎಸ್ಐಆರ್: ಮಾಜಿ ಅಧಿಕಾರಿಗಳಿಂದ ಕಳವಳ </strong></p><p>ಬಿಹಾರದಲ್ಲಿ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಬಗ್ಗೆ ಸುಮಾರು 90 ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿ. ಪೌರತ್ವ ಸಾಬೀತುಪಡಿಸಲು ದಾಖಲೆ ಇರದವರು ಸೇರಿದಂತೆ ಸಾಕಷ್ಟು ಜನರು ಮತದಾನದ ಹಕ್ಕನ್ನು ಕಳೆದುಕೊಳ್ಳದ್ದಾರೆ ಎಂದು ಹೇಳಿದ್ದಾರೆ. </p><p>ಅಖಿಲ ಭಾರತ ಮತ್ತು ಹಲವು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಲ್ಲಿ ಸೇವೆ ಸಲ್ಲಿಸಿರುವ 93 ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದು ಬಿಹಾರ ಮತ್ತು ದೇಶದಾದ್ಯಂತ ಎಸ್ಐಆರ್ ನಡೆಸುವುದರಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಅತಿ ದೊಡ್ಡ ಅಪಾಯ ಎದುರಾಗಲಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ವಿರೋಧಿಸಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ‘ಇಂಡಿಯಾ’ ಒಕ್ಕೂಟದ ಹಲವು ಸಂಸದರು ಸಂಸತ್ನಲ್ಲಿ ಬುಧವಾರವೂ ಪ್ರತಿಭಟನೆ ನಡೆಸಿದರು.</p>.<p>ಪ್ರಿಯಾಂಕಾ ಗಾಂಧಿ ಮತ್ತು ವಿರೋಧ ಪಕ್ಷಗಳ ಇತರ ಸಂಸದರು ಎಸ್ಐಆರ್ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ಸಂಸತ್ತಿನ ಮಕರ ದ್ವಾರದ ಸಮೀಪ ‘ಎಸ್ಐಆರ್–ಪ್ರಜಾಪ್ರಭುತ್ವ ವಿರೋಧಿ’ ಘೋಷಣೆಯ ದೊಡ್ಡ ಬ್ಯಾನರ್ ಹಿಡಿದು ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಸ್ಪಿ, ಆರ್ಜೆಡಿ ಸಂಸದರು ‘ಎಸ್ಐಆರ್ ನಿಲ್ಲಿಸಿ’ ಫಲಕಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.</p>.<p><strong>ಎಸ್ಐಆರ್: ಮಾಜಿ ಅಧಿಕಾರಿಗಳಿಂದ ಕಳವಳ </strong></p><p>ಬಿಹಾರದಲ್ಲಿ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಬಗ್ಗೆ ಸುಮಾರು 90 ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿ. ಪೌರತ್ವ ಸಾಬೀತುಪಡಿಸಲು ದಾಖಲೆ ಇರದವರು ಸೇರಿದಂತೆ ಸಾಕಷ್ಟು ಜನರು ಮತದಾನದ ಹಕ್ಕನ್ನು ಕಳೆದುಕೊಳ್ಳದ್ದಾರೆ ಎಂದು ಹೇಳಿದ್ದಾರೆ. </p><p>ಅಖಿಲ ಭಾರತ ಮತ್ತು ಹಲವು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಲ್ಲಿ ಸೇವೆ ಸಲ್ಲಿಸಿರುವ 93 ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದು ಬಿಹಾರ ಮತ್ತು ದೇಶದಾದ್ಯಂತ ಎಸ್ಐಆರ್ ನಡೆಸುವುದರಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಅತಿ ದೊಡ್ಡ ಅಪಾಯ ಎದುರಾಗಲಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>