ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರಕ್ಕೆ ರಾಜಧರ್ಮದ ಬಗ್ಗೆ ಪಾಠ ಮಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಗುರುವಾರ ಹರಿಹಾಯ್ದಿದ್ದ ಸೋನಿಯಾ ಗಾಂಧಿ, ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜಧರ್ಮ ಪಾಲಿಸಬೇಕು. ಗೃಹ ಸಚಿವ ಅಮಿತ್ ಶಾ ತಕ್ಷಣವೇ ರಾಜೀನಾಮೆ ನೀಡಬೇಕು' ಎಂದುಒತ್ತಾಯಿಸಿದ್ದರು.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ರವಿಶಂಕರ ಪ್ರಸಾದ್, ‘ಶ್ರೀಮತಿ ಸೋನಿಯಾ ಗಾಂಧಿ ಅವರೇ, ನೀವು ನಮಗೆ ರಾಜಧರ್ಮದ ಬಗ್ಗೆ ಉಪದೇಶ ನೀಡಲು ಬರಬೇಡಿ’ಎಂದಿದ್ದಾರೆ.
BJP leader and Union Minister RS Prasad on being asked about the Party's stand on statements made by its leaders Parvesh Verma and Kapil Mishra: We have clarified our position very clearly, we do not approve these statements pic.twitter.com/i67tSUqcm3
ಇದೇ ವೇಳೆ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಅವರ ದ್ವೇಷಪೂರಿತ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕಪಿಲ್ ಮಿಶ್ರಾ ಆಡಿದ ಮಾತುಗಳನ್ನು ನಮ್ಮ ಪಕ್ಷ ಎಂದಿಗೂ ಮನ್ನಿಸುವುದಿಲ್ಲ. ಮಿಶ್ರಾ ಮಾತುಗಳನ್ನು ನಮ್ಮ ಪಕ್ಷದ ಹಿರಿಯ ನಾಯಕರೇ ಸಾರ್ವಜನಿಕವಾಗಿ ಖಂಡಿಸಿದ್ದಾರೆ‘ ಎಂದು ತಿಳಿಸಿದ್ದಾರೆ.