<p><strong>ನವದೆಹಲಿ:</strong> ಈ ಬಾರಿ ಚುನಾವಣೆಯಲ್ಲಿ ಉಸ್ತುವಾರಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ಎಸ್ ಸರ್ಕಾರವನ್ನು ಕಿತ್ತೆಸೆಯುವಂತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೆಲಂಗಾಣ ಮತದಾರರಿಗೆ ಮನವಿ ಮಾಡಿದ್ದಾರೆ.</p>.<p>ಪ್ರತ್ಯೇಕ ತೆಲಂಗಾಣ ಕಾಂಗ್ರೆಸ್ ಕನಸಿನ ಕೂಸು. ನಾಲ್ಕೂವರೆ ವರ್ಷಗಳ ಹಿಂದೆ ತೆಲಂಗಾಣ ಪ್ರತ್ಯೇಕ ರಾಜ್ಯವಾಗಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕಾರಣ. ಆದರೆ, ಅಧಿಕಾರಕ್ಕೆ ಬಂದ ಟಿಆರ್ಎಸ್ ಸರ್ಕಾರ ಜನರ ಬೆನ್ನಿಗೆ ಚೂರಿ ಹಾಕಿತು ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.</p>.<p>ಕಾಂಗ್ರೆಸ್, ತೆಲುಗುದೇಶಂ, ಟಿಜೆಎಸ್ ಮತ್ತು ಸಿಪಿಐ ಒಳಗೊಂಡ ಪ್ರಜಾಕೂಟಕ್ಕೆ ಮತ ಹಾಕುವಂತೆ ಸೋನಿಯಾ ಮನವಿ ಮಾಡಿಕೊಂಡ ವಿಡಿಯೊವನ್ನು ಕಾಂಗ್ರೆಸ್ ಮಂಗಳವಾರ ರಾತ್ರಿ ಬಿಡುಗಡೆ ಮಾಡಿದೆ.</p>.<p>‘ಕಾಂಗ್ರೆಸ್ ನೇತೃತ್ವದ ‘ಪ್ರಜಾಕೂಟ’ ತೆಲಂಗಾಣ ಜನತೆಯ ಧ್ವನಿಯಂತೆ ಕೆಲಸ ಮಾಡುತ್ತದೆ. ಜನರ ಆಶೋತ್ತರ, ಕನಸುಗಳನ್ನು ಈಡೇರಿಸಲು ಬದ್ಧವಾಗಿದೆ. ನೀವು ನೀಡುವ ಮತ ತೆಲಂಗಾಣದ ಭವಿಷ್ಯವನ್ನು ಮಾತ್ರವಲ್ಲ, ನಿಮ್ಮ ಭವಿಷ್ಯವನ್ನೂ ರೂಪಿಸುತ್ತದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಈ ಬಾರಿ ಚುನಾವಣೆಯಲ್ಲಿ ಉಸ್ತುವಾರಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ಎಸ್ ಸರ್ಕಾರವನ್ನು ಕಿತ್ತೆಸೆಯುವಂತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೆಲಂಗಾಣ ಮತದಾರರಿಗೆ ಮನವಿ ಮಾಡಿದ್ದಾರೆ.</p>.<p>ಪ್ರತ್ಯೇಕ ತೆಲಂಗಾಣ ಕಾಂಗ್ರೆಸ್ ಕನಸಿನ ಕೂಸು. ನಾಲ್ಕೂವರೆ ವರ್ಷಗಳ ಹಿಂದೆ ತೆಲಂಗಾಣ ಪ್ರತ್ಯೇಕ ರಾಜ್ಯವಾಗಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕಾರಣ. ಆದರೆ, ಅಧಿಕಾರಕ್ಕೆ ಬಂದ ಟಿಆರ್ಎಸ್ ಸರ್ಕಾರ ಜನರ ಬೆನ್ನಿಗೆ ಚೂರಿ ಹಾಕಿತು ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.</p>.<p>ಕಾಂಗ್ರೆಸ್, ತೆಲುಗುದೇಶಂ, ಟಿಜೆಎಸ್ ಮತ್ತು ಸಿಪಿಐ ಒಳಗೊಂಡ ಪ್ರಜಾಕೂಟಕ್ಕೆ ಮತ ಹಾಕುವಂತೆ ಸೋನಿಯಾ ಮನವಿ ಮಾಡಿಕೊಂಡ ವಿಡಿಯೊವನ್ನು ಕಾಂಗ್ರೆಸ್ ಮಂಗಳವಾರ ರಾತ್ರಿ ಬಿಡುಗಡೆ ಮಾಡಿದೆ.</p>.<p>‘ಕಾಂಗ್ರೆಸ್ ನೇತೃತ್ವದ ‘ಪ್ರಜಾಕೂಟ’ ತೆಲಂಗಾಣ ಜನತೆಯ ಧ್ವನಿಯಂತೆ ಕೆಲಸ ಮಾಡುತ್ತದೆ. ಜನರ ಆಶೋತ್ತರ, ಕನಸುಗಳನ್ನು ಈಡೇರಿಸಲು ಬದ್ಧವಾಗಿದೆ. ನೀವು ನೀಡುವ ಮತ ತೆಲಂಗಾಣದ ಭವಿಷ್ಯವನ್ನು ಮಾತ್ರವಲ್ಲ, ನಿಮ್ಮ ಭವಿಷ್ಯವನ್ನೂ ರೂಪಿಸುತ್ತದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>