ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಅಂಗವಾಗಿಕಾಂಗ್ರೆಸ್ಪಕ್ಷದ ಸಂಸದೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರುಇಂದಿರಾ ಗಾಂಧಿ ಸ್ಮಾರಕಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.
ಇಲ್ಲಿನ ಸಫ್ದರ್ಜಂಗ್ ರಸ್ತೆಯಲ್ಲಿರುವಇಂದಿರಾ ಗಾಂಧಿ ಸ್ಮಾರಕಕ್ಕೆ ತೆರಳಿದಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶ್ರದ್ಧಾಂಜಲಿ ಅರ್ಪಿಸಿದರು.
ರಾಹುಲ್ ಗಾಂಧಿ ಅವರು ಭಾರತ್ ಜೋಡೊ ಯಾತ್ರೆಯಲ್ಲೇ ಶ್ರದ್ಧಾಂಜಲಿ ಸಲ್ಲಿಸಿದರು.
ಅಂಗರಕ್ಷಕರಿಂದ ಹತ್ಯೆ:1984 ರಲ್ಲಿ ಅಕ್ಟೋಬರ್ 31ರಂದು ಇಂದಿರಾ ಗಾಂಧಿಯವರನ್ನು ಅವರ ಅಂಗರಕ್ಷಕರೇ ಹತ್ಯೆ ಮಾಡಿದರು.