<p><strong>ನವದೆಹಲಿ:</strong> ಹದಿನೈದು ವರ್ಷಗಳ ಹಿಂದೆ ಟಿ.ವಿ ಪತ್ರಕರ್ತೆ ಸೌಮ್ಯ ಅವರನ್ನು ಹತ್ಯೆಗೈದ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನವದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ನ.25ಕ್ಕೆ(ಶುಕ್ರವಾರ) ಕಾಯ್ದಿರಿಸಿದೆ.</p><p>ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರವೀಂದ್ರ ಕುಮಾರ್ ಪಾಂಡೆ ಅವರು ಆದೇಶವನ್ನು ಕಾಯ್ದಿರಿಸಿದ್ದಾರೆ. ಅಪರಾಧಿಗಳು ಸಲ್ಲಿಸಿರುವ ಅಫಿಡವಿಟ್ಗಳ ಪರಿಶೀಲನೆ ಪೂರ್ಣಗೊಂಡಿಲ್ಲ ಎಂದು ಗಮನಿಸಿದ ನ್ಯಾಯಾಲಯ ನ. 7 ರಂದು ಪ್ರಕರಣವನ್ನು ಮುಂದೂಡಿತ್ತು.</p><p><strong>ಪ್ರಕರಣದ ಹಿನ್ನೆಲೆ:</strong> </p><p>ಪತ್ರಕರ್ತೆ ಸೌಮ್ಯ ಅವರು, 2008ರ ಸೆ.30ರಂದು ಮುಂಜಾನೆ 3.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ತನ್ನ ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ದರೋಡೆ ಮಾಡುವ ಉದ್ದೇಶದಿಂದ ವಸಂತ ವಿಹಾರ್ ಬಳಿ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ಅವರ ತಲೆಗೆ ಗುಂಡು ಹಾರಿಸಿ ಹತ್ಯೆಗೈದಿದ್ದರು. ಈ ಕೃತ್ಯ ರಾಷ್ಟ್ರದಾದ್ಯಂತ ಸುದ್ದಿಯಾಗಿತ್ತು.</p><p><strong>ಐವರು ದೋಷಿ:</strong> </p><p>2008ರಲ್ಲಿ ನಡೆದ ಸೌಮ್ಯ ವಿಶ್ವನಾಥನ್ ಕೊಲೆ ಪ್ರಕರಣದಲ್ಲಿ ಭಾಗಿಯಾದ ಐವರು ಆರೋಪಿಗಳನ್ನು ನವದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಪ್ಪಿತಸ್ಥರೆಂದು ಘೋಷಿಸಿ 2023ರ ಅ.18ರಂದು ತೀರ್ಪು ನೀಡಿತ್ತು. </p><p>ರವಿಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್, ಅಜಿತ್ಕುಮಾರ್ ಹಾಗೂ ಅಜಯ್ ಸೇಥಿ ಅವರ ಮೇಲಿನ ಆರೋಪ ಸಾಬೀತಾಗಿದೆ. ಎಲ್ಲರೂ ದೋಷಿಗಳಾಗಿದ್ದಾರೆ ಎಂದು ಹೆಚ್ಚುವರಿ ನ್ಯಾಯಾಧೀಶ ರವೀಂದ್ರ ಕುಮಾರ್ ಪಾಂಡೆ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಿಸಿದ್ದರು.</p>.ಪತ್ರಕರ್ತೆ ಸೌಮ್ಯ ಕೊಲೆ: ಐವರು ದೋಷಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹದಿನೈದು ವರ್ಷಗಳ ಹಿಂದೆ ಟಿ.ವಿ ಪತ್ರಕರ್ತೆ ಸೌಮ್ಯ ಅವರನ್ನು ಹತ್ಯೆಗೈದ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನವದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ನ.25ಕ್ಕೆ(ಶುಕ್ರವಾರ) ಕಾಯ್ದಿರಿಸಿದೆ.</p><p>ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರವೀಂದ್ರ ಕುಮಾರ್ ಪಾಂಡೆ ಅವರು ಆದೇಶವನ್ನು ಕಾಯ್ದಿರಿಸಿದ್ದಾರೆ. ಅಪರಾಧಿಗಳು ಸಲ್ಲಿಸಿರುವ ಅಫಿಡವಿಟ್ಗಳ ಪರಿಶೀಲನೆ ಪೂರ್ಣಗೊಂಡಿಲ್ಲ ಎಂದು ಗಮನಿಸಿದ ನ್ಯಾಯಾಲಯ ನ. 7 ರಂದು ಪ್ರಕರಣವನ್ನು ಮುಂದೂಡಿತ್ತು.</p><p><strong>ಪ್ರಕರಣದ ಹಿನ್ನೆಲೆ:</strong> </p><p>ಪತ್ರಕರ್ತೆ ಸೌಮ್ಯ ಅವರು, 2008ರ ಸೆ.30ರಂದು ಮುಂಜಾನೆ 3.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ತನ್ನ ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ದರೋಡೆ ಮಾಡುವ ಉದ್ದೇಶದಿಂದ ವಸಂತ ವಿಹಾರ್ ಬಳಿ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ಅವರ ತಲೆಗೆ ಗುಂಡು ಹಾರಿಸಿ ಹತ್ಯೆಗೈದಿದ್ದರು. ಈ ಕೃತ್ಯ ರಾಷ್ಟ್ರದಾದ್ಯಂತ ಸುದ್ದಿಯಾಗಿತ್ತು.</p><p><strong>ಐವರು ದೋಷಿ:</strong> </p><p>2008ರಲ್ಲಿ ನಡೆದ ಸೌಮ್ಯ ವಿಶ್ವನಾಥನ್ ಕೊಲೆ ಪ್ರಕರಣದಲ್ಲಿ ಭಾಗಿಯಾದ ಐವರು ಆರೋಪಿಗಳನ್ನು ನವದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಪ್ಪಿತಸ್ಥರೆಂದು ಘೋಷಿಸಿ 2023ರ ಅ.18ರಂದು ತೀರ್ಪು ನೀಡಿತ್ತು. </p><p>ರವಿಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್, ಅಜಿತ್ಕುಮಾರ್ ಹಾಗೂ ಅಜಯ್ ಸೇಥಿ ಅವರ ಮೇಲಿನ ಆರೋಪ ಸಾಬೀತಾಗಿದೆ. ಎಲ್ಲರೂ ದೋಷಿಗಳಾಗಿದ್ದಾರೆ ಎಂದು ಹೆಚ್ಚುವರಿ ನ್ಯಾಯಾಧೀಶ ರವೀಂದ್ರ ಕುಮಾರ್ ಪಾಂಡೆ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಿಸಿದ್ದರು.</p>.ಪತ್ರಕರ್ತೆ ಸೌಮ್ಯ ಕೊಲೆ: ಐವರು ದೋಷಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>