<p><strong>ನವದೆಹಲಿ</strong>: ಸೌಮ್ಯ ವಿಶ್ವನಾಥನ್ ಕೊಲೆ ಪ್ರಕರಣದಲ್ಲಿ ತಮ್ಮನ್ನು ತಪ್ಪಿತಸ್ಥರು ಎಂದು ಘೋಷಿಸಿ, ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ನಾಲ್ವರು ಅಪರಾಧಿಗಳು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಬೇಕು ಎಂದು ದೆಹಲಿ ಪೊಲೀಸರಿಗೆ ಹೈಕೋರ್ಟ್ ಮಂಗಳವಾರ ಸೂಚಿಸಿದೆ.</p>.<p>ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈತ್ ಮತ್ತು ಮನೋಜ್ ಜೈನ್ ಅವರನ್ನು ಒಳಗೊಂಡ ನ್ಯಾಯಪೀಠವು ಈ ಸಂಬಂಧ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ.</p>.<p>ಇಲ್ಲಿನ ವಿಶೇಷ ನ್ಯಾಯಾಲಯವೊಂದು ನವೆಂಬರ್ 26, 2023ರಂದು ಪ್ರಕರಣದ ಅಪರಾಧಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್ ಮತ್ತು ಅಜಯ್ ಸಿಂಗ್ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ನಾಲ್ವರು ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಪ್ರಕರಣವನ್ನು ಫೆಬ್ರುವರಿ 12ರಂದು ವಿಚಾರಣೆ ನಡೆಸಲು ಹೈಕೋರ್ಟ್ ಪಟ್ಟಿ ಮಾಡಿದೆ.</p>.<p>ಸೌಮ್ಯ ಅವರು ಇಂಗ್ಲಿಷ್ ಸುದ್ದಿ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದರು. 2008ರ ಸೆಪ್ಟೆಂಬರ್ 30ರಂದು ಮುಂಜಾನೆ ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಅವರ ತಲೆಗೆ ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು. ದರೋಡೆ ಮಾಡುವ ಉದ್ದೇಶದಿಂದ ಈ ಕೊಲೆ ನಡೆದಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸೌಮ್ಯ ವಿಶ್ವನಾಥನ್ ಕೊಲೆ ಪ್ರಕರಣದಲ್ಲಿ ತಮ್ಮನ್ನು ತಪ್ಪಿತಸ್ಥರು ಎಂದು ಘೋಷಿಸಿ, ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ನಾಲ್ವರು ಅಪರಾಧಿಗಳು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಬೇಕು ಎಂದು ದೆಹಲಿ ಪೊಲೀಸರಿಗೆ ಹೈಕೋರ್ಟ್ ಮಂಗಳವಾರ ಸೂಚಿಸಿದೆ.</p>.<p>ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈತ್ ಮತ್ತು ಮನೋಜ್ ಜೈನ್ ಅವರನ್ನು ಒಳಗೊಂಡ ನ್ಯಾಯಪೀಠವು ಈ ಸಂಬಂಧ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ.</p>.<p>ಇಲ್ಲಿನ ವಿಶೇಷ ನ್ಯಾಯಾಲಯವೊಂದು ನವೆಂಬರ್ 26, 2023ರಂದು ಪ್ರಕರಣದ ಅಪರಾಧಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್ ಮತ್ತು ಅಜಯ್ ಸಿಂಗ್ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ನಾಲ್ವರು ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಪ್ರಕರಣವನ್ನು ಫೆಬ್ರುವರಿ 12ರಂದು ವಿಚಾರಣೆ ನಡೆಸಲು ಹೈಕೋರ್ಟ್ ಪಟ್ಟಿ ಮಾಡಿದೆ.</p>.<p>ಸೌಮ್ಯ ಅವರು ಇಂಗ್ಲಿಷ್ ಸುದ್ದಿ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದರು. 2008ರ ಸೆಪ್ಟೆಂಬರ್ 30ರಂದು ಮುಂಜಾನೆ ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಅವರ ತಲೆಗೆ ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು. ದರೋಡೆ ಮಾಡುವ ಉದ್ದೇಶದಿಂದ ಈ ಕೊಲೆ ನಡೆದಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>