<p><strong>ಕೋಲ್ಕತ್ತ</strong>: ದಕ್ಷಿಣ ಕೋಲ್ಕತ್ತ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯನ್ನು ಕಾಲೇಜಿನ ಆಡಳಿತ ಮಂಡಳಿ ಕೆಲಸದಿಂದ ಉಚ್ಚಾಟಿಸಿದೆ. ಇತರ ಇಬ್ಬರು ಆರೋಪಿಗಳನ್ನೂ ಕಾಲೇಜಿನಿಂದ ಹೊರಹಾಕಲಾಗಿದೆ.</p>.<p>ಪ್ರಕರಣದ ಮುಖ್ಯ ಆರೋಪಿ ಮನೋಜಿತ್ ಮಿಶ್ರಾ, ಆಡಳಿತ ಮಂಡಳಿಯ ಈ ಹಿಂದಿನ ಶಿಫಾರಸಿನಂತೆ ಕಾಲೇಜಿನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿರುವ ಕಾರಣ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಮಿಶ್ರಾ ಮತ್ತು ಬಂಧಿತರಾಗಿರುವ ಅದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಾದ ಪ್ರಮಿತ್ ಮುಖರ್ಜಿ ಹಾಗೂ ಝೈದ್ ಅಹ್ಮದ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. </p>.<p>ತೃಣಮೂಲ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ದೇವ್ ಅಧ್ಯಕ್ಷತೆಯಲ್ಲಿ ನಡೆದ ಕಾಲೇಜಿನ ಆಡಳಿತ ಮಂಡಳಿ ಸಭೆಯಲ್ಲಿ, ಮಿಶ್ರಾನನ್ನು ಕೆಲಸದಿಂದ ವಜಾಗೊಳಿಸುವ ಮತ್ತು ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕುವ ನಿರ್ಧಾರ ತೆಗೆದುಕೊಳ್ಳಲಾಯಿತು.</p>.<p>ಪ್ರಮುಖ ಆರೋಪಿ ಮಿಶ್ರಾ ಅಲಿಪೋರ್ ಪೊಲೀಸ್ ಹಾಗೂ ಸೆಷನ್ ಕೋರ್ಟ್ನಲ್ಲಿ ಕ್ರಿಮಿನಲ್ ಪ್ರಕರಣಗಳ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದು, ಆತನ ಸದಸ್ಯತ್ವವನ್ನು ರದ್ದುಪಡಿಸುವಂತೆ ಕೋರಿ ವಕೀಲರ ಸಂಘಕ್ಕೆ ಮನವಿ ಮಾಡಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ.</p>.<p>‘ಎಲ್ಲ ತರಗತಿಗಳನ್ನು ಅನಿರ್ದಿಷ್ಟಾವಧಿಯವರೆಗೆ ರದ್ದುಪಡಿಸಲಾಗುವುದು. ಆದರೆ ಮುಂಬರುವ ಪರೀಕ್ಷೆಗೆ ಯಾವುದೇ ಅಡಚಣೆ ಉಂಟಾಗದಂತೆ ಕ್ರಮವಹಿಸಲಾಗುವುದು’ ಎಂದಿದೆ.</p>.<p><strong>ಕ್ಷಮೆಯಾಚಿಸಿದ ಮದನ್ ಮಿತ್ರಾ </strong></p><p>ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಟಿಎಂಸಿ ಶಾಸಕ ಮದನ್ ಮಿತ್ರಾ ಅವರು ಪಕ್ಷದ ನಾಯಕತ್ವದ ಕ್ಷಮೆಯಾಚಿಸಿದ್ದಾರೆ. </p><p>‘ವಿದ್ಯಾರ್ಥಿನಿಯು ಒಬ್ಬಂಟಿಯಾಗಿ ಕಾಲೇಜಿಗೆ ಹೋಗದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ. ಅಲ್ಲಿಗೆ ಹೋಗುವಾಗ ಸ್ನೇಹಿತರನ್ನು ಕರೆದೊಯ್ಯಬೇಕಿತ್ತು’ ಎಂದು ಮಿತ್ರಾ ಹೇಳಿದ್ದರು. </p><p>ಈ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಪಕ್ಷವು ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ಮೂರು ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿತ್ತು. ಮಿತ್ರಾ ಅವರು ಶೋಕಾಸ್ ನೋಟಿಸ್ಗೆ ಸೋಮವಾರ ತಡರಾತ್ರಿ ಉತ್ತರಿಸಿದ್ದು ಕ್ಷಮೆಯಾಚಿದ್ದಾರೆ.</p>.<p><strong>‘ಗುರುತು ಬಹಿರಂಗಪಡಿಸಿದರೆ ಕ್ರಮ’ </strong></p><p>ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗಪಡಿಸುವ ಯಾವುದೇ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕೋಲ್ಕತ್ತ ಪೊಲೀಸರು ಮಂಗಳವಾರ ಎಚ್ಚರಿಸಿದ್ದಾರೆ. </p><p>‘ಕೆಲವು ವ್ಯಕ್ತಿಗಳು ಪ್ರಕರಣಕ್ಕೆ ಸಂಬಂಧಿಸಿದ ಗೋಪ್ಯ ದಾಖಲೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವ ಮೂಲಕ ಸಂತ್ರಸ್ತೆಯ ಗುರುತು ಬಹಿರಂಗಪಡಿಸಲು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದೆ. ಇದು ಕಾನೂನಿನ ಉಲ್ಲಂಘನೆಯಾಗಿದೆ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ದಕ್ಷಿಣ ಕೋಲ್ಕತ್ತ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯನ್ನು ಕಾಲೇಜಿನ ಆಡಳಿತ ಮಂಡಳಿ ಕೆಲಸದಿಂದ ಉಚ್ಚಾಟಿಸಿದೆ. ಇತರ ಇಬ್ಬರು ಆರೋಪಿಗಳನ್ನೂ ಕಾಲೇಜಿನಿಂದ ಹೊರಹಾಕಲಾಗಿದೆ.</p>.<p>ಪ್ರಕರಣದ ಮುಖ್ಯ ಆರೋಪಿ ಮನೋಜಿತ್ ಮಿಶ್ರಾ, ಆಡಳಿತ ಮಂಡಳಿಯ ಈ ಹಿಂದಿನ ಶಿಫಾರಸಿನಂತೆ ಕಾಲೇಜಿನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿರುವ ಕಾರಣ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಮಿಶ್ರಾ ಮತ್ತು ಬಂಧಿತರಾಗಿರುವ ಅದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಾದ ಪ್ರಮಿತ್ ಮುಖರ್ಜಿ ಹಾಗೂ ಝೈದ್ ಅಹ್ಮದ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. </p>.<p>ತೃಣಮೂಲ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ದೇವ್ ಅಧ್ಯಕ್ಷತೆಯಲ್ಲಿ ನಡೆದ ಕಾಲೇಜಿನ ಆಡಳಿತ ಮಂಡಳಿ ಸಭೆಯಲ್ಲಿ, ಮಿಶ್ರಾನನ್ನು ಕೆಲಸದಿಂದ ವಜಾಗೊಳಿಸುವ ಮತ್ತು ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕುವ ನಿರ್ಧಾರ ತೆಗೆದುಕೊಳ್ಳಲಾಯಿತು.</p>.<p>ಪ್ರಮುಖ ಆರೋಪಿ ಮಿಶ್ರಾ ಅಲಿಪೋರ್ ಪೊಲೀಸ್ ಹಾಗೂ ಸೆಷನ್ ಕೋರ್ಟ್ನಲ್ಲಿ ಕ್ರಿಮಿನಲ್ ಪ್ರಕರಣಗಳ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದು, ಆತನ ಸದಸ್ಯತ್ವವನ್ನು ರದ್ದುಪಡಿಸುವಂತೆ ಕೋರಿ ವಕೀಲರ ಸಂಘಕ್ಕೆ ಮನವಿ ಮಾಡಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ.</p>.<p>‘ಎಲ್ಲ ತರಗತಿಗಳನ್ನು ಅನಿರ್ದಿಷ್ಟಾವಧಿಯವರೆಗೆ ರದ್ದುಪಡಿಸಲಾಗುವುದು. ಆದರೆ ಮುಂಬರುವ ಪರೀಕ್ಷೆಗೆ ಯಾವುದೇ ಅಡಚಣೆ ಉಂಟಾಗದಂತೆ ಕ್ರಮವಹಿಸಲಾಗುವುದು’ ಎಂದಿದೆ.</p>.<p><strong>ಕ್ಷಮೆಯಾಚಿಸಿದ ಮದನ್ ಮಿತ್ರಾ </strong></p><p>ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಟಿಎಂಸಿ ಶಾಸಕ ಮದನ್ ಮಿತ್ರಾ ಅವರು ಪಕ್ಷದ ನಾಯಕತ್ವದ ಕ್ಷಮೆಯಾಚಿಸಿದ್ದಾರೆ. </p><p>‘ವಿದ್ಯಾರ್ಥಿನಿಯು ಒಬ್ಬಂಟಿಯಾಗಿ ಕಾಲೇಜಿಗೆ ಹೋಗದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ. ಅಲ್ಲಿಗೆ ಹೋಗುವಾಗ ಸ್ನೇಹಿತರನ್ನು ಕರೆದೊಯ್ಯಬೇಕಿತ್ತು’ ಎಂದು ಮಿತ್ರಾ ಹೇಳಿದ್ದರು. </p><p>ಈ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಪಕ್ಷವು ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ಮೂರು ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿತ್ತು. ಮಿತ್ರಾ ಅವರು ಶೋಕಾಸ್ ನೋಟಿಸ್ಗೆ ಸೋಮವಾರ ತಡರಾತ್ರಿ ಉತ್ತರಿಸಿದ್ದು ಕ್ಷಮೆಯಾಚಿದ್ದಾರೆ.</p>.<p><strong>‘ಗುರುತು ಬಹಿರಂಗಪಡಿಸಿದರೆ ಕ್ರಮ’ </strong></p><p>ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗಪಡಿಸುವ ಯಾವುದೇ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕೋಲ್ಕತ್ತ ಪೊಲೀಸರು ಮಂಗಳವಾರ ಎಚ್ಚರಿಸಿದ್ದಾರೆ. </p><p>‘ಕೆಲವು ವ್ಯಕ್ತಿಗಳು ಪ್ರಕರಣಕ್ಕೆ ಸಂಬಂಧಿಸಿದ ಗೋಪ್ಯ ದಾಖಲೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವ ಮೂಲಕ ಸಂತ್ರಸ್ತೆಯ ಗುರುತು ಬಹಿರಂಗಪಡಿಸಲು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದೆ. ಇದು ಕಾನೂನಿನ ಉಲ್ಲಂಘನೆಯಾಗಿದೆ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>