<p><strong>ಲಖನೌ:</strong> ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನವನ್ನು ತಡೆಯುವುದಕ್ಕಾಗಿ, ಮತದಾರರ ಪಟ್ಟಿಯಲ್ಲಿರುವ ಎಲ್ಲ ನಕಲಿ ಹೆಸರುಗಳನ್ನು ತೆಗೆದುಹಾಕಿದ ಬಗ್ಗೆ ಚುನಾವಣಾ ಆಯೋಗವು ಭರವಸೆ ನೀಡಬೇಕು ಎಂದು ಸಮಾಜವಾದಿ ಪಕ್ಷ ಶುಕ್ರವಾರ ಆಗ್ರಹಿಸಿದೆ.</p>.<p>ಚುನಾವಣಾ ಆಯೋಗವು ಮತದಾರರ ಪಟ್ಟಿಯಿಂದ ಸಾಕಷ್ಟು ಸಂಖ್ಯೆಯಲ್ಲಿ ಖೊಟ್ಟಿ ಮತದಾರರ ಹೆಸರುಗಳನ್ನು ತೆಗೆದುಹಾಕಿದೆ. ಆ ನಂತರವೂ ನ.1ರಂದು ಪ್ರಕಟಿಸಲಾದ ಮತದಾರರ ಪಟ್ಟಿಯಲ್ಲಿ ಅಂಥ ಹೆಸರುಗಳು ಇನ್ನೂ ಉಳಿದಿರುವುದು ಕಳವಳಕಾರಿಯಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಸೂಚನೆ ಮೇರೆಗೆ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನರೇಶ್ ಉತ್ತಮ್ ಪಟೇಲ್ ಅವರು ಈ ವಿಚಾರವಾಗಿ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಎಂದು ಸಮಾಜವಾದಿ ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯನ್ನು ನ.30ರಿಂದ ಡಿ.31ರ ವರೆಗೆ ವಿಸ್ತರಿಸಬೇಕು ಆಗ್ರಹಿಸಿರುವ ಸಮಾಜವಾದಿ ಪಕ್ಷ, ಇದರಿಂದ, ಪ್ರತಿಯೊಂದು ಮತಗಟ್ಟೆಯಲ್ಲಿಯೂ ಇರಬಹುದಾದ ಖೊಟ್ಟಿ ಮತದಾರರನ್ನು ಗುರುತಿಸಲು ಪಕ್ಷದ ಕಾರ್ಯಕರ್ತರಿಗೆ ಸಾಧ್ಯವಾಗಲಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನವನ್ನು ತಡೆಯುವುದಕ್ಕಾಗಿ, ಮತದಾರರ ಪಟ್ಟಿಯಲ್ಲಿರುವ ಎಲ್ಲ ನಕಲಿ ಹೆಸರುಗಳನ್ನು ತೆಗೆದುಹಾಕಿದ ಬಗ್ಗೆ ಚುನಾವಣಾ ಆಯೋಗವು ಭರವಸೆ ನೀಡಬೇಕು ಎಂದು ಸಮಾಜವಾದಿ ಪಕ್ಷ ಶುಕ್ರವಾರ ಆಗ್ರಹಿಸಿದೆ.</p>.<p>ಚುನಾವಣಾ ಆಯೋಗವು ಮತದಾರರ ಪಟ್ಟಿಯಿಂದ ಸಾಕಷ್ಟು ಸಂಖ್ಯೆಯಲ್ಲಿ ಖೊಟ್ಟಿ ಮತದಾರರ ಹೆಸರುಗಳನ್ನು ತೆಗೆದುಹಾಕಿದೆ. ಆ ನಂತರವೂ ನ.1ರಂದು ಪ್ರಕಟಿಸಲಾದ ಮತದಾರರ ಪಟ್ಟಿಯಲ್ಲಿ ಅಂಥ ಹೆಸರುಗಳು ಇನ್ನೂ ಉಳಿದಿರುವುದು ಕಳವಳಕಾರಿಯಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಸೂಚನೆ ಮೇರೆಗೆ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನರೇಶ್ ಉತ್ತಮ್ ಪಟೇಲ್ ಅವರು ಈ ವಿಚಾರವಾಗಿ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಎಂದು ಸಮಾಜವಾದಿ ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯನ್ನು ನ.30ರಿಂದ ಡಿ.31ರ ವರೆಗೆ ವಿಸ್ತರಿಸಬೇಕು ಆಗ್ರಹಿಸಿರುವ ಸಮಾಜವಾದಿ ಪಕ್ಷ, ಇದರಿಂದ, ಪ್ರತಿಯೊಂದು ಮತಗಟ್ಟೆಯಲ್ಲಿಯೂ ಇರಬಹುದಾದ ಖೊಟ್ಟಿ ಮತದಾರರನ್ನು ಗುರುತಿಸಲು ಪಕ್ಷದ ಕಾರ್ಯಕರ್ತರಿಗೆ ಸಾಧ್ಯವಾಗಲಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>