<p><strong>ಲಖನೌ</strong>: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆ ಮತ್ತು ಸ್ಮಾರಕದ ವಿಚಾರವಾಗಿ ರಾಜಕೀಯ ಬೇಡ ಎಂದು ಕೇಂದ್ರ ಸರ್ಕಾರಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಎಸ್ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಮನವಿ ಮಾಡಿದ್ದಾರೆ.</p><p>ಈ ಕುರಿತು ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅಖಿಲೇಶ್ ಯಾದವ್, ‘ದೇಶದ ಮಾಜಿ ಪ್ರಧಾನಿಯನ್ನು ಗೌರವಿಸುವ ಸಾಂಪ್ರದಾಯವನ್ನು ಎತ್ತಿಹಿಡಿಯಬೇಕು. ಈ ವಿಷಯದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ’ ಎಂದಿದ್ದಾರೆ.</p><p>‘ಮನಮೋಹನ ಸಿಂಗ್ ಅವರ ಸ್ಮಾರಕವನ್ನು ರಾಜ್ಘಾಟ್ನಲ್ಲಿ ನಿರ್ಮಿಸಬೇಕು. ಈ ವಿಚಾರದಲ್ಲಿ ಬಿಜೆಪಿಯು ತನ್ನ ಸಂಕುಚಿತ ಮನೋಭಾವನೆಯನ್ನು ಬಿಡಬೇಕು. ಇಂತಹ ನಕಾರಾತ್ಮಕ ಧೋರೆಣೆಯನ್ನು ಇತಿಹಾಸ ಎಂದಿಗೂ ಕ್ಷಮಿಸುವುದಿಲ್ಲ’ ಎಂದು ಹೇಳಿದ್ದಾರೆ.</p>.ಮನಮೋಹನ್ ಸಿಂಗ್ ಸ್ಮಾರಕಕ್ಕೆ ಸರ್ಕಾರ ಜಾಗ ಮಂಜೂರು ಮಾಡಲಿದೆ: ಗೃಹ ಸಚಿವಾಲಯ.<p>ಇನ್ನು, ಈ ವಿಚಾರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಮಾಯಾವತಿ, ‘ದೇಶದ ಮೊದಲ ಸಿಖ್ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಅವರ ಕುಟುಂಬದವರು ಇಚ್ಛಿಸುವ ಸ್ಥಳದಲ್ಲಿಯೇ ನಡೆಸಬೇಕು. ಆ ಮೂಲಕ ಸಿಂಗ್ ಅವರ ಕುಟುಂಬದ ಭಾವನೆಗಳನ್ನು ಗೌರವಿಸಬೇಕು. ಈ ವಿಷಯದಲ್ಲಿ ರಾಜಕೀಯ ಬೇಡ’ ಎಂದಿದ್ದಾರೆ.</p><p>ಮನಮೋಹನ ಸಿಂಗ್ ಅಂತ್ಯಕ್ರಿಯೆಯನ್ನು ದೆಹಲಿಯ ನಿಗಮಬೋಧದಲ್ಲಿ ನಡೆಸಲು ಮುಂದಾದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸ್ಮಾರಕ ನಿರ್ಮಾಣವಾಗುವ ಸ್ಥಳದಲ್ಲಿಯೇ ಸಿಂಗ್ ಅವರ ಅಂತ್ಯಕ್ರಿಯೆ ನಡೆಸಬೇಕು ಎಂದು ಶುಕ್ರವಾರ ಪತ್ರ ಬರೆದು ಒತ್ತಾಯಿಸಿದ್ದರು.</p><p>ಇಂದು ಖರ್ಗೆ ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಗೃಹ ಸಚಿವಾಲಯ, ‘ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ಮಂಜೂರು ಮಾಡುತ್ತೇವೆ’ ಎಂದು ಭರವಸೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆ ಮತ್ತು ಸ್ಮಾರಕದ ವಿಚಾರವಾಗಿ ರಾಜಕೀಯ ಬೇಡ ಎಂದು ಕೇಂದ್ರ ಸರ್ಕಾರಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಎಸ್ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಮನವಿ ಮಾಡಿದ್ದಾರೆ.</p><p>ಈ ಕುರಿತು ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅಖಿಲೇಶ್ ಯಾದವ್, ‘ದೇಶದ ಮಾಜಿ ಪ್ರಧಾನಿಯನ್ನು ಗೌರವಿಸುವ ಸಾಂಪ್ರದಾಯವನ್ನು ಎತ್ತಿಹಿಡಿಯಬೇಕು. ಈ ವಿಷಯದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ’ ಎಂದಿದ್ದಾರೆ.</p><p>‘ಮನಮೋಹನ ಸಿಂಗ್ ಅವರ ಸ್ಮಾರಕವನ್ನು ರಾಜ್ಘಾಟ್ನಲ್ಲಿ ನಿರ್ಮಿಸಬೇಕು. ಈ ವಿಚಾರದಲ್ಲಿ ಬಿಜೆಪಿಯು ತನ್ನ ಸಂಕುಚಿತ ಮನೋಭಾವನೆಯನ್ನು ಬಿಡಬೇಕು. ಇಂತಹ ನಕಾರಾತ್ಮಕ ಧೋರೆಣೆಯನ್ನು ಇತಿಹಾಸ ಎಂದಿಗೂ ಕ್ಷಮಿಸುವುದಿಲ್ಲ’ ಎಂದು ಹೇಳಿದ್ದಾರೆ.</p>.ಮನಮೋಹನ್ ಸಿಂಗ್ ಸ್ಮಾರಕಕ್ಕೆ ಸರ್ಕಾರ ಜಾಗ ಮಂಜೂರು ಮಾಡಲಿದೆ: ಗೃಹ ಸಚಿವಾಲಯ.<p>ಇನ್ನು, ಈ ವಿಚಾರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಮಾಯಾವತಿ, ‘ದೇಶದ ಮೊದಲ ಸಿಖ್ ಪ್ರಧಾನಿ ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಅವರ ಕುಟುಂಬದವರು ಇಚ್ಛಿಸುವ ಸ್ಥಳದಲ್ಲಿಯೇ ನಡೆಸಬೇಕು. ಆ ಮೂಲಕ ಸಿಂಗ್ ಅವರ ಕುಟುಂಬದ ಭಾವನೆಗಳನ್ನು ಗೌರವಿಸಬೇಕು. ಈ ವಿಷಯದಲ್ಲಿ ರಾಜಕೀಯ ಬೇಡ’ ಎಂದಿದ್ದಾರೆ.</p><p>ಮನಮೋಹನ ಸಿಂಗ್ ಅಂತ್ಯಕ್ರಿಯೆಯನ್ನು ದೆಹಲಿಯ ನಿಗಮಬೋಧದಲ್ಲಿ ನಡೆಸಲು ಮುಂದಾದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸ್ಮಾರಕ ನಿರ್ಮಾಣವಾಗುವ ಸ್ಥಳದಲ್ಲಿಯೇ ಸಿಂಗ್ ಅವರ ಅಂತ್ಯಕ್ರಿಯೆ ನಡೆಸಬೇಕು ಎಂದು ಶುಕ್ರವಾರ ಪತ್ರ ಬರೆದು ಒತ್ತಾಯಿಸಿದ್ದರು.</p><p>ಇಂದು ಖರ್ಗೆ ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಗೃಹ ಸಚಿವಾಲಯ, ‘ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ಮಂಜೂರು ಮಾಡುತ್ತೇವೆ’ ಎಂದು ಭರವಸೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>