<p><strong>ಲಖನೌ</strong>: ಉತ್ತರ ಪ್ರದೇಶ ವಿಧಾನಸಭೆಗೆಮುಂದಿನ ವರ್ಷ ನಡೆಯಲಿರುವ ಚುನಾವಣೆಗಾಗಿ ಸಣ್ಣಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಮಾಜವಾದಿ ಪಕ್ಷದ ನಿರ್ಧಾರ ಆ ಪಕ್ಷದ ಅಸಹಾಯಕತೆಯನ್ನು ತೋರಿಸುತ್ತದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಶುಕ್ರವಾರ ಹೇಳಿದ್ದಾರೆ.</p>.<p>ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾವ ಪ್ರಮುಖ ರಾಜಕೀಯ ಪಕ್ಷಗಳೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಇತ್ತೀಚೆಗೆ ಹೇಳಿದ್ದರು.</p>.<p>ಈ ಹಿಂದೆ ನಡೆದ ಚುನಾವಣೆಗಳಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಮೈತ್ರಿ ಸಾಧಿಸಿ, ಚುನಾವಣೆ ಎದುರಿಸಿದ್ದರೂ, ಯಾವ ಪಕ್ಷಕ್ಕೂ ನಿರೀಕ್ಷಿತ ಫಲಿತಾಂಶ ಸಿಕ್ಕಿರಲಿಲ್ಲ. ಈ ಕಹಿ ಅನುಭವದ ಕಾರಣದಿಂದಾಗಿ, ಪ್ರಮುಖ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ಹಿಂಜರಿಯುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>‘ತನ್ನ ಸ್ವಾರ್ಥ ಹಾಗೂ ಸಂಕುಚಿತ ದೃಷ್ಟಿಕೋನದ ಫಲವಾಗಿ ಸಮಾಜವಾದಿ ಪಕ್ಷ ಈ ಹಿಂದಿನ ಚುನಾವಣೆಗಳಲ್ಲಿ ಸೋಲು ಕಂಡಿದೆ. ಅದರಲ್ಲೂ, ಪರಿಶಿಷ್ಟರ ವಿರೋಧಿ ನಿಲುವು, ಅದರ ಕಾರ್ಯವೈಖರಿಯಿಂದಾಗಿ ಇತರ ಪಕ್ಷಗಳು ಸಮಾಜವಾದಿ ಪಕ್ಷದ ಜೊತೆ ಮೈತ್ರಿಗೆ ಮುಂದಾಗುತ್ತಿಲ್ಲ’ ಎಂದು ಮಾಯಾವತಿ ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶ ವಿಧಾನಸಭೆಗೆಮುಂದಿನ ವರ್ಷ ನಡೆಯಲಿರುವ ಚುನಾವಣೆಗಾಗಿ ಸಣ್ಣಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಮಾಜವಾದಿ ಪಕ್ಷದ ನಿರ್ಧಾರ ಆ ಪಕ್ಷದ ಅಸಹಾಯಕತೆಯನ್ನು ತೋರಿಸುತ್ತದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಶುಕ್ರವಾರ ಹೇಳಿದ್ದಾರೆ.</p>.<p>ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾವ ಪ್ರಮುಖ ರಾಜಕೀಯ ಪಕ್ಷಗಳೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಇತ್ತೀಚೆಗೆ ಹೇಳಿದ್ದರು.</p>.<p>ಈ ಹಿಂದೆ ನಡೆದ ಚುನಾವಣೆಗಳಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಮೈತ್ರಿ ಸಾಧಿಸಿ, ಚುನಾವಣೆ ಎದುರಿಸಿದ್ದರೂ, ಯಾವ ಪಕ್ಷಕ್ಕೂ ನಿರೀಕ್ಷಿತ ಫಲಿತಾಂಶ ಸಿಕ್ಕಿರಲಿಲ್ಲ. ಈ ಕಹಿ ಅನುಭವದ ಕಾರಣದಿಂದಾಗಿ, ಪ್ರಮುಖ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ಹಿಂಜರಿಯುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>‘ತನ್ನ ಸ್ವಾರ್ಥ ಹಾಗೂ ಸಂಕುಚಿತ ದೃಷ್ಟಿಕೋನದ ಫಲವಾಗಿ ಸಮಾಜವಾದಿ ಪಕ್ಷ ಈ ಹಿಂದಿನ ಚುನಾವಣೆಗಳಲ್ಲಿ ಸೋಲು ಕಂಡಿದೆ. ಅದರಲ್ಲೂ, ಪರಿಶಿಷ್ಟರ ವಿರೋಧಿ ನಿಲುವು, ಅದರ ಕಾರ್ಯವೈಖರಿಯಿಂದಾಗಿ ಇತರ ಪಕ್ಷಗಳು ಸಮಾಜವಾದಿ ಪಕ್ಷದ ಜೊತೆ ಮೈತ್ರಿಗೆ ಮುಂದಾಗುತ್ತಿಲ್ಲ’ ಎಂದು ಮಾಯಾವತಿ ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>