<p>Will give Rs 40,000 annually to poor woman if SP returns to power: Akhilesh Yadav</p><p>ಲಖನೌ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ ಮಹಿಳೆಯರಿಗೆ ತಲಾ ₹40,000 ಸಹಾಯಧನ ನೀಡುವುದಾಗಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.</p><p>ಬುಧವಾರ ಖಾಸಗಿ ಸುದ್ದಿವಾಹಿನಿವೊಂದರ ಕಾರ್ಯಕ್ರಮದಲ್ಲಿ ಅಖಿಲೇಶ್ ಈ ಹೇಳಿಕೆ ನೀಡಿದ್ದಾರೆ. </p><p>ಹಿಂದೆ ಇದ್ದ ಸಮಾಜವಾದಿ ಪಕ್ಷದ ಸರ್ಕಾರವು ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ‘ಸಮಾಜವಾದಿ ಪಿಂಚಣಿ' ಯೋಜನೆಯಡಿ ತಿಂಗಳಿಗೆ ₹500ಗಳನ್ನು ನೀಡಿತ್ತು ಎಂದಿದ್ದಾರೆ.</p><p>‘2027ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಬಡ ತಾಯಂದಿರು ಮತ್ತು ಸಹೋದರಿಯರಿಗೆ ವರ್ಷಕ್ಕೆ ₹40,000 ನೀಡಲಾಗುವುದು’ಎಂದು ಅವರು ತಿಳಿಸಿದ್ದಾರೆ.</p><p>ಯೋಜನೆಯ ಕಾರ್ಯಸಾಧ್ಯತೆಯನ್ನು ಸಮರ್ಥಿಸಿಕೊಂಡ ಯಾದವ್, ದೊಡ್ಡ ಕೈಗಾರಿಕೋದ್ಯಮಿಗಳಿಂದ ಬಾಕಿ ತೆರಿಗೆ ಹಣವನ್ನು ವಸೂಲಿ ಮಾಡುವ ಮೂಲಕ ಅಗತ್ಯವಿರುವ ಹಣವನ್ನು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.</p><p>ಇತ್ತೀಚಿನ ಬಿಹಾರ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯ ಸಾಧಿಸಿ, ಇಂಡಿಯಾ ಬಣ ಹೀನಾಯ ಸೋಲು ಕಂಡಿತ್ತು. ಈ ಹಿನ್ನೆಲೆಯಲ್ಲಿ ಅಖಿಲೇಶ್ ಈ ಘೋಷಣೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.</p><p>ಚುನಾವಣೆಗೆ ಮುನ್ನ, ಬಿಹಾರ ಸರ್ಕಾರ ಮಹಿಳೆಯರಿಗೆ ₹10,000ನೀಡಲು ಪ್ರಾರಂಭಿಸಿತ್ತು. ಈ ಯೋಜನೆಯು ಮಹಿಳಾ ಮತದಾರರ ಮೇಲೆ ಗಮನಾರ್ಹ ಪ್ರಭಾವ ಬೀರಿದೆ ಎಂದೇ ವಿಶ್ಲೇಷಿಸಲಾಗಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>Will give Rs 40,000 annually to poor woman if SP returns to power: Akhilesh Yadav</p><p>ಲಖನೌ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ ಮಹಿಳೆಯರಿಗೆ ತಲಾ ₹40,000 ಸಹಾಯಧನ ನೀಡುವುದಾಗಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.</p><p>ಬುಧವಾರ ಖಾಸಗಿ ಸುದ್ದಿವಾಹಿನಿವೊಂದರ ಕಾರ್ಯಕ್ರಮದಲ್ಲಿ ಅಖಿಲೇಶ್ ಈ ಹೇಳಿಕೆ ನೀಡಿದ್ದಾರೆ. </p><p>ಹಿಂದೆ ಇದ್ದ ಸಮಾಜವಾದಿ ಪಕ್ಷದ ಸರ್ಕಾರವು ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ‘ಸಮಾಜವಾದಿ ಪಿಂಚಣಿ' ಯೋಜನೆಯಡಿ ತಿಂಗಳಿಗೆ ₹500ಗಳನ್ನು ನೀಡಿತ್ತು ಎಂದಿದ್ದಾರೆ.</p><p>‘2027ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಬಡ ತಾಯಂದಿರು ಮತ್ತು ಸಹೋದರಿಯರಿಗೆ ವರ್ಷಕ್ಕೆ ₹40,000 ನೀಡಲಾಗುವುದು’ಎಂದು ಅವರು ತಿಳಿಸಿದ್ದಾರೆ.</p><p>ಯೋಜನೆಯ ಕಾರ್ಯಸಾಧ್ಯತೆಯನ್ನು ಸಮರ್ಥಿಸಿಕೊಂಡ ಯಾದವ್, ದೊಡ್ಡ ಕೈಗಾರಿಕೋದ್ಯಮಿಗಳಿಂದ ಬಾಕಿ ತೆರಿಗೆ ಹಣವನ್ನು ವಸೂಲಿ ಮಾಡುವ ಮೂಲಕ ಅಗತ್ಯವಿರುವ ಹಣವನ್ನು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.</p><p>ಇತ್ತೀಚಿನ ಬಿಹಾರ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯ ಸಾಧಿಸಿ, ಇಂಡಿಯಾ ಬಣ ಹೀನಾಯ ಸೋಲು ಕಂಡಿತ್ತು. ಈ ಹಿನ್ನೆಲೆಯಲ್ಲಿ ಅಖಿಲೇಶ್ ಈ ಘೋಷಣೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.</p><p>ಚುನಾವಣೆಗೆ ಮುನ್ನ, ಬಿಹಾರ ಸರ್ಕಾರ ಮಹಿಳೆಯರಿಗೆ ₹10,000ನೀಡಲು ಪ್ರಾರಂಭಿಸಿತ್ತು. ಈ ಯೋಜನೆಯು ಮಹಿಳಾ ಮತದಾರರ ಮೇಲೆ ಗಮನಾರ್ಹ ಪ್ರಭಾವ ಬೀರಿದೆ ಎಂದೇ ವಿಶ್ಲೇಷಿಸಲಾಗಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>