<p><strong>ನವದೆಹಲಿ:</strong> ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಹಾಗೂ ಮಾಜಿ ಸಚಿವ ನಾರದ ರಾಯ್ ಸೋಮವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.</p><p>ಸದ್ಯದಲ್ಲೆ ಅವರು ಬಿಜೆಪಿ ಸೇರುವರು ಎಂದು ಮಾಧ್ಯಮಗಳು ವರದಿ ಮಾಡಿವೆ.</p><p>ರಾಯ್ ಅವರು ಅಮಿತ್ ಶಾ ಜೊತೆಗಿರುವ ಪೋಟೊವನ್ನು ಹಂಚಿಕೊಂಡಿದ್ದಾರೆ. ಈ ಫೋಟೊದಲ್ಲಿ ಎಸ್ಪಿ ಮುಖಂಡರಾದ ಓಂ ಪ್ರಕಾಶ್, ಅರುಣ್ ಕೂಡ ಇದ್ದಾರೆ. </p><p>‘ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಜಗತ್ತಿನಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ಬಡವರ ಸಬಲೀಕರಣ ಮತ್ತು ರಾಷ್ಟ್ರೀಯವಾದವನ್ನು ಬಲಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ಬೆಂಬಲ ಇದೆ ಜೈ ಶ್ರೀರಾಮ್‘ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>ಸೋಮವಾರ ಅವರು ಬಲಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ಈ ವೇಳೆ ಅಖಿಲೇಶ್ ಸಿಂಗ್ ಯಾದವ್ ಕೂಡ ಇದ್ದರು. </p><p> ಬಲಿಯಾದಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ. ಬಿಜೆಪಿಯಿಂದ ನೀರಜ್ ಶೇಖರ್, ಎಸ್ಪಿಯಿಂದ ಸನಾತನ ಪಾಂಡೆ ಸ್ಪರ್ಧೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಹಾಗೂ ಮಾಜಿ ಸಚಿವ ನಾರದ ರಾಯ್ ಸೋಮವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.</p><p>ಸದ್ಯದಲ್ಲೆ ಅವರು ಬಿಜೆಪಿ ಸೇರುವರು ಎಂದು ಮಾಧ್ಯಮಗಳು ವರದಿ ಮಾಡಿವೆ.</p><p>ರಾಯ್ ಅವರು ಅಮಿತ್ ಶಾ ಜೊತೆಗಿರುವ ಪೋಟೊವನ್ನು ಹಂಚಿಕೊಂಡಿದ್ದಾರೆ. ಈ ಫೋಟೊದಲ್ಲಿ ಎಸ್ಪಿ ಮುಖಂಡರಾದ ಓಂ ಪ್ರಕಾಶ್, ಅರುಣ್ ಕೂಡ ಇದ್ದಾರೆ. </p><p>‘ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಜಗತ್ತಿನಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ಬಡವರ ಸಬಲೀಕರಣ ಮತ್ತು ರಾಷ್ಟ್ರೀಯವಾದವನ್ನು ಬಲಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ಬೆಂಬಲ ಇದೆ ಜೈ ಶ್ರೀರಾಮ್‘ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>ಸೋಮವಾರ ಅವರು ಬಲಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ಈ ವೇಳೆ ಅಖಿಲೇಶ್ ಸಿಂಗ್ ಯಾದವ್ ಕೂಡ ಇದ್ದರು. </p><p> ಬಲಿಯಾದಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ. ಬಿಜೆಪಿಯಿಂದ ನೀರಜ್ ಶೇಖರ್, ಎಸ್ಪಿಯಿಂದ ಸನಾತನ ಪಾಂಡೆ ಸ್ಪರ್ಧೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>