<p><strong>ಬರೇಲಿ (ಉತ್ತರಪ್ರದೇಶ):</strong> ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ನಾಯಕ ಸುಲ್ತಾನ್ ಬೇಗ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. </p><p>ಬಿಜೆಪಿ ನಾಯಕ ವೀರಪಾಲ್ ಸಿಂಗ್ ಅವರು ನೀಡಿದ ದೂರಿನ ಮೇರೆಗೆ ಸುಲ್ತಾನ್ ಬೇಗ್ ವಿರುದ್ಧ ಉತ್ತರ ಪ್ರದೇಶ ಜಿಲ್ಲೆಯ ಶೇರ್ಗಢ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. </p><p>ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 353, 299 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲಿ ಬೇಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಸಿಂಗ್ ಹೇಳಿದ್ದಾರೆ.</p><p>ಸಿಎಂ ಯೋಗಿ ನೇತೃತ್ವದ ರಾಜ್ಯ ಸರ್ಕಾರ ಮಹಾಕುಂಭಮೇಳವನ್ನು ‘ಸ್ಮಶಾನ ಸ್ಥಳ’ವನ್ನಾಗಿಸಿದೆ ಎಂದು ಆರೋಪಿಸಿ ಸುಲ್ತಾನ್ ಬೇಗ್ ಟೀಕಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. </p><p>'ಯೋಗಿ ಸರ್ಕಾರದ ನಿರ್ಲಕ್ಷ್ಯ ಮತ್ತು ದುರಾಡಳಿತದಿಂದ ಆಗಾಗ್ಗೆ ಬೆಂಕಿ ಮತ್ತು ಕಾಲ್ತುಳಿತ ದುರಂತಗಳು ಸಂಭವಿಸಿ ಜನರ ಸಾವು–ನೋವುಗಳಿಗೆ ಕಾರಣವಾಗಿದೆ. ಸಮರ್ಪಕ ವ್ಯವಸ್ಥೆ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ" ಎಂದು ಬೇಗ್ ವಿಡಿಯೊದಲ್ಲಿ ಹೇಳಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರೇಲಿ (ಉತ್ತರಪ್ರದೇಶ):</strong> ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ನಾಯಕ ಸುಲ್ತಾನ್ ಬೇಗ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. </p><p>ಬಿಜೆಪಿ ನಾಯಕ ವೀರಪಾಲ್ ಸಿಂಗ್ ಅವರು ನೀಡಿದ ದೂರಿನ ಮೇರೆಗೆ ಸುಲ್ತಾನ್ ಬೇಗ್ ವಿರುದ್ಧ ಉತ್ತರ ಪ್ರದೇಶ ಜಿಲ್ಲೆಯ ಶೇರ್ಗಢ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. </p><p>ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 353, 299 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲಿ ಬೇಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಸಿಂಗ್ ಹೇಳಿದ್ದಾರೆ.</p><p>ಸಿಎಂ ಯೋಗಿ ನೇತೃತ್ವದ ರಾಜ್ಯ ಸರ್ಕಾರ ಮಹಾಕುಂಭಮೇಳವನ್ನು ‘ಸ್ಮಶಾನ ಸ್ಥಳ’ವನ್ನಾಗಿಸಿದೆ ಎಂದು ಆರೋಪಿಸಿ ಸುಲ್ತಾನ್ ಬೇಗ್ ಟೀಕಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. </p><p>'ಯೋಗಿ ಸರ್ಕಾರದ ನಿರ್ಲಕ್ಷ್ಯ ಮತ್ತು ದುರಾಡಳಿತದಿಂದ ಆಗಾಗ್ಗೆ ಬೆಂಕಿ ಮತ್ತು ಕಾಲ್ತುಳಿತ ದುರಂತಗಳು ಸಂಭವಿಸಿ ಜನರ ಸಾವು–ನೋವುಗಳಿಗೆ ಕಾರಣವಾಗಿದೆ. ಸಮರ್ಪಕ ವ್ಯವಸ್ಥೆ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ" ಎಂದು ಬೇಗ್ ವಿಡಿಯೊದಲ್ಲಿ ಹೇಳಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>