<p><strong>ಬಿಜ್ನೋರ್ (ಉತ್ತರ ಪ್ರದೇಶ):</strong> 2020ರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಗೀನಾ ಕ್ಷೇತ್ರದ ಶಾಸಕ ಮನೋಜ್ ಪರಾಸ್ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p><p>2020ರ ಸೆಪ್ಟೆಂಬರ್ 29ರಂದು ಝಾಲು ರಸ್ತೆಯಲ್ಲಿ ತಮ್ಮ ಮೇಲೆ ಮನೋಜ್, ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ರಸೀದ್ಪುರ ಗರ್ಹಿಯ ಗ್ರಾಮಸ್ಥ ಛತರ್ ಸಿಂಗ್ ಅವರು ದೂರು ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ ಜಿತೇಂದ್ರ ಚೌಹಾಣ್ ಹೇಳಿದ್ದಾರೆ.</p><p>ಇತರ ಕೆಲವು ಸಮಾಜವಾದಿ ಪಕ್ಷದ ನಾಯಕರ ಜೊತೆಗೆ, ಮಾಜಿ ಸಚಿವ ಮತ್ತು ಹಾಲಿ ಶಾಸಕರಾದ ಪರಾಸ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಗಿದೆ.</p><p>ತರುವಾಯ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.</p><p>ಮಂಗಳವಾರ, ಪರಾಸ್ ನ್ಯಾಯಾಧೀಶ ಶಂತನು ತ್ಯಾಗಿ ಅವರ ಪೀಠದ ಮುಂದೆ ಹಾಜರಾಗಿದ್ದರು. ಈ ವೇಳೆ ಪೀಠ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಜ್ನೋರ್ (ಉತ್ತರ ಪ್ರದೇಶ):</strong> 2020ರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಗೀನಾ ಕ್ಷೇತ್ರದ ಶಾಸಕ ಮನೋಜ್ ಪರಾಸ್ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p><p>2020ರ ಸೆಪ್ಟೆಂಬರ್ 29ರಂದು ಝಾಲು ರಸ್ತೆಯಲ್ಲಿ ತಮ್ಮ ಮೇಲೆ ಮನೋಜ್, ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ರಸೀದ್ಪುರ ಗರ್ಹಿಯ ಗ್ರಾಮಸ್ಥ ಛತರ್ ಸಿಂಗ್ ಅವರು ದೂರು ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ ಜಿತೇಂದ್ರ ಚೌಹಾಣ್ ಹೇಳಿದ್ದಾರೆ.</p><p>ಇತರ ಕೆಲವು ಸಮಾಜವಾದಿ ಪಕ್ಷದ ನಾಯಕರ ಜೊತೆಗೆ, ಮಾಜಿ ಸಚಿವ ಮತ್ತು ಹಾಲಿ ಶಾಸಕರಾದ ಪರಾಸ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಗಿದೆ.</p><p>ತರುವಾಯ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.</p><p>ಮಂಗಳವಾರ, ಪರಾಸ್ ನ್ಯಾಯಾಧೀಶ ಶಂತನು ತ್ಯಾಗಿ ಅವರ ಪೀಠದ ಮುಂದೆ ಹಾಜರಾಗಿದ್ದರು. ಈ ವೇಳೆ ಪೀಠ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>