<p><strong>ಮುಂಬೈ:</strong> ಸಮಾಜವಾದಿ ಶಾಸಕ ಅಬೂ ಆಸಿಂ ಆಜ್ಮಿ ನೀಡಿದ್ದ ಮೊಘಲ್ ದೊರೆ ಔರಂಗಜೇಬನ ಕುರಿತ ಹೇಳಿಕೆ ವಿವಾದ ಸೃಷ್ಟಿಸಿದ್ದು, ಮಹಾರಾಷ್ಟ್ರ ವಿಧಾನಸಭೆಯಿಂದ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ.</p><p>ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ ಅಂತ್ಯವಾಗುವವರೆಗೆ ಆಜ್ಮಿಯನ್ನು ಅಮಾನತಿನಲ್ಲಿಡಲಾಗಿದೆ. ಮಾರ್ಚ್ 26ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ.</p><p>ರಾಜ್ಯ ಸಚಿವ ಚಂದ್ರಕಾಂತ್ ಪಾಟೀಲ್ ಸದನದಲ್ಲಿ ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದ್ದು, ಮತದಾನದ ಮೂಲಕ ಅಮಾನತನ್ನು ಘೋಷಿಸಲಾಯಿತು.</p>.ಔರಂಗಜೇಬನ ಶ್ಲಾಘನೆ: ಎಸ್ಪಿ ಶಾಸಕ ಆಜ್ಮಿ ವಿರುದ್ಧ ತನಿಖೆ.<p><strong>ಆಜ್ಮಿ ಹೇಳಿದ್ದೇನು?</strong></p><p>ಮಹಾರಾಷ್ಟ್ರದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷರಾಗಿರುವ ಆಜ್ಮಿ ಅವರು, ‘ಔರಂಗಜೇಬ ಅವರ ಆಡಳಿತದಲ್ಲಿ ಭಾರತದ ಗಡಿಯು ಅಫ್ಗಾನಿಸ್ತಾನ ಮತ್ತು ಬರ್ಮಾ (ಮ್ಯಾನ್ಮಾರ್ )ವರೆಗೂ ವಿಸ್ತರಿಸಿತ್ತು. ನಮ್ಮ ಜಿಡಿಪಿಯು ವಿಶ್ವದ ಜಿಡಿಪಿಯ ಶೇ 24ರಷ್ಟಿತ್ತು. ಭಾರತವನ್ನು ಚಿನ್ನದ ಗುಬ್ಬಚ್ಚಿ ಎಂದು ಕರೆಯಲಾಗುತ್ತಿತ್ತು’ ಎಂದು ಹೇಳಿದ್ದರು.</p><p>ಔರಂಗಜೇಬ ಮತ್ತು ಛತ್ರಪತಿ ಸಂಭಾಜಿ ಮಹಾರಾಜ ನಡುವಿನ ಯುದ್ಧದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದೊಂದು ರಾಜಕೀಯ ಕದನವಾಗಿತ್ತು ಎಂದು ಹೇಳಿದ್ದರು.</p>.ಗೋವಾ ಬೀದಿಯಲ್ಲಿ ಗಲಾಟೆ: ಮಹಾರಾಷ್ಟ್ರ ಶಾಸಕ ಆಜ್ಮಿ ಪುತ್ರನ ವಿರುದ್ಧ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಸಮಾಜವಾದಿ ಶಾಸಕ ಅಬೂ ಆಸಿಂ ಆಜ್ಮಿ ನೀಡಿದ್ದ ಮೊಘಲ್ ದೊರೆ ಔರಂಗಜೇಬನ ಕುರಿತ ಹೇಳಿಕೆ ವಿವಾದ ಸೃಷ್ಟಿಸಿದ್ದು, ಮಹಾರಾಷ್ಟ್ರ ವಿಧಾನಸಭೆಯಿಂದ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ.</p><p>ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ ಅಂತ್ಯವಾಗುವವರೆಗೆ ಆಜ್ಮಿಯನ್ನು ಅಮಾನತಿನಲ್ಲಿಡಲಾಗಿದೆ. ಮಾರ್ಚ್ 26ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ.</p><p>ರಾಜ್ಯ ಸಚಿವ ಚಂದ್ರಕಾಂತ್ ಪಾಟೀಲ್ ಸದನದಲ್ಲಿ ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದ್ದು, ಮತದಾನದ ಮೂಲಕ ಅಮಾನತನ್ನು ಘೋಷಿಸಲಾಯಿತು.</p>.ಔರಂಗಜೇಬನ ಶ್ಲಾಘನೆ: ಎಸ್ಪಿ ಶಾಸಕ ಆಜ್ಮಿ ವಿರುದ್ಧ ತನಿಖೆ.<p><strong>ಆಜ್ಮಿ ಹೇಳಿದ್ದೇನು?</strong></p><p>ಮಹಾರಾಷ್ಟ್ರದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷರಾಗಿರುವ ಆಜ್ಮಿ ಅವರು, ‘ಔರಂಗಜೇಬ ಅವರ ಆಡಳಿತದಲ್ಲಿ ಭಾರತದ ಗಡಿಯು ಅಫ್ಗಾನಿಸ್ತಾನ ಮತ್ತು ಬರ್ಮಾ (ಮ್ಯಾನ್ಮಾರ್ )ವರೆಗೂ ವಿಸ್ತರಿಸಿತ್ತು. ನಮ್ಮ ಜಿಡಿಪಿಯು ವಿಶ್ವದ ಜಿಡಿಪಿಯ ಶೇ 24ರಷ್ಟಿತ್ತು. ಭಾರತವನ್ನು ಚಿನ್ನದ ಗುಬ್ಬಚ್ಚಿ ಎಂದು ಕರೆಯಲಾಗುತ್ತಿತ್ತು’ ಎಂದು ಹೇಳಿದ್ದರು.</p><p>ಔರಂಗಜೇಬ ಮತ್ತು ಛತ್ರಪತಿ ಸಂಭಾಜಿ ಮಹಾರಾಜ ನಡುವಿನ ಯುದ್ಧದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದೊಂದು ರಾಜಕೀಯ ಕದನವಾಗಿತ್ತು ಎಂದು ಹೇಳಿದ್ದರು.</p>.ಗೋವಾ ಬೀದಿಯಲ್ಲಿ ಗಲಾಟೆ: ಮಹಾರಾಷ್ಟ್ರ ಶಾಸಕ ಆಜ್ಮಿ ಪುತ್ರನ ವಿರುದ್ಧ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>