ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆ: ಡಿಎಂಕೆ ಸಂಸದರ ‘ಗೋಮೂತ್ರ ರಾಜ್ಯಗಳು’ ಹೇಳಿಕೆ ತೆಗೆದು ಹಾಕಿದ ಸ್ಪೀಕರ್‌

Published 6 ಡಿಸೆಂಬರ್ 2023, 6:31 IST
Last Updated 6 ಡಿಸೆಂಬರ್ 2023, 6:31 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಭಾರತದ ರಾಜ್ಯಗಳನ್ನು ‘ಗೋಮೂತ್ರ ರಾಜ್ಯಗಳು’ ಎಂದು ಟೀಕಿಸಿರುವ ಡಿಎಂಕೆ ಸಂಸದ ಡಿ.ಎನ್‌.ಬಿ ಸೆಂಥಿಲ್ ಕುಮಾರ್‌ ಅವರ ಹೇಳಿಕೆಯನ್ನು ಲೋಕಸಭೆ ಕಡತದಿಂದ ಸ್ಪೀಕರ್‌ ಓಂ ಬಿರ್ಲಾ ತೆಗೆದು ಹಾಕಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಎರಡು ಮಸೂದೆಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಮಾತನಾಡಿದ ಸೆಂಥಿಲ್‌ ಕುಮಾರ್‌, ‘ಹಿಂದಿ ಭಾಷಿಕ ಪ್ರದೇಶದಲ್ಲಿ ಮಾತ್ರ ಗೆಲ್ಲುವ ಶಕ್ತಿ ಬಿಜೆಪಿಗಿದೆ ಎಂದು ಜನರಿಗೆ ಅರಿವಾಗಿದೆ. ನಾವು ಆ ಪ್ರದೇಶವನ್ನು ಗೋಮೂತ್ರ ರಾಜ್ಯಗಳು ಎಂದು ಕರೆಯುತ್ತೇವೆ’ ಎಂದು ಹೇಳಿದ್ದರು.

ತಮ್ಮ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ಸಚಿವ ಸಂಥಿಲ್‌ ಕುಮಾರ್ ಕ್ಷಮೆಯಾಚಿಸಿದ್ದರು.

‘ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡುವ ವೇಳೆ, ಅನುಚಿತ ಪದವೊಂದನ್ನು ನಾನು ಬಳಸಿದ್ದೇನೆ. ದುರುದ್ದೇಶದಿಂದ ಈ ಪದವನ್ನು ಬಳಸಿಲ್ಲ. ಈ ಬಗ್ಗೆ ಕ್ಷಮೆಯಾಚಿಸುತ್ತೇನೆ’ ಎಂದು ತಮ್ಮ ಎಕ್ಸ್‌ನಲ್ಲಿ ಸೆಂಥಿಲ್‌ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT