<p><strong>ನವದೆಹಲಿ</strong>: ಉತ್ತರ ಭಾರತದ ರಾಜ್ಯಗಳನ್ನು ‘ಗೋಮೂತ್ರ ರಾಜ್ಯಗಳು’ ಎಂದು ಟೀಕಿಸಿರುವ ಡಿಎಂಕೆ ಸಂಸದ ಡಿ.ಎನ್.ಬಿ ಸೆಂಥಿಲ್ ಕುಮಾರ್ ಅವರ ಹೇಳಿಕೆಯನ್ನು ಲೋಕಸಭೆ ಕಡತದಿಂದ ಸ್ಪೀಕರ್ ಓಂ ಬಿರ್ಲಾ ತೆಗೆದು ಹಾಕಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಎರಡು ಮಸೂದೆಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಮಾತನಾಡಿದ ಸೆಂಥಿಲ್ ಕುಮಾರ್, ‘ಹಿಂದಿ ಭಾಷಿಕ ಪ್ರದೇಶದಲ್ಲಿ ಮಾತ್ರ ಗೆಲ್ಲುವ ಶಕ್ತಿ ಬಿಜೆಪಿಗಿದೆ ಎಂದು ಜನರಿಗೆ ಅರಿವಾಗಿದೆ. ನಾವು ಆ ಪ್ರದೇಶವನ್ನು ಗೋಮೂತ್ರ ರಾಜ್ಯಗಳು ಎಂದು ಕರೆಯುತ್ತೇವೆ’ ಎಂದು ಹೇಳಿದ್ದರು.</p><p>ತಮ್ಮ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ಸಚಿವ ಸಂಥಿಲ್ ಕುಮಾರ್ ಕ್ಷಮೆಯಾಚಿಸಿದ್ದರು.</p><p>‘ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡುವ ವೇಳೆ, ಅನುಚಿತ ಪದವೊಂದನ್ನು ನಾನು ಬಳಸಿದ್ದೇನೆ. ದುರುದ್ದೇಶದಿಂದ ಈ ಪದವನ್ನು ಬಳಸಿಲ್ಲ. ಈ ಬಗ್ಗೆ ಕ್ಷಮೆಯಾಚಿಸುತ್ತೇನೆ’ ಎಂದು ತಮ್ಮ ಎಕ್ಸ್ನಲ್ಲಿ ಸೆಂಥಿಲ್ ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉತ್ತರ ಭಾರತದ ರಾಜ್ಯಗಳನ್ನು ‘ಗೋಮೂತ್ರ ರಾಜ್ಯಗಳು’ ಎಂದು ಟೀಕಿಸಿರುವ ಡಿಎಂಕೆ ಸಂಸದ ಡಿ.ಎನ್.ಬಿ ಸೆಂಥಿಲ್ ಕುಮಾರ್ ಅವರ ಹೇಳಿಕೆಯನ್ನು ಲೋಕಸಭೆ ಕಡತದಿಂದ ಸ್ಪೀಕರ್ ಓಂ ಬಿರ್ಲಾ ತೆಗೆದು ಹಾಕಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಎರಡು ಮಸೂದೆಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಮಾತನಾಡಿದ ಸೆಂಥಿಲ್ ಕುಮಾರ್, ‘ಹಿಂದಿ ಭಾಷಿಕ ಪ್ರದೇಶದಲ್ಲಿ ಮಾತ್ರ ಗೆಲ್ಲುವ ಶಕ್ತಿ ಬಿಜೆಪಿಗಿದೆ ಎಂದು ಜನರಿಗೆ ಅರಿವಾಗಿದೆ. ನಾವು ಆ ಪ್ರದೇಶವನ್ನು ಗೋಮೂತ್ರ ರಾಜ್ಯಗಳು ಎಂದು ಕರೆಯುತ್ತೇವೆ’ ಎಂದು ಹೇಳಿದ್ದರು.</p><p>ತಮ್ಮ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ಸಚಿವ ಸಂಥಿಲ್ ಕುಮಾರ್ ಕ್ಷಮೆಯಾಚಿಸಿದ್ದರು.</p><p>‘ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡುವ ವೇಳೆ, ಅನುಚಿತ ಪದವೊಂದನ್ನು ನಾನು ಬಳಸಿದ್ದೇನೆ. ದುರುದ್ದೇಶದಿಂದ ಈ ಪದವನ್ನು ಬಳಸಿಲ್ಲ. ಈ ಬಗ್ಗೆ ಕ್ಷಮೆಯಾಚಿಸುತ್ತೇನೆ’ ಎಂದು ತಮ್ಮ ಎಕ್ಸ್ನಲ್ಲಿ ಸೆಂಥಿಲ್ ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>