<p><strong>ಶ್ರೀನಗರ:</strong> ಜಮ್ಮುವಿನಿಂದ ಯಾತ್ರಾರ್ಥಿಗಳನ್ನು ಅಯೋಧ್ಯೆಗೆ ಕರೆದೊಯ್ಯುವ ವಿಶೇಷ ‘ಆಸ್ತಾ’ ರೈಲಿಗೆ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಅಶೋಕ್ ಕೌಲ್ ಚಾಲನೆ ನೀಡಿದ್ದಾರೆ.</p>.<p>ಸುಮಾರು 1,100ಕ್ಕೂ ಹೆಚ್ಚು ಭಕ್ತರನ್ನು ಹೊತ್ತ ರೈಲು ಜಮ್ಮು ರೈಲು ನಿಲ್ದಾಣದಿಂದ ಬೆಳಿಗ್ಗೆ 11.55ಕ್ಕೆ ಹೊರಟಿತು.</p><p>ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ನಡೆದ ಬಾಲ ರಾಮ ಪ್ರಾಣ ಪ್ರತಿಷ್ಠಾಪನೆಯ ನಂತರ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ರಾಮ ಭಕ್ತರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ.</p><p>ರೈಲಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅಶೋಕ್ ಕೌಲ್, ‘ಇಲ್ಲಿರುವ ಎಲ್ಲರಿಗೂ ಅಭಿನಂದನೆಗಳು. ಜಮ್ಮುವಿನಿಂದ ಅಯೋಧ್ಯೆಗೆ ಚಾಲನೆಗೊಂಡ ಮೊದಲ ರೈಲು ಇದಾಗಿದೆ. ನಾಳೆ ಮತ್ತೊಂದು ರೈಲು ಅಯೋಧ್ಯೆಗೆ ಹೊರಡಲಿದೆ. ಜಮ್ಮುವಿನಿಂದ ಅಯೋಧ್ಯೆಗೆ ರೈಲುಗಳ ಓಡಾಟ ಮುಂದುವರಿಯಲಿದೆ’ ಎಂದರು.</p><p>ರಾಮ ಮಂದಿರ ನಿರ್ಮಾಣಕ್ಕಾಗಿ ಜಮ್ಮುವಿನ ಜನರ ಪ್ರಯತ್ನವನ್ನು ಶ್ಲಾಘಿಸಿದ ಕೌಲ್, ‘ರಾಮ ಮಂದಿರ ಬಾಲ ರಾಮನ ದರ್ಶನಕ್ಕಾಗಿ ಹೆಚ್ಚಿನ ಸಂಖ್ಯೆಯ ಜನರು ಅಯೋಧ್ಯೆಗೆ ಹೊರಟಿದ್ದಾರೆ. ಅವರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.</p><p>ಜಮ್ಮು ರೈಲು ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಿದ್ದ ಭಕ್ತರು, ರಾಮ ಭಜನೆ ಮಾಡುವುದರ ಜತೆಗೆ ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮುವಿನಿಂದ ಯಾತ್ರಾರ್ಥಿಗಳನ್ನು ಅಯೋಧ್ಯೆಗೆ ಕರೆದೊಯ್ಯುವ ವಿಶೇಷ ‘ಆಸ್ತಾ’ ರೈಲಿಗೆ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಅಶೋಕ್ ಕೌಲ್ ಚಾಲನೆ ನೀಡಿದ್ದಾರೆ.</p>.<p>ಸುಮಾರು 1,100ಕ್ಕೂ ಹೆಚ್ಚು ಭಕ್ತರನ್ನು ಹೊತ್ತ ರೈಲು ಜಮ್ಮು ರೈಲು ನಿಲ್ದಾಣದಿಂದ ಬೆಳಿಗ್ಗೆ 11.55ಕ್ಕೆ ಹೊರಟಿತು.</p><p>ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ನಡೆದ ಬಾಲ ರಾಮ ಪ್ರಾಣ ಪ್ರತಿಷ್ಠಾಪನೆಯ ನಂತರ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ರಾಮ ಭಕ್ತರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ.</p><p>ರೈಲಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅಶೋಕ್ ಕೌಲ್, ‘ಇಲ್ಲಿರುವ ಎಲ್ಲರಿಗೂ ಅಭಿನಂದನೆಗಳು. ಜಮ್ಮುವಿನಿಂದ ಅಯೋಧ್ಯೆಗೆ ಚಾಲನೆಗೊಂಡ ಮೊದಲ ರೈಲು ಇದಾಗಿದೆ. ನಾಳೆ ಮತ್ತೊಂದು ರೈಲು ಅಯೋಧ್ಯೆಗೆ ಹೊರಡಲಿದೆ. ಜಮ್ಮುವಿನಿಂದ ಅಯೋಧ್ಯೆಗೆ ರೈಲುಗಳ ಓಡಾಟ ಮುಂದುವರಿಯಲಿದೆ’ ಎಂದರು.</p><p>ರಾಮ ಮಂದಿರ ನಿರ್ಮಾಣಕ್ಕಾಗಿ ಜಮ್ಮುವಿನ ಜನರ ಪ್ರಯತ್ನವನ್ನು ಶ್ಲಾಘಿಸಿದ ಕೌಲ್, ‘ರಾಮ ಮಂದಿರ ಬಾಲ ರಾಮನ ದರ್ಶನಕ್ಕಾಗಿ ಹೆಚ್ಚಿನ ಸಂಖ್ಯೆಯ ಜನರು ಅಯೋಧ್ಯೆಗೆ ಹೊರಟಿದ್ದಾರೆ. ಅವರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.</p><p>ಜಮ್ಮು ರೈಲು ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಿದ್ದ ಭಕ್ತರು, ರಾಮ ಭಜನೆ ಮಾಡುವುದರ ಜತೆಗೆ ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>