<p><strong>ಶ್ರೀನಗರ</strong>: ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯಿಂದ ಜಮ್ಮು–ಕಾಶ್ಮೀರದಲ್ಲಿ ತೊಂದರೆಗೀಡಾದ ಕುಟುಂಬಗಳ ಸಹಾಯಕ್ಕಾಗಿ ವಿಶೇಷ ಘಟಕವನ್ನು ಸ್ಥಾಪಿಸುವುದರ ಜತೆಗೆ ಟೋಲ್ ಫ್ರೀ ನಂಬರ್ ಅನ್ನು ಶೀಘ್ರವೇ ಪರಿಚಯಿಸುವುದಾಗಿ ಜಮ್ಮು–ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಘೋಷಿಸಿದ್ದಾರೆ. </p>.<p>ಅಲ್ಲದೇ, ಬಲವಂತವಾಗಿ ಮುಚ್ಚಿಹಾಕಿರುವ ಭಯೋತ್ಪಾದಕ ಪ್ರಕರಣಗಳನ್ನು ಮತ್ತೆ ತೆರೆದು ಅಪರಾಧಿಗಳಿಗೆ ಶಿಕ್ಷೆ ಖಾತರಿಪಡಿಸಿ, ನೊಂದವರಿಗೆ ನ್ಯಾಯ ದೊರಕಿಸಿಕೊಡುವಂತೆ ಉಪ ಪೊಲೀಸ್ ಕಮಿಷನರ್ ಎಸ್ಎಸ್ಪಿಗಳಿಗೆ ಸಿನ್ಹಾ ಆದೇಶ ನೀಡಿದ್ದಾರೆ. </p>.<p>ಭಯೋತ್ಪಾದಕ ದಾಳಿಗಳಿಗೆ ಬಲಿಯಾದ ಕಾಶ್ಮೀರಿಗಳ ಕುಟುಂಬವನ್ನು ಸಿನ್ಹಾ ಭಾನುವಾರ ಭೇಟಿಯಾಗಿ, ಅವರ ಸಂಕಷ್ಟ ಆಲಿಸಿದ್ದರು.</p>.<p class="title">ಇದೀಗ ಎಕ್ಸ್ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ‘ಸಂತ್ರಸ್ತ ಕುಟುಂಬಗಳ ಸಹಾಯಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ಕಾರ್ಯಾಲಯದಲ್ಲಿ ಒಂದು ವಿಶೇಷ ಘಟಕ ಸ್ಥಾಪಿಸಲಾಗುತ್ತದೆ. ಜತೆಗೆ ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲೂ ವಿಶೇಷ ಘಟಕ ಸ್ಥಾಪಿಸಿ, ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನೂ ಕುಟುಂಬಗಳಿಗೆ ಒದಗಿಸಿಕೊಡಲಾಗುವುದು’ ಎಂದಿದ್ದಾರೆ.</p>.<p class="title">ಇದಲ್ಲದೇ, ಭಯೋತ್ಪಾದಕರು ವಶಪಡಿಸಿಕೊಂಡಿರುವ ಕಾಶ್ಮೀರಿಗಳ ಆಸ್ತಿ–ಪಾಸ್ತಿಗಳನ್ನು ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವ ಅವರು, ಭಯೋತ್ಪಾದಕರ ಜತೆಗೆ ಉಗ್ರರನ್ನು ಪ್ರೋತ್ಸಾಹಿಸುವವರನ್ನೂ ಬಂಧಿಸುವಂತೆ ನಿರ್ದೇಶಿಸಿದ್ದಾರೆ. ಸರ್ಕಾರಿ ಇಲಾಖೆಗಳಲ್ಲಿ ಅಂಥವರು ಇದ್ದಾರೆಯೇ ಎಂಬುದನ್ನು ಪರಿಶೀಲಿಸುವಂತಯೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯಿಂದ ಜಮ್ಮು–ಕಾಶ್ಮೀರದಲ್ಲಿ ತೊಂದರೆಗೀಡಾದ ಕುಟುಂಬಗಳ ಸಹಾಯಕ್ಕಾಗಿ ವಿಶೇಷ ಘಟಕವನ್ನು ಸ್ಥಾಪಿಸುವುದರ ಜತೆಗೆ ಟೋಲ್ ಫ್ರೀ ನಂಬರ್ ಅನ್ನು ಶೀಘ್ರವೇ ಪರಿಚಯಿಸುವುದಾಗಿ ಜಮ್ಮು–ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಘೋಷಿಸಿದ್ದಾರೆ. </p>.<p>ಅಲ್ಲದೇ, ಬಲವಂತವಾಗಿ ಮುಚ್ಚಿಹಾಕಿರುವ ಭಯೋತ್ಪಾದಕ ಪ್ರಕರಣಗಳನ್ನು ಮತ್ತೆ ತೆರೆದು ಅಪರಾಧಿಗಳಿಗೆ ಶಿಕ್ಷೆ ಖಾತರಿಪಡಿಸಿ, ನೊಂದವರಿಗೆ ನ್ಯಾಯ ದೊರಕಿಸಿಕೊಡುವಂತೆ ಉಪ ಪೊಲೀಸ್ ಕಮಿಷನರ್ ಎಸ್ಎಸ್ಪಿಗಳಿಗೆ ಸಿನ್ಹಾ ಆದೇಶ ನೀಡಿದ್ದಾರೆ. </p>.<p>ಭಯೋತ್ಪಾದಕ ದಾಳಿಗಳಿಗೆ ಬಲಿಯಾದ ಕಾಶ್ಮೀರಿಗಳ ಕುಟುಂಬವನ್ನು ಸಿನ್ಹಾ ಭಾನುವಾರ ಭೇಟಿಯಾಗಿ, ಅವರ ಸಂಕಷ್ಟ ಆಲಿಸಿದ್ದರು.</p>.<p class="title">ಇದೀಗ ಎಕ್ಸ್ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ‘ಸಂತ್ರಸ್ತ ಕುಟುಂಬಗಳ ಸಹಾಯಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ಕಾರ್ಯಾಲಯದಲ್ಲಿ ಒಂದು ವಿಶೇಷ ಘಟಕ ಸ್ಥಾಪಿಸಲಾಗುತ್ತದೆ. ಜತೆಗೆ ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲೂ ವಿಶೇಷ ಘಟಕ ಸ್ಥಾಪಿಸಿ, ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನೂ ಕುಟುಂಬಗಳಿಗೆ ಒದಗಿಸಿಕೊಡಲಾಗುವುದು’ ಎಂದಿದ್ದಾರೆ.</p>.<p class="title">ಇದಲ್ಲದೇ, ಭಯೋತ್ಪಾದಕರು ವಶಪಡಿಸಿಕೊಂಡಿರುವ ಕಾಶ್ಮೀರಿಗಳ ಆಸ್ತಿ–ಪಾಸ್ತಿಗಳನ್ನು ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವ ಅವರು, ಭಯೋತ್ಪಾದಕರ ಜತೆಗೆ ಉಗ್ರರನ್ನು ಪ್ರೋತ್ಸಾಹಿಸುವವರನ್ನೂ ಬಂಧಿಸುವಂತೆ ನಿರ್ದೇಶಿಸಿದ್ದಾರೆ. ಸರ್ಕಾರಿ ಇಲಾಖೆಗಳಲ್ಲಿ ಅಂಥವರು ಇದ್ದಾರೆಯೇ ಎಂಬುದನ್ನು ಪರಿಶೀಲಿಸುವಂತಯೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>