ಮುಂಬೈ (ಪಿಟಿಐ): ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರಿಂದ ಆಸ್ತಿ ಖರೀದಿ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲಾಗಿರುವ ಎನ್ಸಿಪಿ ಮುಖಂಡ ನವಾಬ್ ಮಲ್ಲಿಕ್ ಅವರಿಗೆ ಬುಧವಾರಇಲ್ಲಿನ ವಿಶೇಷ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.
ವಿಶೇಷ ನ್ಯಾಯಾಧೀಶ ಆರ್.ಎನ್. ರೋಖಡೆ ಅವರು ಮಲ್ಲಿಕ್ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿದರು. ನ್ಯಾಯಾಂಗ ಬಂಧನದಲ್ಲಿರುವ ಮಲ್ಲಿಕ್, ಸದ್ಯ ಖಾಸಗಿ ಆಸ್ಪತ್ರಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.