<p><strong>ನವದೆಹಲಿ</strong>: 2009–10ರ ಅವಧಿಯಲ್ಲಿ ಕೃತಕ ಅಂಗಾಂಗ ಹಾಗೂ ಉಪಕರಣಗಳ ವಿತರಣೆಯಲ್ಲಿ ಸರ್ಕಾರದ ಅನುದಾನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷೀದ್ ಪತ್ನಿ ಲೂಸಿ ಖುರ್ಷೀದ್ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಸಲ್ಲಿಸಿದ್ದ ಚಾರ್ಜ್ಶೀಟ್ ಪರಿಗಣಿಸಲು ವಿಶೇಷ ನ್ಯಾಯಾಲಯವು ಒಪ್ಪಿಗೆ ನೀಡಿದೆ.</p>.<p>‘ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಅವಕಾಶ ನೀಡುವಂತೆ ಕೋರಿ ಇ.ಡಿ ಮನವಿ ಮಾಡಿತ್ತು. ಇದಕ್ಕೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ವಿಶೇಷ ನ್ಯಾಯಾಲಯವು ಒಪ್ಪಿಗೆ ಸೂಚಿಸಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಈ ಬೆಳವಣಿಗೆಗಳ ಕುರಿತಂತೆ ಪ್ರತಿಕ್ರಿಯಿಸಲು ಲೂಸಿ ಖುರ್ಷೀದ್ ನಿರಾಕರಿಸಿದರು.</p>.<p class="bodytext">ಲೂಸಿ ಖುರ್ಷಿದ್ ಅವರು ಪ್ರಾಜೆಕ್ಟ್ ಮ್ಯಾನೇಜರ್ ಆಗಿರುವ ಜಾಕೀರ್ ಹುಸೇನ್ ಮೆಮೊರಿಯಲ್ ಟ್ರಸ್ಟ್ 2009–10ರಲ್ಲಿ ಕೃತಕ ಅಂಗಾಂಗ ವಿತರಿಸುವುದಾಗಿ ಕೇಂದ್ರ ಸರ್ಕಾರದಿಂದ ₹71.50 ಲಕ್ಷ ಅನುದಾನ ಪಡೆದಿತ್ತು. ಆದರೆ, ಅಂಗಾಂಗ ವಿತರಿಸದೇ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳಲಾಗಿತ್ತು. ಈ ಕುರಿತು 2017ರಲ್ಲಿ ಉತ್ತರ ಪ್ರದೇಶ ಸರ್ಕಾರವು ಎಫ್ಐಆರ್ ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2009–10ರ ಅವಧಿಯಲ್ಲಿ ಕೃತಕ ಅಂಗಾಂಗ ಹಾಗೂ ಉಪಕರಣಗಳ ವಿತರಣೆಯಲ್ಲಿ ಸರ್ಕಾರದ ಅನುದಾನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷೀದ್ ಪತ್ನಿ ಲೂಸಿ ಖುರ್ಷೀದ್ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಸಲ್ಲಿಸಿದ್ದ ಚಾರ್ಜ್ಶೀಟ್ ಪರಿಗಣಿಸಲು ವಿಶೇಷ ನ್ಯಾಯಾಲಯವು ಒಪ್ಪಿಗೆ ನೀಡಿದೆ.</p>.<p>‘ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಅವಕಾಶ ನೀಡುವಂತೆ ಕೋರಿ ಇ.ಡಿ ಮನವಿ ಮಾಡಿತ್ತು. ಇದಕ್ಕೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ವಿಶೇಷ ನ್ಯಾಯಾಲಯವು ಒಪ್ಪಿಗೆ ಸೂಚಿಸಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಈ ಬೆಳವಣಿಗೆಗಳ ಕುರಿತಂತೆ ಪ್ರತಿಕ್ರಿಯಿಸಲು ಲೂಸಿ ಖುರ್ಷೀದ್ ನಿರಾಕರಿಸಿದರು.</p>.<p class="bodytext">ಲೂಸಿ ಖುರ್ಷಿದ್ ಅವರು ಪ್ರಾಜೆಕ್ಟ್ ಮ್ಯಾನೇಜರ್ ಆಗಿರುವ ಜಾಕೀರ್ ಹುಸೇನ್ ಮೆಮೊರಿಯಲ್ ಟ್ರಸ್ಟ್ 2009–10ರಲ್ಲಿ ಕೃತಕ ಅಂಗಾಂಗ ವಿತರಿಸುವುದಾಗಿ ಕೇಂದ್ರ ಸರ್ಕಾರದಿಂದ ₹71.50 ಲಕ್ಷ ಅನುದಾನ ಪಡೆದಿತ್ತು. ಆದರೆ, ಅಂಗಾಂಗ ವಿತರಿಸದೇ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳಲಾಗಿತ್ತು. ಈ ಕುರಿತು 2017ರಲ್ಲಿ ಉತ್ತರ ಪ್ರದೇಶ ಸರ್ಕಾರವು ಎಫ್ಐಆರ್ ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>