<p><strong>ನವದೆಹಲಿ:</strong> ‘ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಊಹಾಪೋಹದ ವರದಿಗಳು ಪ್ರಕಟವಾಗುತ್ತಿರುವುದು ದುರದೃಷ್ಟಕರ’ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೇಳಿದ್ದಾರೆ.</p>.<p>ನಿವೃತ್ತಿಯಾಗುತ್ತಿರುವ ನ್ಯಾಯಮೂರ್ತಿ ನವೀನ್ ಸಿನ್ಹಾ ಅವರಿಗೆ ಬುಧವಾರ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನ್ಯಾಯಮೂರ್ತಿಗಳ ನೇಮಕಾತಿಯು ಪ್ರಕ್ರಿಯೆಯು ಪಾವಿತ್ರ್ಯತೆ ಮತ್ತು ಘನತೆಯನ್ನು ಹೊಂದಿದೆ. ಮಾಧ್ಯಮಗಳು ಈ ವಿಷಯ ಅರಿತುಕೊಳ್ಳಬೇಕು ಮತ್ತು ಪಾವಿತ್ರ್ಯತೆಯನ್ನು ಗುರುತಿಸಬೇಕು’ ಎಂದು ಹೇಳಿದ್ದಾರೆ.</p>.<p>‘ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಸಭೆಗಳನ್ನು ನಡೆಸಿ ನಿರ್ಧಾರಗಳನ್ನು ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದ್ದಾರೆ.</p>.<p>‘ಮಾಧ್ಯಮಗಳ ಸ್ವಾತಂತ್ರ್ಯವನ್ನು ನ್ಯಾಯಾಲಯ ಎತ್ತಿ ಹಿಡಿಯುತ್ತದೆ. ಆದರೆ, ನೇಮಕಾತಿ ಪ್ರಕ್ರಿಯೆ ಅಧಿಕೃತಗೊಳಿಸುವ ಮುನ್ನವೇ ನಿರ್ಣಯಗಳನ್ನು ಕೆಲವು ಮಾಧ್ಯಮಗಳಲ್ಲಿ ಪ್ರಕಟಿಸಲಾಗುತ್ತಿದೆ. ಈ ರೀತಿಯ ಬೇಜವಾಬ್ದಾರಿ ವರದಿಗಾರಿಕೆ ಮತ್ತು ಊಹಾಪೋಹಗಳಿಂದ ಪ್ರತಿಭಾವಂತ ವ್ಯಕ್ತಿಗಳ ವೃತ್ತಿಯ ಪ್ರಗತಿಗೆ ಧಕ್ಕೆಯಾಗುತ್ತದೆ. ಇದರಿಂದ ನನಗೆ ಬಹಳ ಬೇಸರವಾಗಿದೆ’ ಎಂದು ಹೇಳಿದ್ದಾರೆ.</p>.<p>‘ಇಂತಹ ಗಂಭೀರ ವಿಷಯದ ಬಗ್ಗೆ ಬಹುತೇಕ ಹಿರಿಯ ಪತ್ರಕರ್ತರು ಮತ್ತು ಮಾಧ್ಯಮಗಳು ಪ್ರಬುದ್ಧತೆ ಮತ್ತು ಜವಾಬ್ದಾರಿಯನ್ನು ಸಹ ಪ್ರದರ್ಶಿಸಿವೆ. ಯಾವುದೇ ರೀತಿಯ ಊಹಾಪೋಹದ ವರದಿಯನ್ನು ಪ್ರಕಟಿಸಿಲ್ಲ. ಈ ರೀತಿಯ ನೀತಿ ಸಂಹಿತೆ ಹೊಂದಿರುವ ಮಾಧ್ಯಮಗಳು ಮತ್ತು ವೃತ್ತಿಪರ ಪತ್ರಕರ್ತರು ಸುಪ್ರೀಂ ಕೋರ್ಟ್ ಮತ್ತು ಪ್ರಜಾಪ್ರಭುತ್ವದ ನಿಜವಾದ ಶಕ್ತಿಯಾಗಿದ್ದಾರೆ’ ಎಂದು ಮುಖ್ಯ ನ್ಯಾಯಮೂರ್ತಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಕೊಲಿಜಿಯಂ, ಒಂಬತ್ತು ಹೆಸರುಗಳನ್ನು ಅಂತಿಮಗೊಳಿಸಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗೆ ಎನ್.ವಿ. ರಮಣ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಊಹಾಪೋಹದ ವರದಿಗಳು ಪ್ರಕಟವಾಗುತ್ತಿರುವುದು ದುರದೃಷ್ಟಕರ’ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೇಳಿದ್ದಾರೆ.</p>.<p>ನಿವೃತ್ತಿಯಾಗುತ್ತಿರುವ ನ್ಯಾಯಮೂರ್ತಿ ನವೀನ್ ಸಿನ್ಹಾ ಅವರಿಗೆ ಬುಧವಾರ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನ್ಯಾಯಮೂರ್ತಿಗಳ ನೇಮಕಾತಿಯು ಪ್ರಕ್ರಿಯೆಯು ಪಾವಿತ್ರ್ಯತೆ ಮತ್ತು ಘನತೆಯನ್ನು ಹೊಂದಿದೆ. ಮಾಧ್ಯಮಗಳು ಈ ವಿಷಯ ಅರಿತುಕೊಳ್ಳಬೇಕು ಮತ್ತು ಪಾವಿತ್ರ್ಯತೆಯನ್ನು ಗುರುತಿಸಬೇಕು’ ಎಂದು ಹೇಳಿದ್ದಾರೆ.</p>.<p>‘ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಸಭೆಗಳನ್ನು ನಡೆಸಿ ನಿರ್ಧಾರಗಳನ್ನು ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದ್ದಾರೆ.</p>.<p>‘ಮಾಧ್ಯಮಗಳ ಸ್ವಾತಂತ್ರ್ಯವನ್ನು ನ್ಯಾಯಾಲಯ ಎತ್ತಿ ಹಿಡಿಯುತ್ತದೆ. ಆದರೆ, ನೇಮಕಾತಿ ಪ್ರಕ್ರಿಯೆ ಅಧಿಕೃತಗೊಳಿಸುವ ಮುನ್ನವೇ ನಿರ್ಣಯಗಳನ್ನು ಕೆಲವು ಮಾಧ್ಯಮಗಳಲ್ಲಿ ಪ್ರಕಟಿಸಲಾಗುತ್ತಿದೆ. ಈ ರೀತಿಯ ಬೇಜವಾಬ್ದಾರಿ ವರದಿಗಾರಿಕೆ ಮತ್ತು ಊಹಾಪೋಹಗಳಿಂದ ಪ್ರತಿಭಾವಂತ ವ್ಯಕ್ತಿಗಳ ವೃತ್ತಿಯ ಪ್ರಗತಿಗೆ ಧಕ್ಕೆಯಾಗುತ್ತದೆ. ಇದರಿಂದ ನನಗೆ ಬಹಳ ಬೇಸರವಾಗಿದೆ’ ಎಂದು ಹೇಳಿದ್ದಾರೆ.</p>.<p>‘ಇಂತಹ ಗಂಭೀರ ವಿಷಯದ ಬಗ್ಗೆ ಬಹುತೇಕ ಹಿರಿಯ ಪತ್ರಕರ್ತರು ಮತ್ತು ಮಾಧ್ಯಮಗಳು ಪ್ರಬುದ್ಧತೆ ಮತ್ತು ಜವಾಬ್ದಾರಿಯನ್ನು ಸಹ ಪ್ರದರ್ಶಿಸಿವೆ. ಯಾವುದೇ ರೀತಿಯ ಊಹಾಪೋಹದ ವರದಿಯನ್ನು ಪ್ರಕಟಿಸಿಲ್ಲ. ಈ ರೀತಿಯ ನೀತಿ ಸಂಹಿತೆ ಹೊಂದಿರುವ ಮಾಧ್ಯಮಗಳು ಮತ್ತು ವೃತ್ತಿಪರ ಪತ್ರಕರ್ತರು ಸುಪ್ರೀಂ ಕೋರ್ಟ್ ಮತ್ತು ಪ್ರಜಾಪ್ರಭುತ್ವದ ನಿಜವಾದ ಶಕ್ತಿಯಾಗಿದ್ದಾರೆ’ ಎಂದು ಮುಖ್ಯ ನ್ಯಾಯಮೂರ್ತಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಕೊಲಿಜಿಯಂ, ಒಂಬತ್ತು ಹೆಸರುಗಳನ್ನು ಅಂತಿಮಗೊಳಿಸಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗೆ ಎನ್.ವಿ. ರಮಣ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>