<p><strong>ಧರ್ಮಶಾಲಾ:</strong> ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದ ಬೌದ್ಧಧರ್ಮಗುರು ದಲೈಲಾಮಾ ಅವರು, ʼಹೆಚ್ಚಿನ ಪ್ರಯೋಜನಕ್ಕಾಗಿʼ ಲಸಿಕೆ ಹಾಕಿಸಿಕೊಳ್ಳುವಂತೆ ಶನಿವಾರ ಜನರಲ್ಲಿ ಮನವಿ ಮಾಡಿದರು.</p>.<p>ʼಗಂಭೀರ ತೊಂದರೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ಈ ಚುಚ್ಚುಮದ್ದು ತುಂಬಾ ಉಪಕಾರಿ ಮತ್ತು ಉತ್ತಮವಾದುದು. ಇತರ ರೋಗಿಗಳೂ ಹೆಚ್ಚಿನ ಪ್ರಯೋಜನಕ್ಕಾಗಿ ಈ ಚುಚ್ಚುಮದ್ದು ಪಡೆಯಬಹುದು. ನಾನು ಅದನ್ನು ತೆಗೆದುಕೊಂಡಿದ್ದೇನೆ. ಜನರು ಈ ಚುಚ್ಚುಮದ್ದು ಹಾಕಿಸಿಕೊಳ್ಳುವ ಧೈರ್ಯ ಮಾಡಬೇಕುʼ ಎಂದು ಕರೆ ನೀಡಿದರು.</p>.<p>86 ವರ್ಷದ ಲಾಮಾ ಅವರು ಕಳೆದ ವರ್ಷ ಜನವರಿಯಿಂದಲೂಸ್ವಯಂ ಪ್ರತ್ಯೇಕವಾಸದಲ್ಲಿ ಉಳಿದಿದ್ದರು. ಶನಿವಾರ ತಮ್ಮ ನಿವಾಸದಿಂದ ಹೊರಬಂದು,ಇಲ್ಲಿನ ವಲಯ ಆಸ್ಪತ್ರೆಯಲ್ಲಿ ಬೆಳಗ್ಗೆ 7.10ಕ್ಕೆ ಲಸಿಕೆ ಹಾಕಿಸಿಕೊಂಡರು. ಬಳಿಕ ಸುಮಾರು ಅರ್ಧ ತಾಸು ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿತ್ತು.</p>.<p>ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಇದುವರೆಗೆ 57,428 ಸೋಂಕಿತರು ಇದುವರೆಗೆ ಗುಣಮುಖರಾಗಿದ್ದು, 997 ಮಂದಿ ಮೃತಪಟ್ಟಿದ್ದಾರೆ. ಇನ್ನೂ 589 ಕೋವಿಡ್-19 ಸಕ್ರಿಯ ಪ್ರಕರಣಗಳು ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಶಾಲಾ:</strong> ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದ ಬೌದ್ಧಧರ್ಮಗುರು ದಲೈಲಾಮಾ ಅವರು, ʼಹೆಚ್ಚಿನ ಪ್ರಯೋಜನಕ್ಕಾಗಿʼ ಲಸಿಕೆ ಹಾಕಿಸಿಕೊಳ್ಳುವಂತೆ ಶನಿವಾರ ಜನರಲ್ಲಿ ಮನವಿ ಮಾಡಿದರು.</p>.<p>ʼಗಂಭೀರ ತೊಂದರೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ಈ ಚುಚ್ಚುಮದ್ದು ತುಂಬಾ ಉಪಕಾರಿ ಮತ್ತು ಉತ್ತಮವಾದುದು. ಇತರ ರೋಗಿಗಳೂ ಹೆಚ್ಚಿನ ಪ್ರಯೋಜನಕ್ಕಾಗಿ ಈ ಚುಚ್ಚುಮದ್ದು ಪಡೆಯಬಹುದು. ನಾನು ಅದನ್ನು ತೆಗೆದುಕೊಂಡಿದ್ದೇನೆ. ಜನರು ಈ ಚುಚ್ಚುಮದ್ದು ಹಾಕಿಸಿಕೊಳ್ಳುವ ಧೈರ್ಯ ಮಾಡಬೇಕುʼ ಎಂದು ಕರೆ ನೀಡಿದರು.</p>.<p>86 ವರ್ಷದ ಲಾಮಾ ಅವರು ಕಳೆದ ವರ್ಷ ಜನವರಿಯಿಂದಲೂಸ್ವಯಂ ಪ್ರತ್ಯೇಕವಾಸದಲ್ಲಿ ಉಳಿದಿದ್ದರು. ಶನಿವಾರ ತಮ್ಮ ನಿವಾಸದಿಂದ ಹೊರಬಂದು,ಇಲ್ಲಿನ ವಲಯ ಆಸ್ಪತ್ರೆಯಲ್ಲಿ ಬೆಳಗ್ಗೆ 7.10ಕ್ಕೆ ಲಸಿಕೆ ಹಾಕಿಸಿಕೊಂಡರು. ಬಳಿಕ ಸುಮಾರು ಅರ್ಧ ತಾಸು ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿತ್ತು.</p>.<p>ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಇದುವರೆಗೆ 57,428 ಸೋಂಕಿತರು ಇದುವರೆಗೆ ಗುಣಮುಖರಾಗಿದ್ದು, 997 ಮಂದಿ ಮೃತಪಟ್ಟಿದ್ದಾರೆ. ಇನ್ನೂ 589 ಕೋವಿಡ್-19 ಸಕ್ರಿಯ ಪ್ರಕರಣಗಳು ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>