<p><strong>ನವದೆಹಲಿ:</strong> ಸಿನಿತಾರೆಯರ ರೀತಿಯಲ್ಲೇ ಕ್ರೀಡಾಪಟುಗಳೂ ದಶಕಗಳಿಂದ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಪೈಕಿ ಮೊಹಮ್ಮದ್ ಅಜರುದ್ದೀನ್, ನವಜೋತ್ ಸಿಂಗ್ ಸಿಧು, ರಾಜ್ಯವರ್ಧನ್ ಸಿಂಗ್ ರಾಥೋಡ್, ಲಿಯಾಂಡರ್ ಪೇಸ್ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. </p><p>ಲಿಯಾಂಡರ್ ಪೇಸ್ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ಮಂಗಳವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ರಾಷ್ಟ್ರ ರಾಜಕಾರಣದತ್ತ ಕ್ರೀಡಾಪಟುಗಳು ಒಲವು ತೋರುತ್ತಿರುವುದನ್ನು ಕಾಣಬಹುದಾಗಿದೆ. </p><p>ಕ್ರೀಡಾ ಕ್ಷೇತ್ರದಿಂದ ಬಂದ ಕೆಲವರು ಸಚಿವರಾಗಿ ಉನ್ನತ ಮಟ್ಟಕ್ಕೇರಿದರೆ, ಇನ್ನು ಕೆಲವರು ಚುನಾವಣೆಯಲ್ಲಿ ಮಿಶ್ರ ಫಲಿತಾಂಶ ಕಂಡಿದ್ದು, ಉತ್ತಮ ಅವಕಾಶಕ್ಕಾಗಿ ಹಾತೊರೆಯುತ್ತಿದ್ದಾರೆ. </p>.<h2>ಮೊಹಮ್ಮದ್ ಅಜರುದ್ದೀನ್...</h2><p>2009ರಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಕಾಂಗ್ರೆಸ್ ಸೇರಿದ್ದರು. ಅದೇ ವರ್ಷ ಉತ್ತರ ಪ್ರದೇಶದ ಮೊರಾದಾಬಾದ್ನಿಂದ ಲೋಕಸಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ನಂತರ ನಡೆದ 2014ರ ಲೋಕಸಭೆ ಮತ್ತು 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುವ ಅಜರುದ್ದೀನ್, ಸದ್ಯ ತೆಲಂಗಾಣದ ರೇವಂತ್ ರೆಡ್ಡಿ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿದ್ದಾರೆ.</p>.<h2>ನವಜೋತ್ ಸಿಂಗ್ ಸಿಧು...</h2><p>ಭಾರತದ ಮಾಜಿ ಓಪನರ್ ಆಗಿದ್ದ ನವಜೋತ್ ಸಿಂಗ್ ಸಿಧು ಅವರು ಬಿಜೆಪಿ, ಕಾಂಗ್ರೆಸ್ ಮತ್ತು ಅವರದೇ ಆದ 'ಆವಾಜ್-ಎ-ಪಂಜಾಬ್' ಸೇರಿದಂತೆ ಹಲವು ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. 2004 ಮತ್ತು 2009ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 2017ರಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿ ಅಮೃತಸರ ಪೂರ್ವದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2022ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಎಎಪಿ ಪ್ರತಿಸ್ಪರ್ಧಿಯ ವಿರುದ್ಧ ಸೋತಿದ್ದರು. ಸದ್ಯ ಅವರು ರಾಜಕಾರಣದಿಂದ ದೂರ ಉಳಿದಿದ್ದಾರೆ. </p>.<h2>ರಾಜ್ಯವರ್ಧನ್ ಸಿಂಗ್ ರಾಥೋಡ್...</h2><p>ಒಲಿಂಪಿಕ್ಸ್ ಶೂಟಿಂಗ್ ವಿಭಾಗದಲ್ಲಿ ಭಾರತಕ್ಕೆ ಮೊದಲ ಬೆಳ್ಳಿ ಪದಕ ತಂದುಕೊಟ್ಟ ಶೂಟರ್ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು 2013ರಲ್ಲಿ ಬಿಜೆಪಿ ಸೇರಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಜೈಪುರದಿಂದ ಲೋಕಸಭೆಗೆ ಆಯ್ಕೆಯಾದರು. 2019ರ ಚುನಾವಣೆಯಲ್ಲೂ ಗೆದ್ದರು. ಬಳಿಕ ರಾಜ್ಯ ರಾಜಕೀಯದತ್ತ ಮುಖ ಮಾಡಿದ ಅವರು 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಲೋಕಸಭೆಗೆ ಗುಡ್ ಬೈ ಹೇಳಿದ್ದರು.</p>.<h2>ಸೈನಾ ನೆಹ್ವಾಲ್...</h2><p>ವಿಶ್ವದ ಮಾಜಿ ನಂ. 1 ಮತ್ತು ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು 2020ರಲ್ಲಿ ತಮ್ಮ ಸಹೋದರಿಯೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದರು. ಆದರೆ, ಇನ್ನೂ ಚುನಾವಣಾ ಕಣಕ್ಕಿಳಿದಿಲ್ಲ.</p>.<h2>ಗೌತಮ್ ಗಂಭೀರ್...</h2><p>ಎರಡು ಬಾರಿ ವಿಶ್ವಕಪ್ ವಿಜೇತ ಮತ್ತು ಭಾರತೀಯ ಕ್ರಿಕೆಟ್ ತಂಡದ ಪ್ರಸ್ತುತ ಕೋಚ್ ಆಗಿರುವ ಗೌತಮ್ ಗಂಭೀರ್ ಅವರು 2019ರಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದರು. ಅದೇ ವರ್ಷ ಪೂರ್ವ ದೆಹಲಿಯಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದ್ದರು. ಆದರೆ, 2024ರಲ್ಲಿ ಅವರು ಕ್ರಿಕೆಟ್ ತರಬೇತುದಾರರಾಗಿ ತಮ್ಮ ಕ್ರೀಡಾ ವೃತ್ತಿಜೀವನವನ್ನು ಪುನರುಜ್ಜೀವನಗೊಳಿಸಲು ಸಕ್ರಿಯ ರಾಜಕೀಯದಿಂದ ದೂರ ಸರಿದರು.</p>.<h2>ಕೀರ್ತಿ ಆಜಾದ್...</h2><p>1983ರ ವಿಶ್ವಕಪ್ ವಿಜೇತ ಕೀರ್ತಿ ಆಜಾದ್ ಅವರು ಬಿಜೆಪಿಗೆ ಸೇರುವ ಮೂಲಕ ರಾಜಕೀಯರಂಗ ಪ್ರವೇಶಿಸಿದ್ದರು. ಬಿಹಾರದ ದರ್ಭಾಂಗದಿಂದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಗೆದ್ದರು. ಆದರೆ, 2015ರಲ್ಲಿ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಪಕ್ಷದಿಂದ ಅಮಾನತುಗೊಂಡಿದ್ದರು. ಬಳಿಕ 2019ರಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. 2021ರಲ್ಲಿ ತೃಣಮೂಲ ಕಾಂಗ್ರೆಸ್ಗೆ ಸೇರಿದ ಅವರು ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರ ಕ್ಷೇತ್ರದಿಂದ ಗೆಲ್ಲುವ ಮೂಲಕ ಮತ್ತೆ ಲೋಕಸಭೆಗೆ ಮರಳಿದ್ದಾರೆ.</p>.<h2>ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ...</h2><p>ಖ್ಯಾತ ಮತ್ತು ಅಷ್ಟೇ ವಿವಾದಿತ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಬಿಜೆಪಿ ನಾಯಕ ಹಾಗೂ ಅಂದಿನ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿ ದೇಶದ ಗಮನ ಸೆಳೆಸಿದ್ದರು. 2024ರಲ್ಲಿ ವಿನೇಶ್ ಮತ್ತು ಬಜರಂಗ್ ಒಟ್ಟಾಗಿ ಕಾಂಗ್ರೆಸ್ ಸೇರಿದ್ದರು. ಫೋಗಟ್ ಹರಿಯಾಣದ ಜುಲಾನಾ ಕ್ಷೇತ್ರದಿಂದ ಗೆದ್ದು ಶಾಸಕಿಯಾಗಿದ್ದಾರೆ. ಪುನಿಯಾ ಅವರನ್ನು ಅಖಿಲ ಭಾರತ ಕಿಸಾನ್ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಪಕ್ಷ ನೇಮಿಸಿತ್ತು.</p>.<h2>ವಿಜೇಂದರ್ ಸಿಂಗ್...</h2><p>ಬೀಜಿಂಗ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಅವರು 2019ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯಕ್ಕೆ ಬಂದಿದ್ದರು. ಆದರೆ, ಆ ವರ್ಷ ದಕ್ಷಿಣ ದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಸೋತಿದ್ದರು. ನಂತರ 2024ರಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.</p>.<h2>ಬೈಚುಂಗ್ ಭುಟಿಯಾ...</h2><p>ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ ಅವರು 2014ರಲ್ಲಿ ತೃಣಮೂಲ ಕಾಂಗ್ರೆಸ್ಗೆ ಸೇರಿದ್ದರು. ಆದರೆ, ಡಾರ್ಜಿಲಿಂಗ್ನಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಆದಾಗ್ಯೂ, 2021ರ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅವರು ಎಡರಂಗವನ್ನು ಬೆಂಬಲಿಸಿದ್ದರು. ನಂತರ ಅವರು ತಮ್ಮದೇ ಆದ ‘ಹಮಾರೋ ಸಿಕ್ಕಿಂ’ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ, ಚುನಾವಣೆಯಲ್ಲಿ ಯಾವುದೇ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ.</p>.<h2>ಹರ್ಭಜನ್ ಸಿಂಗ್...</h2><p>ಎರಡು ವಿಶ್ವಕಪ್ ಮತ್ತು 400ಕ್ಕೂ ಹೆಚ್ಚು ಟೆಸ್ಟ್ ವಿಕೆಟ್ಗಳನ್ನು ಪಡೆದಿರುವ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು 2022ರಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದರು. ಎಎಪಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು.</p>.<h2>ಚೇತನ್ ಚೌಹಾಣ್...</h2><p>ತಮ್ಮ ಧೈರ್ಯಶಾಲಿ ಆಟದಿಂದ ಹೆಸರುವಾಸಿಯಾಗಿದ್ದ ಭಾರತದ ಮಾಜಿ ಓಪನರ್, ಕ್ರೀಡಾ ವೃತ್ತಿಜೀವನದ ನಂತರ ಬಿಜೆಪಿಗೆ ಸೇರಿದ್ದರು. 1991 ಮತ್ತು 1998ರಲ್ಲಿ ಅಮ್ರೋಹಾದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ, 1996, 1999 ಮತ್ತು 2004ರಲ್ಲಿ ನಡೆದ ಚುನಾವಣೆಯಲ್ಲಿ ಸೋತಿದ್ದರು. 2017ರಲ್ಲಿ ಮತ್ತೆ ರಾಜಕೀಯಕ್ಕೆ ಮರಳಿದ ಅವರು ನೌಗವಾನ್ ಸಾದತ್ನಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಗೆದ್ದಿದ್ದರು. 2020ರಲ್ಲಿ ಚೌಹಾಣ್ ನಿಧನರಾದರು.</p>.<h2>ಯೋಗೇಶ್ವರ್ ದತ್...</h2><p>ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಯೋಗೇಶ್ವರ್ ದತ್ ಅವರು 2019ರಲ್ಲಿ ಬಿಜೆಪಿ ಸೇರಿದ್ದರು. ಸದ್ಯ ಅವರು ಸಕ್ರಿಯ ಕಾರ್ಯಕರ್ತರಾಗಿಯೇ ಉಳಿದಿದ್ದಾರೆ.</p>.<h2>ದಿಲೀಪ್ ತಿರ್ಕಿ...</h2><p>ಭಾರತೀಯ ಹಾಕಿ ತಂಡದ ಮಾಜಿ ನಾಯಕ ದಿಲೀಪ್ ತಿರ್ಕಿ ಅವರು 2012ರಲ್ಲಿ ಬಿಜು ಜನತಾ ದಳಕ್ಕೆ ಸೇರಿದ್ದರು. ಬಳಿಕ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು. 2024ರಲ್ಲಿ ಸುಂದರ್ಗಢ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.</p>.<h2>ಕಲ್ಯಾಣ್ ಚೌಬೆ...</h2><p>ಭಾರತೀಯ ಮಾಜಿ ಫುಟ್ಬಾಲ್ ಆಟಗಾರ ಮತ್ತು ಪ್ರಸ್ತುತ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷರಾಗಿರುವ ಕಲ್ಯಾಣ್ ಚೌಬೆ ಅವರು 2015ರಲ್ಲಿ ಬಿಜೆಪಿ ಸೇರುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ನ ಮಹುವಾ ಮೊಯಿತ್ರಾ ವಿರುದ್ಧ ಸೋತಿದ್ದರು. 2021 ಮತ್ತು 2024ರ ವಿಧಾನಸಭೆ ಚುನಾವಣೆಯಲ್ಲೂ ಸೋತಿದ್ದಾರೆ.</p>.<h2>ಜ್ಯೋತಿರ್ಮಯಿ ಸಿಕ್ದರ್...</h2><p>1998ರ ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕಗಳನ್ನು ಗೆದ್ದ ಖ್ಯಾತ ಅಥ್ಲೀಟ್ ಜ್ಯೋತಿರ್ಮಯಿ ಸಿಕ್ದರ್ ಅವರು ಸಿಪಿಎಂನಿಂದ ಸ್ಪರ್ಧಿಸಿ 14ನೇ ಲೋಕಸಭೆಯ ಸದಸ್ಯರಾಗಿದ್ದರು. ಆದರೆ, 2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಸೋತಿದ್ದರು. 2019ರಲ್ಲಿ ಅವರು ತೃಣಮೂಲ ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ್ದರು. ನಂತರ ಬಿಜೆಪಿಗೆ ಸೇರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಿನಿತಾರೆಯರ ರೀತಿಯಲ್ಲೇ ಕ್ರೀಡಾಪಟುಗಳೂ ದಶಕಗಳಿಂದ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಪೈಕಿ ಮೊಹಮ್ಮದ್ ಅಜರುದ್ದೀನ್, ನವಜೋತ್ ಸಿಂಗ್ ಸಿಧು, ರಾಜ್ಯವರ್ಧನ್ ಸಿಂಗ್ ರಾಥೋಡ್, ಲಿಯಾಂಡರ್ ಪೇಸ್ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. </p><p>ಲಿಯಾಂಡರ್ ಪೇಸ್ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ಮಂಗಳವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ರಾಷ್ಟ್ರ ರಾಜಕಾರಣದತ್ತ ಕ್ರೀಡಾಪಟುಗಳು ಒಲವು ತೋರುತ್ತಿರುವುದನ್ನು ಕಾಣಬಹುದಾಗಿದೆ. </p><p>ಕ್ರೀಡಾ ಕ್ಷೇತ್ರದಿಂದ ಬಂದ ಕೆಲವರು ಸಚಿವರಾಗಿ ಉನ್ನತ ಮಟ್ಟಕ್ಕೇರಿದರೆ, ಇನ್ನು ಕೆಲವರು ಚುನಾವಣೆಯಲ್ಲಿ ಮಿಶ್ರ ಫಲಿತಾಂಶ ಕಂಡಿದ್ದು, ಉತ್ತಮ ಅವಕಾಶಕ್ಕಾಗಿ ಹಾತೊರೆಯುತ್ತಿದ್ದಾರೆ. </p>.<h2>ಮೊಹಮ್ಮದ್ ಅಜರುದ್ದೀನ್...</h2><p>2009ರಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಕಾಂಗ್ರೆಸ್ ಸೇರಿದ್ದರು. ಅದೇ ವರ್ಷ ಉತ್ತರ ಪ್ರದೇಶದ ಮೊರಾದಾಬಾದ್ನಿಂದ ಲೋಕಸಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ನಂತರ ನಡೆದ 2014ರ ಲೋಕಸಭೆ ಮತ್ತು 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುವ ಅಜರುದ್ದೀನ್, ಸದ್ಯ ತೆಲಂಗಾಣದ ರೇವಂತ್ ರೆಡ್ಡಿ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿದ್ದಾರೆ.</p>.<h2>ನವಜೋತ್ ಸಿಂಗ್ ಸಿಧು...</h2><p>ಭಾರತದ ಮಾಜಿ ಓಪನರ್ ಆಗಿದ್ದ ನವಜೋತ್ ಸಿಂಗ್ ಸಿಧು ಅವರು ಬಿಜೆಪಿ, ಕಾಂಗ್ರೆಸ್ ಮತ್ತು ಅವರದೇ ಆದ 'ಆವಾಜ್-ಎ-ಪಂಜಾಬ್' ಸೇರಿದಂತೆ ಹಲವು ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. 2004 ಮತ್ತು 2009ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 2017ರಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿ ಅಮೃತಸರ ಪೂರ್ವದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2022ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಎಎಪಿ ಪ್ರತಿಸ್ಪರ್ಧಿಯ ವಿರುದ್ಧ ಸೋತಿದ್ದರು. ಸದ್ಯ ಅವರು ರಾಜಕಾರಣದಿಂದ ದೂರ ಉಳಿದಿದ್ದಾರೆ. </p>.<h2>ರಾಜ್ಯವರ್ಧನ್ ಸಿಂಗ್ ರಾಥೋಡ್...</h2><p>ಒಲಿಂಪಿಕ್ಸ್ ಶೂಟಿಂಗ್ ವಿಭಾಗದಲ್ಲಿ ಭಾರತಕ್ಕೆ ಮೊದಲ ಬೆಳ್ಳಿ ಪದಕ ತಂದುಕೊಟ್ಟ ಶೂಟರ್ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು 2013ರಲ್ಲಿ ಬಿಜೆಪಿ ಸೇರಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಜೈಪುರದಿಂದ ಲೋಕಸಭೆಗೆ ಆಯ್ಕೆಯಾದರು. 2019ರ ಚುನಾವಣೆಯಲ್ಲೂ ಗೆದ್ದರು. ಬಳಿಕ ರಾಜ್ಯ ರಾಜಕೀಯದತ್ತ ಮುಖ ಮಾಡಿದ ಅವರು 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಲೋಕಸಭೆಗೆ ಗುಡ್ ಬೈ ಹೇಳಿದ್ದರು.</p>.<h2>ಸೈನಾ ನೆಹ್ವಾಲ್...</h2><p>ವಿಶ್ವದ ಮಾಜಿ ನಂ. 1 ಮತ್ತು ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು 2020ರಲ್ಲಿ ತಮ್ಮ ಸಹೋದರಿಯೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದರು. ಆದರೆ, ಇನ್ನೂ ಚುನಾವಣಾ ಕಣಕ್ಕಿಳಿದಿಲ್ಲ.</p>.<h2>ಗೌತಮ್ ಗಂಭೀರ್...</h2><p>ಎರಡು ಬಾರಿ ವಿಶ್ವಕಪ್ ವಿಜೇತ ಮತ್ತು ಭಾರತೀಯ ಕ್ರಿಕೆಟ್ ತಂಡದ ಪ್ರಸ್ತುತ ಕೋಚ್ ಆಗಿರುವ ಗೌತಮ್ ಗಂಭೀರ್ ಅವರು 2019ರಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದರು. ಅದೇ ವರ್ಷ ಪೂರ್ವ ದೆಹಲಿಯಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದ್ದರು. ಆದರೆ, 2024ರಲ್ಲಿ ಅವರು ಕ್ರಿಕೆಟ್ ತರಬೇತುದಾರರಾಗಿ ತಮ್ಮ ಕ್ರೀಡಾ ವೃತ್ತಿಜೀವನವನ್ನು ಪುನರುಜ್ಜೀವನಗೊಳಿಸಲು ಸಕ್ರಿಯ ರಾಜಕೀಯದಿಂದ ದೂರ ಸರಿದರು.</p>.<h2>ಕೀರ್ತಿ ಆಜಾದ್...</h2><p>1983ರ ವಿಶ್ವಕಪ್ ವಿಜೇತ ಕೀರ್ತಿ ಆಜಾದ್ ಅವರು ಬಿಜೆಪಿಗೆ ಸೇರುವ ಮೂಲಕ ರಾಜಕೀಯರಂಗ ಪ್ರವೇಶಿಸಿದ್ದರು. ಬಿಹಾರದ ದರ್ಭಾಂಗದಿಂದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಗೆದ್ದರು. ಆದರೆ, 2015ರಲ್ಲಿ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಪಕ್ಷದಿಂದ ಅಮಾನತುಗೊಂಡಿದ್ದರು. ಬಳಿಕ 2019ರಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. 2021ರಲ್ಲಿ ತೃಣಮೂಲ ಕಾಂಗ್ರೆಸ್ಗೆ ಸೇರಿದ ಅವರು ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರ ಕ್ಷೇತ್ರದಿಂದ ಗೆಲ್ಲುವ ಮೂಲಕ ಮತ್ತೆ ಲೋಕಸಭೆಗೆ ಮರಳಿದ್ದಾರೆ.</p>.<h2>ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ...</h2><p>ಖ್ಯಾತ ಮತ್ತು ಅಷ್ಟೇ ವಿವಾದಿತ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಬಿಜೆಪಿ ನಾಯಕ ಹಾಗೂ ಅಂದಿನ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿ ದೇಶದ ಗಮನ ಸೆಳೆಸಿದ್ದರು. 2024ರಲ್ಲಿ ವಿನೇಶ್ ಮತ್ತು ಬಜರಂಗ್ ಒಟ್ಟಾಗಿ ಕಾಂಗ್ರೆಸ್ ಸೇರಿದ್ದರು. ಫೋಗಟ್ ಹರಿಯಾಣದ ಜುಲಾನಾ ಕ್ಷೇತ್ರದಿಂದ ಗೆದ್ದು ಶಾಸಕಿಯಾಗಿದ್ದಾರೆ. ಪುನಿಯಾ ಅವರನ್ನು ಅಖಿಲ ಭಾರತ ಕಿಸಾನ್ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಪಕ್ಷ ನೇಮಿಸಿತ್ತು.</p>.<h2>ವಿಜೇಂದರ್ ಸಿಂಗ್...</h2><p>ಬೀಜಿಂಗ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಅವರು 2019ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯಕ್ಕೆ ಬಂದಿದ್ದರು. ಆದರೆ, ಆ ವರ್ಷ ದಕ್ಷಿಣ ದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಸೋತಿದ್ದರು. ನಂತರ 2024ರಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.</p>.<h2>ಬೈಚುಂಗ್ ಭುಟಿಯಾ...</h2><p>ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ ಅವರು 2014ರಲ್ಲಿ ತೃಣಮೂಲ ಕಾಂಗ್ರೆಸ್ಗೆ ಸೇರಿದ್ದರು. ಆದರೆ, ಡಾರ್ಜಿಲಿಂಗ್ನಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಆದಾಗ್ಯೂ, 2021ರ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅವರು ಎಡರಂಗವನ್ನು ಬೆಂಬಲಿಸಿದ್ದರು. ನಂತರ ಅವರು ತಮ್ಮದೇ ಆದ ‘ಹಮಾರೋ ಸಿಕ್ಕಿಂ’ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ, ಚುನಾವಣೆಯಲ್ಲಿ ಯಾವುದೇ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ.</p>.<h2>ಹರ್ಭಜನ್ ಸಿಂಗ್...</h2><p>ಎರಡು ವಿಶ್ವಕಪ್ ಮತ್ತು 400ಕ್ಕೂ ಹೆಚ್ಚು ಟೆಸ್ಟ್ ವಿಕೆಟ್ಗಳನ್ನು ಪಡೆದಿರುವ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು 2022ರಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದರು. ಎಎಪಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು.</p>.<h2>ಚೇತನ್ ಚೌಹಾಣ್...</h2><p>ತಮ್ಮ ಧೈರ್ಯಶಾಲಿ ಆಟದಿಂದ ಹೆಸರುವಾಸಿಯಾಗಿದ್ದ ಭಾರತದ ಮಾಜಿ ಓಪನರ್, ಕ್ರೀಡಾ ವೃತ್ತಿಜೀವನದ ನಂತರ ಬಿಜೆಪಿಗೆ ಸೇರಿದ್ದರು. 1991 ಮತ್ತು 1998ರಲ್ಲಿ ಅಮ್ರೋಹಾದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ, 1996, 1999 ಮತ್ತು 2004ರಲ್ಲಿ ನಡೆದ ಚುನಾವಣೆಯಲ್ಲಿ ಸೋತಿದ್ದರು. 2017ರಲ್ಲಿ ಮತ್ತೆ ರಾಜಕೀಯಕ್ಕೆ ಮರಳಿದ ಅವರು ನೌಗವಾನ್ ಸಾದತ್ನಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಗೆದ್ದಿದ್ದರು. 2020ರಲ್ಲಿ ಚೌಹಾಣ್ ನಿಧನರಾದರು.</p>.<h2>ಯೋಗೇಶ್ವರ್ ದತ್...</h2><p>ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಯೋಗೇಶ್ವರ್ ದತ್ ಅವರು 2019ರಲ್ಲಿ ಬಿಜೆಪಿ ಸೇರಿದ್ದರು. ಸದ್ಯ ಅವರು ಸಕ್ರಿಯ ಕಾರ್ಯಕರ್ತರಾಗಿಯೇ ಉಳಿದಿದ್ದಾರೆ.</p>.<h2>ದಿಲೀಪ್ ತಿರ್ಕಿ...</h2><p>ಭಾರತೀಯ ಹಾಕಿ ತಂಡದ ಮಾಜಿ ನಾಯಕ ದಿಲೀಪ್ ತಿರ್ಕಿ ಅವರು 2012ರಲ್ಲಿ ಬಿಜು ಜನತಾ ದಳಕ್ಕೆ ಸೇರಿದ್ದರು. ಬಳಿಕ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು. 2024ರಲ್ಲಿ ಸುಂದರ್ಗಢ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.</p>.<h2>ಕಲ್ಯಾಣ್ ಚೌಬೆ...</h2><p>ಭಾರತೀಯ ಮಾಜಿ ಫುಟ್ಬಾಲ್ ಆಟಗಾರ ಮತ್ತು ಪ್ರಸ್ತುತ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷರಾಗಿರುವ ಕಲ್ಯಾಣ್ ಚೌಬೆ ಅವರು 2015ರಲ್ಲಿ ಬಿಜೆಪಿ ಸೇರುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ನ ಮಹುವಾ ಮೊಯಿತ್ರಾ ವಿರುದ್ಧ ಸೋತಿದ್ದರು. 2021 ಮತ್ತು 2024ರ ವಿಧಾನಸಭೆ ಚುನಾವಣೆಯಲ್ಲೂ ಸೋತಿದ್ದಾರೆ.</p>.<h2>ಜ್ಯೋತಿರ್ಮಯಿ ಸಿಕ್ದರ್...</h2><p>1998ರ ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕಗಳನ್ನು ಗೆದ್ದ ಖ್ಯಾತ ಅಥ್ಲೀಟ್ ಜ್ಯೋತಿರ್ಮಯಿ ಸಿಕ್ದರ್ ಅವರು ಸಿಪಿಎಂನಿಂದ ಸ್ಪರ್ಧಿಸಿ 14ನೇ ಲೋಕಸಭೆಯ ಸದಸ್ಯರಾಗಿದ್ದರು. ಆದರೆ, 2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಸೋತಿದ್ದರು. 2019ರಲ್ಲಿ ಅವರು ತೃಣಮೂಲ ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ್ದರು. ನಂತರ ಬಿಜೆಪಿಗೆ ಸೇರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>