<p><strong>ಕೊಲಂಬೊ:</strong> ‘ದಿತ್ವಾ’ ಚಂಡಮಾರುತದಿಂದಾಗಿ ತತ್ತರಿಸಿರುವ ಶ್ರೀಲಂಕಾದಲ್ಲಿ ಸಿಲುಕಿದ್ದ 104 ಭಾರತೀಯರನ್ನು ಶನಿವಾರ ಕರೆತರಲಾಗಿದೆ. ಈ ಮೂಲಕ ಅಪಾಯದಲ್ಲಿದ್ದ ಎಲ್ಲ ಭಾರತೀಯರು ಸ್ವದೇಶಕ್ಕೆ ತಲುಪಿದಂತಾಗಿದೆ.</p>.<p>‘ಸಾಗರಬಂಧು ಹೆಸರಿನ ಕಾರ್ಯಾಚರಣೆಯಲ್ಲಿ 104 ಭಾರತೀಯರನ್ನು ವಾಯಪಡೆಯ ಯುದ್ಧವಿಮಾನದ ಮೂಲಕ ಕೊಲಂಬೊ ಬಂಡಾರನಾಯಿಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಿರುವನಂತಪುರಕ್ಕೆ ಕರೆತರಲಾಯಿತು’ ಎಂದು ಭಾರತದ ಹೈಕಮಿಷನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.</p>.<p>ಶ್ರೀಲಂಕಾದ ರಕ್ಷಣ ಕಾರ್ಯಕ್ಕೆ ಮತ್ತಷ್ಟು ನೆರವು ನೀಡುತ್ತಿರುವ ಭಾರತ, ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಿದೆ. ಭಾರತೀಯ ವಾಯುಪಡೆಯ ಚೇತಕ್ ಯುದ್ಧವಿಮಾನವು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದೆ. ಭೂಕುಸಿತ ಮತ್ತು ಪ್ರವಾಹದಿಂದ ರಸ್ತೆ ಸಂಪರ್ಕ ಕಡಿತಗೊಂಡಿರುವ ಗುಡ್ಡಪ್ರದೇಶ ಕೊಟ್ಮಲೆಯಲ್ಲಿಯೂ ಕಾರ್ಯಾಚರಣೆ ನಡೆಸುತ್ತಿದೆ</p>.<p>ಎನ್ಡಿಆರ್ಎಫ್ ಭಾನುವಾರ ಕೊಲಂಬೊಕ್ಕೆ ತಲುಪಿದ್ದು, ಕೋಚಿಕಡೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.</p>.<p><strong>ಹೆಲಿಕಾಪ್ಟರ್ ಪತನ:</strong> </p><p>ವೆನ್ನಪ್ಪುವ ಕರಾವಳಿಯಲ್ಲಿ ಪರಿಹಾರ ಸಾಮಗ್ರಿ ತಲುಪಿಸುತ್ತಿದ್ದ ವೇಳೆ ಹೆಲಿಕಾಪ್ಟರ್ವೊಂದು ಪತನಗೊಂಡಿದ್ದು, ಪೈಲಟ್ ಮೃತಪಟ್ಟಿದ್ದಾರೆ. ಐವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಶ್ರೀಲಂಕಾ ವಾಯಪಡೆ ದೃಢಪಡಿಸಿದೆ.</p>.<p>ರಕ್ಷಣಾ ಕಾರ್ಯಚರಣೆ ನಡೆಸುತ್ತಿದ್ದ ನೌಕಾಪಡೆಯ ಐವರು ನಾವಿಕರ ಮೃತದೇಹ ಪತ್ತೆಯಾಗಿದೆ ಎಂದು ಶ್ರೀಲಂಕಾ ನೌಕಾಪಡೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ‘ದಿತ್ವಾ’ ಚಂಡಮಾರುತದಿಂದಾಗಿ ತತ್ತರಿಸಿರುವ ಶ್ರೀಲಂಕಾದಲ್ಲಿ ಸಿಲುಕಿದ್ದ 104 ಭಾರತೀಯರನ್ನು ಶನಿವಾರ ಕರೆತರಲಾಗಿದೆ. ಈ ಮೂಲಕ ಅಪಾಯದಲ್ಲಿದ್ದ ಎಲ್ಲ ಭಾರತೀಯರು ಸ್ವದೇಶಕ್ಕೆ ತಲುಪಿದಂತಾಗಿದೆ.</p>.<p>‘ಸಾಗರಬಂಧು ಹೆಸರಿನ ಕಾರ್ಯಾಚರಣೆಯಲ್ಲಿ 104 ಭಾರತೀಯರನ್ನು ವಾಯಪಡೆಯ ಯುದ್ಧವಿಮಾನದ ಮೂಲಕ ಕೊಲಂಬೊ ಬಂಡಾರನಾಯಿಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತಿರುವನಂತಪುರಕ್ಕೆ ಕರೆತರಲಾಯಿತು’ ಎಂದು ಭಾರತದ ಹೈಕಮಿಷನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.</p>.<p>ಶ್ರೀಲಂಕಾದ ರಕ್ಷಣ ಕಾರ್ಯಕ್ಕೆ ಮತ್ತಷ್ಟು ನೆರವು ನೀಡುತ್ತಿರುವ ಭಾರತ, ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಿದೆ. ಭಾರತೀಯ ವಾಯುಪಡೆಯ ಚೇತಕ್ ಯುದ್ಧವಿಮಾನವು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದೆ. ಭೂಕುಸಿತ ಮತ್ತು ಪ್ರವಾಹದಿಂದ ರಸ್ತೆ ಸಂಪರ್ಕ ಕಡಿತಗೊಂಡಿರುವ ಗುಡ್ಡಪ್ರದೇಶ ಕೊಟ್ಮಲೆಯಲ್ಲಿಯೂ ಕಾರ್ಯಾಚರಣೆ ನಡೆಸುತ್ತಿದೆ</p>.<p>ಎನ್ಡಿಆರ್ಎಫ್ ಭಾನುವಾರ ಕೊಲಂಬೊಕ್ಕೆ ತಲುಪಿದ್ದು, ಕೋಚಿಕಡೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.</p>.<p><strong>ಹೆಲಿಕಾಪ್ಟರ್ ಪತನ:</strong> </p><p>ವೆನ್ನಪ್ಪುವ ಕರಾವಳಿಯಲ್ಲಿ ಪರಿಹಾರ ಸಾಮಗ್ರಿ ತಲುಪಿಸುತ್ತಿದ್ದ ವೇಳೆ ಹೆಲಿಕಾಪ್ಟರ್ವೊಂದು ಪತನಗೊಂಡಿದ್ದು, ಪೈಲಟ್ ಮೃತಪಟ್ಟಿದ್ದಾರೆ. ಐವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಶ್ರೀಲಂಕಾ ವಾಯಪಡೆ ದೃಢಪಡಿಸಿದೆ.</p>.<p>ರಕ್ಷಣಾ ಕಾರ್ಯಚರಣೆ ನಡೆಸುತ್ತಿದ್ದ ನೌಕಾಪಡೆಯ ಐವರು ನಾವಿಕರ ಮೃತದೇಹ ಪತ್ತೆಯಾಗಿದೆ ಎಂದು ಶ್ರೀಲಂಕಾ ನೌಕಾಪಡೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>