<p><strong>ಕೊಲಂಬೊ</strong>: ಮಾನವೀಯ ಮನೋಭಾವದೊಂದಿಗೆ ತೊಂದರೆಗೊಳಗಾದ ಮೀನುಗಾರರ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ ಒಂದು ದಿನದ ನಂತರ, ಶ್ರೀಲಂಕಾ ಭಾನುವಾರ ಕನಿಷ್ಠ 11 ಮಂದಿ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ.</p><p>ಪ್ರಧಾನಿ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ನಡುವಿನ ಶನಿವಾರದ ಮಾತುಕತೆಯ ಸಂದರ್ಭದಲ್ಲಿ ಮೀನುಗಾರರ ಸಮಸ್ಯೆ ಪ್ರಮುಖವಾಗಿ ಪ್ರಸ್ತಾಪವಾಗಿತ್ತು.</p><p>ನಾವು ಮೀನುಗಾರರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಚರ್ಚಿಸಿದ್ದೇವೆ. ಈ ವಿಷಯದಲ್ಲಿ ಮಾನವೀಯ ಮನೋಭಾವದಿಂದ ಮುಂದುವರಿಯಬೇಕು ಎಂದು ಪರಸ್ಪರ ಒಪ್ಪಿಕೊಂಡಿದ್ದೇವೆ ಎಂದು ದಿಸಾನಾಯಕೆ ಅವರನ್ನು ಭೇಟಿಯಾದ ನಂತರ ಮೋದಿ ತಮ್ಮ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದರು.</p><p>ನಾವು ಮೀನುಗಾರರು ಮತ್ತು ಅವರ ದೋಣಿಗಳನ್ನು ತಕ್ಷಣ ಬಿಡುಗಡೆ ಮಾಡುವ ಬಗ್ಗೆಯೂ ಒತ್ತು ನೀಡಿದ್ದೇವೆ ಎಂದೂ ಅವರು ಹೇಳಿದ್ದರು.</p><p>ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಮೀನುಗಾರರ ಸಮಸ್ಯೆ ಕುರಿತಂತೆ ಎರಡೂ ಕಡೆಯವರು ವಿವರವಾಗಿ ಚರ್ಚಿಸಿದ್ದಾರೆ ಎಂದು ಹೇಳಿದ್ದರು.</p><p>ಕನಿಷ್ಠ 11 ಭಾರತೀಯ ಮೀನುಗಾರರನ್ನು ವಿಶೇಷ ಆದ್ಯತೆ ಮೇರೆಗೆ ಬಿಡುಗಡೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.</p><p>ಮೀನುಗಾರರ ಸಮಸ್ಯೆ ಎರಡೂ ದೇಶಗಳ ನಡುವಿನ ಸಂಬಂಧಕ್ಕೆ ತೊಡಕಾಗಿದೆ. ಪಾಕ್ ಜಲಸಂಧಿಯಲ್ಲಿ ಶ್ರೀಲಂಕಾ ನೌಕಾಪಡೆಯ ಸಿಬ್ಬಂದಿ ಭಾರತೀಯ ಮೀನುಗಾರರ ಮೇಲೆ ಬಲಪ್ರಯೋಗ ಮಾಡಿರುವ ಹಲವು ಘಟನೆಗಳು ಈ ಹಿಂದೆ ನಡೆದಿವೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಮಾನವೀಯ ಮನೋಭಾವದೊಂದಿಗೆ ತೊಂದರೆಗೊಳಗಾದ ಮೀನುಗಾರರ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ ಒಂದು ದಿನದ ನಂತರ, ಶ್ರೀಲಂಕಾ ಭಾನುವಾರ ಕನಿಷ್ಠ 11 ಮಂದಿ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ.</p><p>ಪ್ರಧಾನಿ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ನಡುವಿನ ಶನಿವಾರದ ಮಾತುಕತೆಯ ಸಂದರ್ಭದಲ್ಲಿ ಮೀನುಗಾರರ ಸಮಸ್ಯೆ ಪ್ರಮುಖವಾಗಿ ಪ್ರಸ್ತಾಪವಾಗಿತ್ತು.</p><p>ನಾವು ಮೀನುಗಾರರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಚರ್ಚಿಸಿದ್ದೇವೆ. ಈ ವಿಷಯದಲ್ಲಿ ಮಾನವೀಯ ಮನೋಭಾವದಿಂದ ಮುಂದುವರಿಯಬೇಕು ಎಂದು ಪರಸ್ಪರ ಒಪ್ಪಿಕೊಂಡಿದ್ದೇವೆ ಎಂದು ದಿಸಾನಾಯಕೆ ಅವರನ್ನು ಭೇಟಿಯಾದ ನಂತರ ಮೋದಿ ತಮ್ಮ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದರು.</p><p>ನಾವು ಮೀನುಗಾರರು ಮತ್ತು ಅವರ ದೋಣಿಗಳನ್ನು ತಕ್ಷಣ ಬಿಡುಗಡೆ ಮಾಡುವ ಬಗ್ಗೆಯೂ ಒತ್ತು ನೀಡಿದ್ದೇವೆ ಎಂದೂ ಅವರು ಹೇಳಿದ್ದರು.</p><p>ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಮೀನುಗಾರರ ಸಮಸ್ಯೆ ಕುರಿತಂತೆ ಎರಡೂ ಕಡೆಯವರು ವಿವರವಾಗಿ ಚರ್ಚಿಸಿದ್ದಾರೆ ಎಂದು ಹೇಳಿದ್ದರು.</p><p>ಕನಿಷ್ಠ 11 ಭಾರತೀಯ ಮೀನುಗಾರರನ್ನು ವಿಶೇಷ ಆದ್ಯತೆ ಮೇರೆಗೆ ಬಿಡುಗಡೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.</p><p>ಮೀನುಗಾರರ ಸಮಸ್ಯೆ ಎರಡೂ ದೇಶಗಳ ನಡುವಿನ ಸಂಬಂಧಕ್ಕೆ ತೊಡಕಾಗಿದೆ. ಪಾಕ್ ಜಲಸಂಧಿಯಲ್ಲಿ ಶ್ರೀಲಂಕಾ ನೌಕಾಪಡೆಯ ಸಿಬ್ಬಂದಿ ಭಾರತೀಯ ಮೀನುಗಾರರ ಮೇಲೆ ಬಲಪ್ರಯೋಗ ಮಾಡಿರುವ ಹಲವು ಘಟನೆಗಳು ಈ ಹಿಂದೆ ನಡೆದಿವೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>