ಗುವಾಹಟಿ: ಅಸ್ಸಾಂ ರಾಜ್ಯ ಯುವ ಕಾಂಗ್ರೆಸ್ ನಾಯಕರಾಗಿದ್ದ ಅಂಕಿತಾ ದತ್ತಾ ಅವರು ನೀಡಿದ ಕಿರುಕುಳ ಮತ್ತು ಲಿಂಗ ತಾರತಮ್ಯ ದೂರಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹಾಜರಾಗುವುದಕ್ಕೆ 10 ದಿನಗಳ ಕಾಲಾವಕಾಶ ನೀಡಬೇಕು ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಅಸ್ಸಾಂ ಪೊಲೀಸರಿಗೆ ಮನವಿ ಮಾಡಿದ್ದಾರೆ.