<p><strong>ಮುಂಬೈ</strong>: ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಹಾಗೂ ಶಿವಸೇನೆ (ಶಿಂದೆ ಬಣ) ಮುಖ್ಯಸ್ಥ ಏಕನಾಥ ಶಿಂದೆ ಅವರು ನೂತನ ‘ಮಹಾಯುತಿ’ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಂಡಂತೆ ತೋರುತ್ತಿದೆ.</p>.<p>ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ದೇವೇಂದ್ರ ಫಡಣವೀಸ್ ಹೆಸರು ಮುಂಚೂಣಿಯಲ್ಲಿದ್ದು, ಅವರು ನೂತನ ಸರ್ಕಾರಕ್ಕೆ ‘ಅಂತಿಮ ಸ್ಪರ್ಶ’ ನೀಡುವ ನಿಟ್ಟಿನಲ್ಲಿ ಸರಣಿ ಸಭೆ ನಡೆಸಿದ್ದಾರೆ. </p>.<p>ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಸೋಮವಾರ ಮತ್ತು ಮಂಗಳವಾರ ನವದೆಹಲಿಯಲ್ಲಿದ್ದುಕೊಂಡು, ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸಿದ್ದಾರೆ. ನೂತನ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ಪಡೆಯಲು ಎನ್ಸಿಪಿ ಮತ್ತು ಶಿವಸೇನೆ ತೀವ್ರ ಕಸರತ್ತು ನಡೆಸಿವೆ.</p>.<p>ಫಡಣವೀಸ್ ಅವರು ಮಂಗಳವಾರ ರಾತ್ರಿ, ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ‘ವರ್ಷಾ’ದಲ್ಲಿ ಶಿಂದೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕಳೆದ ವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಇವರಿಬ್ಬರು ಭೇಟಿಯಾಗಿದ್ದು ಇದೇ ಮೊದಲು.</p>.<p>ನವದೆಹಲಿಯಿಂದ ಬಂದ ಬಳಿಕ ಸತಾರಾದಲ್ಲಿನ ಗ್ರಾಮಕ್ಕೆ ತೆರಳಿದ್ದ ಶಿಂದೆ, ಅಲ್ಲಿಂದ ಠಾಣೆಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆದಿದ್ದರು.</p>.<p>ಫಡಣವೀಸ್ ಆಪ್ತರೂ ಆಗಿರುವ ಶಾಸಕ ಗಿರೀಶ್ ಮಹಾಜನ್ ಅವರು ಸೋಮವಾರ ರಾತ್ರಿ ಶಿಂದೆ ಅವರನ್ನು ಭೇಟಿಯಾಗಿ, ನೂತನ ಸರ್ಕಾರದ ಭಾಗವಾಗಲು ಮತ್ತು ಉಪ ಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಳ್ಳುವಂತೆ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p><strong>ಸಮಾರಂಭಕ್ಕೆ ಭರದ ಸಿದ್ಧತೆ</strong>: ನೂತನ ಮುಖ್ಯಮಂತ್ರಿಯ ಹೆಸರು ಘೋಷಣೆಯಾಗದಿದ್ದರೂ, ಡಿಸೆಂಬರ್ 5ರಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಜಾದ್ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.</p>.<p>ಗುರುವಾರ ಸಂಜೆ 5.30ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಫಡಣವೀಸ್ ಅವರು ಮುಖ್ಯಮಂತ್ರಿಯಾಗಿ ಹಾಗೂ ಶಿಂದೆ ಮತ್ತು ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.</p>.<p>ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬುಧವಾರ ನಿಗದಿಯಾಗಿದ್ದು, ನೂತನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆಬೀಳಲಿದೆ.</p>.<p><strong>ದಿನದ ಬೆಳವಣಿಗೆ</strong> </p><ul><li><p>ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಶಿಂದೆ ಭೇಟಿಯಾದ ಫಡಣವೀಸ್ </p></li><li><p>ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡರು ಸಚಿವ ಸ್ಥಾನದ ಆಕಾಂಕ್ಷಿಗಳ ಜತೆ ಫಡಣವೀಸ್ ಸರಣಿ ಸಭೆ </p></li><li><p>ಪ್ರಮಾಣ ವಚನ ಸಮಾರಂಭದ ಸಿದ್ಧತೆ ಪರಿಶೀಲಿಸಿದ ‘ಮಹಾಯುತಿ’ ನಾಯಕರು </p></li><li><p>ಮಂಗಳವಾರವೂ ನವದೆಹಲಿಯಲ್ಲಿ ಬಿಜೆಪಿ ವರಿಷ್ಠರ ಜತೆ ಅಜಿತ್ ಪವಾರ್ ಮಾತುಕತೆ</p></li></ul>.<p><strong>ಶಿಂದೆ ಆರೋಗ್ಯ ತಪಾಸಣೆ</strong> </p><p>ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಮಂಗಳವಾರ ಠಾಣೆಯ ಜುಪಿಟರ್ ಆಸ್ಪತ್ರೆಯಲ್ಲಿ ಅರೋಗ್ಯ ತಪಾಸಣೆ ಮಾಡಿಸಿಕೊಂಡರು. ‘ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಬಂದಿದ್ದೇನೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಹಾಗೂ ಶಿವಸೇನೆ (ಶಿಂದೆ ಬಣ) ಮುಖ್ಯಸ್ಥ ಏಕನಾಥ ಶಿಂದೆ ಅವರು ನೂತನ ‘ಮಹಾಯುತಿ’ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಂಡಂತೆ ತೋರುತ್ತಿದೆ.</p>.<p>ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ದೇವೇಂದ್ರ ಫಡಣವೀಸ್ ಹೆಸರು ಮುಂಚೂಣಿಯಲ್ಲಿದ್ದು, ಅವರು ನೂತನ ಸರ್ಕಾರಕ್ಕೆ ‘ಅಂತಿಮ ಸ್ಪರ್ಶ’ ನೀಡುವ ನಿಟ್ಟಿನಲ್ಲಿ ಸರಣಿ ಸಭೆ ನಡೆಸಿದ್ದಾರೆ. </p>.<p>ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಸೋಮವಾರ ಮತ್ತು ಮಂಗಳವಾರ ನವದೆಹಲಿಯಲ್ಲಿದ್ದುಕೊಂಡು, ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸಿದ್ದಾರೆ. ನೂತನ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ಪಡೆಯಲು ಎನ್ಸಿಪಿ ಮತ್ತು ಶಿವಸೇನೆ ತೀವ್ರ ಕಸರತ್ತು ನಡೆಸಿವೆ.</p>.<p>ಫಡಣವೀಸ್ ಅವರು ಮಂಗಳವಾರ ರಾತ್ರಿ, ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ‘ವರ್ಷಾ’ದಲ್ಲಿ ಶಿಂದೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕಳೆದ ವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಇವರಿಬ್ಬರು ಭೇಟಿಯಾಗಿದ್ದು ಇದೇ ಮೊದಲು.</p>.<p>ನವದೆಹಲಿಯಿಂದ ಬಂದ ಬಳಿಕ ಸತಾರಾದಲ್ಲಿನ ಗ್ರಾಮಕ್ಕೆ ತೆರಳಿದ್ದ ಶಿಂದೆ, ಅಲ್ಲಿಂದ ಠಾಣೆಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆದಿದ್ದರು.</p>.<p>ಫಡಣವೀಸ್ ಆಪ್ತರೂ ಆಗಿರುವ ಶಾಸಕ ಗಿರೀಶ್ ಮಹಾಜನ್ ಅವರು ಸೋಮವಾರ ರಾತ್ರಿ ಶಿಂದೆ ಅವರನ್ನು ಭೇಟಿಯಾಗಿ, ನೂತನ ಸರ್ಕಾರದ ಭಾಗವಾಗಲು ಮತ್ತು ಉಪ ಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಳ್ಳುವಂತೆ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p><strong>ಸಮಾರಂಭಕ್ಕೆ ಭರದ ಸಿದ್ಧತೆ</strong>: ನೂತನ ಮುಖ್ಯಮಂತ್ರಿಯ ಹೆಸರು ಘೋಷಣೆಯಾಗದಿದ್ದರೂ, ಡಿಸೆಂಬರ್ 5ರಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಜಾದ್ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.</p>.<p>ಗುರುವಾರ ಸಂಜೆ 5.30ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಫಡಣವೀಸ್ ಅವರು ಮುಖ್ಯಮಂತ್ರಿಯಾಗಿ ಹಾಗೂ ಶಿಂದೆ ಮತ್ತು ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.</p>.<p>ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬುಧವಾರ ನಿಗದಿಯಾಗಿದ್ದು, ನೂತನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆಬೀಳಲಿದೆ.</p>.<p><strong>ದಿನದ ಬೆಳವಣಿಗೆ</strong> </p><ul><li><p>ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಶಿಂದೆ ಭೇಟಿಯಾದ ಫಡಣವೀಸ್ </p></li><li><p>ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡರು ಸಚಿವ ಸ್ಥಾನದ ಆಕಾಂಕ್ಷಿಗಳ ಜತೆ ಫಡಣವೀಸ್ ಸರಣಿ ಸಭೆ </p></li><li><p>ಪ್ರಮಾಣ ವಚನ ಸಮಾರಂಭದ ಸಿದ್ಧತೆ ಪರಿಶೀಲಿಸಿದ ‘ಮಹಾಯುತಿ’ ನಾಯಕರು </p></li><li><p>ಮಂಗಳವಾರವೂ ನವದೆಹಲಿಯಲ್ಲಿ ಬಿಜೆಪಿ ವರಿಷ್ಠರ ಜತೆ ಅಜಿತ್ ಪವಾರ್ ಮಾತುಕತೆ</p></li></ul>.<p><strong>ಶಿಂದೆ ಆರೋಗ್ಯ ತಪಾಸಣೆ</strong> </p><p>ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಮಂಗಳವಾರ ಠಾಣೆಯ ಜುಪಿಟರ್ ಆಸ್ಪತ್ರೆಯಲ್ಲಿ ಅರೋಗ್ಯ ತಪಾಸಣೆ ಮಾಡಿಸಿಕೊಂಡರು. ‘ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಬಂದಿದ್ದೇನೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>