<p><strong>ಚೆನ್ನೈ</strong>: ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ–2020’ (ಎನ್ಇಪಿ) ಹಾಗೂ ‘ತ್ರಿಭಾಷಾ ನೀತಿ’ಯನ್ನು ತಿರಸ್ಕರಿಸಿದ್ದರಿಂದ ಕೇಂದ್ರ ಸರ್ಕಾರವು ತಮಿಳುನಾಡು ಸರ್ಕಾರದ ವಿರುದ್ಧ ಬಹಿರಂಗವಾಗಿ ಬ್ಲ್ಯಾಕ್ಮೇಲ್, ದಬ್ಬಾಳಿಕೆ ಅನುಸರಿಸುತ್ತಿದೆ. ರಾಜ್ಯಕ್ಕೆ ಬರಬೇಕಿದ್ದ ₹2,152 ಕೋಟಿಯನ್ನು ಕಿತ್ತು ಬೇರೆ ರಾಜ್ಯಗಳಿಗೆ ನೀಡಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ.</p>.<p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ತಮಿಳುನಾಡಿನ ವಿರುದ್ಧ ಕೇಂದ್ರದ ಬಿಜೆಪಿ ಸರ್ಕಾರದಿಂದ ಅನ್ಯಾಯದ ಮಿತಿಗೆ ಕೊನೆಯೇ ಇಲ್ಲ. ಎನ್ಇಪಿ, ತ್ರಿಭಾಷಾ ನೀತಿ ತಿರಸ್ಕರಿಸಿದ್ದಕ್ಕೆ ತಮಿಳುನಾಡು ವಿದ್ಯಾರ್ಥಿಗಳಿಗೆ ಸಿಗಬೇಕಿದ್ದ ₹2,152 ಕೋಟಿ ಹಣವನ್ನು ಕಿತ್ತು ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಇದು ದಬ್ಬಾಳಿಕೆಗಿಂತ ಕಡಿಮೆಯಿಲ್ಲ, ಅವರ ಹಕ್ಕುಗಳಿಗಾಗಿ ಹೋರಾಡಿದ್ದಕ್ಕೆ ಈ ರೀತಿ ಶಿಕ್ಷಿಸಲಾಗಿದೆ’ ಎಂದು ದೂರಿದ್ದಾರೆ.</p>.<p class="bodytext">‘ಭಾರತದ ಇತಿಹಾಸದಲ್ಲಿಯೇ, ಯಾವುದೇ ಸರ್ಕಾರವು ರಾಜ್ಯದ ವಿರುದ್ಧ ಸೇಡು ತೀರಿಸಿಕೊಳ್ಳಲು ಶಿಕ್ಷಣದ ಹಕ್ಕನ್ನು ಕತ್ತು ಹಿಸುಕುವಷ್ಟು ನಿರ್ದಯವಾಗಿಲ್ಲ. ತಮಿಳುನಾಡಿಗೆ ಅನ್ಯಾಯ ಹಾಗೂ ಬಿಜೆಪಿಯ ದ್ವೇಷದ ಮುಖವನ್ನು ಈ ಮೂಲಕ ಸಾಬೀತುಪಡಿಸಿದೆ’ ಎಂದು ಸ್ಟಾಲಿನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ–2020’ (ಎನ್ಇಪಿ) ಹಾಗೂ ‘ತ್ರಿಭಾಷಾ ನೀತಿ’ಯನ್ನು ತಿರಸ್ಕರಿಸಿದ್ದರಿಂದ ಕೇಂದ್ರ ಸರ್ಕಾರವು ತಮಿಳುನಾಡು ಸರ್ಕಾರದ ವಿರುದ್ಧ ಬಹಿರಂಗವಾಗಿ ಬ್ಲ್ಯಾಕ್ಮೇಲ್, ದಬ್ಬಾಳಿಕೆ ಅನುಸರಿಸುತ್ತಿದೆ. ರಾಜ್ಯಕ್ಕೆ ಬರಬೇಕಿದ್ದ ₹2,152 ಕೋಟಿಯನ್ನು ಕಿತ್ತು ಬೇರೆ ರಾಜ್ಯಗಳಿಗೆ ನೀಡಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ.</p>.<p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ತಮಿಳುನಾಡಿನ ವಿರುದ್ಧ ಕೇಂದ್ರದ ಬಿಜೆಪಿ ಸರ್ಕಾರದಿಂದ ಅನ್ಯಾಯದ ಮಿತಿಗೆ ಕೊನೆಯೇ ಇಲ್ಲ. ಎನ್ಇಪಿ, ತ್ರಿಭಾಷಾ ನೀತಿ ತಿರಸ್ಕರಿಸಿದ್ದಕ್ಕೆ ತಮಿಳುನಾಡು ವಿದ್ಯಾರ್ಥಿಗಳಿಗೆ ಸಿಗಬೇಕಿದ್ದ ₹2,152 ಕೋಟಿ ಹಣವನ್ನು ಕಿತ್ತು ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಇದು ದಬ್ಬಾಳಿಕೆಗಿಂತ ಕಡಿಮೆಯಿಲ್ಲ, ಅವರ ಹಕ್ಕುಗಳಿಗಾಗಿ ಹೋರಾಡಿದ್ದಕ್ಕೆ ಈ ರೀತಿ ಶಿಕ್ಷಿಸಲಾಗಿದೆ’ ಎಂದು ದೂರಿದ್ದಾರೆ.</p>.<p class="bodytext">‘ಭಾರತದ ಇತಿಹಾಸದಲ್ಲಿಯೇ, ಯಾವುದೇ ಸರ್ಕಾರವು ರಾಜ್ಯದ ವಿರುದ್ಧ ಸೇಡು ತೀರಿಸಿಕೊಳ್ಳಲು ಶಿಕ್ಷಣದ ಹಕ್ಕನ್ನು ಕತ್ತು ಹಿಸುಕುವಷ್ಟು ನಿರ್ದಯವಾಗಿಲ್ಲ. ತಮಿಳುನಾಡಿಗೆ ಅನ್ಯಾಯ ಹಾಗೂ ಬಿಜೆಪಿಯ ದ್ವೇಷದ ಮುಖವನ್ನು ಈ ಮೂಲಕ ಸಾಬೀತುಪಡಿಸಿದೆ’ ಎಂದು ಸ್ಟಾಲಿನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>