<p><strong>ತಿರುವಳ್ಳೂರು (ತಮಿಳುನಾಡು)</strong>: ‘ನೀಟ್’ ಪ್ರವೇಶ ಪರೀಕ್ಷೆ ಮತ್ತು ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆ ಕುರಿತು ರಾಜ್ಯದ ಜನರ ಪ್ರಶ್ನೆಗಳಿಗೆ ‘ಸ್ಪಷ್ಟ ಉತ್ತರ’ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಒತ್ತಾಯಿಸಿದರು. </p>.<p>‘ಈ ವಿಷಯಗಳಲ್ಲಿ ತಕರಾರು ತೆಗೆಯುವ ಮೂಲಕ ಆಡಳಿತ ಪಕ್ಷ ಡಿಎಂಕೆ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದೆ’ ಎಂಬ ಅಮಿತ್ ಶಾ ಅವರ ಟೀಕೆಯನ್ನು ಸ್ಟಾಲಿನ್ ಅವರು ತಳ್ಳಿಹಾಕಿದರು.</p>.<p>ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮದಲ್ಲಿ ಅವರು ‘ನೀಟ್, ತ್ರಿಭಾಷಾ ಸೂತ್ರ, ವಕ್ಫ್ ತಿದ್ದುಪಡಿ ಕಾಯ್ದೆ ಅಥವಾ ಕ್ಷೇತ್ರ ಮರುವಿಂಗಡಣೆ ಹೀಗೆ ರಾಜ್ಯಗಳಿಗೆ ಬಾಧಕವಾಗುವ ವಿಷಯಗಳಿಗೆ ಸಂಬಂಧಿಸಿ ತಮಿಳುನಾಡು ಸ್ಪಷ್ಟವಾಗಿ ವಿರೋಧದ ಧ್ವನಿ ದಾಖಲಿಸಲಿದೆ’ ಎಂದರು.</p>.<p>‘ತಮಿಳುನಾಡು ಎಲ್ಲ ರಾಜ್ಯಗಳ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದೆ. ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದ್ದೇವೆ ಎಂದು ಅಮಿತ್ ಶಾ ಹೇಳಿದ್ದಾರೆ. ಹಾಗಿದ್ದರೆ, ರಾಜ್ಯಗಳ ಹಕ್ಕುಗಳಿಗೆ ಹೋರಾಟ ನಡೆಸುವುದೇ ತಪ್ಪೆ‘ ಎಂದು ಸ್ಟಾಲಿನ್ ಪ್ರಶ್ನಿಸಿದರು. </p>.<p>‘ತಮಿಳುನಾಡು ಎಂದಿಗೂ ದೆಹಲಿಗೆ ಮಣಿಯುವುದಿಲ್ಲ. ಪಕ್ಷಗಳನ್ನು ಒಡೆಯುವ ಬಿಜೆಪಿಯವರ ಕಾರ್ಯತಂತ್ರ ಎಂದಿಗೂ ತಮಿಳುನಾಡಿನಲ್ಲಿ ಫಲ ನೀಡುವುದಿಲ್ಲ‘ ಎಂದು ಸ್ಟಾಲಿನ್ ಸ್ಪಷ್ಟವಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವಳ್ಳೂರು (ತಮಿಳುನಾಡು)</strong>: ‘ನೀಟ್’ ಪ್ರವೇಶ ಪರೀಕ್ಷೆ ಮತ್ತು ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆ ಕುರಿತು ರಾಜ್ಯದ ಜನರ ಪ್ರಶ್ನೆಗಳಿಗೆ ‘ಸ್ಪಷ್ಟ ಉತ್ತರ’ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಒತ್ತಾಯಿಸಿದರು. </p>.<p>‘ಈ ವಿಷಯಗಳಲ್ಲಿ ತಕರಾರು ತೆಗೆಯುವ ಮೂಲಕ ಆಡಳಿತ ಪಕ್ಷ ಡಿಎಂಕೆ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದೆ’ ಎಂಬ ಅಮಿತ್ ಶಾ ಅವರ ಟೀಕೆಯನ್ನು ಸ್ಟಾಲಿನ್ ಅವರು ತಳ್ಳಿಹಾಕಿದರು.</p>.<p>ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮದಲ್ಲಿ ಅವರು ‘ನೀಟ್, ತ್ರಿಭಾಷಾ ಸೂತ್ರ, ವಕ್ಫ್ ತಿದ್ದುಪಡಿ ಕಾಯ್ದೆ ಅಥವಾ ಕ್ಷೇತ್ರ ಮರುವಿಂಗಡಣೆ ಹೀಗೆ ರಾಜ್ಯಗಳಿಗೆ ಬಾಧಕವಾಗುವ ವಿಷಯಗಳಿಗೆ ಸಂಬಂಧಿಸಿ ತಮಿಳುನಾಡು ಸ್ಪಷ್ಟವಾಗಿ ವಿರೋಧದ ಧ್ವನಿ ದಾಖಲಿಸಲಿದೆ’ ಎಂದರು.</p>.<p>‘ತಮಿಳುನಾಡು ಎಲ್ಲ ರಾಜ್ಯಗಳ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದೆ. ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದ್ದೇವೆ ಎಂದು ಅಮಿತ್ ಶಾ ಹೇಳಿದ್ದಾರೆ. ಹಾಗಿದ್ದರೆ, ರಾಜ್ಯಗಳ ಹಕ್ಕುಗಳಿಗೆ ಹೋರಾಟ ನಡೆಸುವುದೇ ತಪ್ಪೆ‘ ಎಂದು ಸ್ಟಾಲಿನ್ ಪ್ರಶ್ನಿಸಿದರು. </p>.<p>‘ತಮಿಳುನಾಡು ಎಂದಿಗೂ ದೆಹಲಿಗೆ ಮಣಿಯುವುದಿಲ್ಲ. ಪಕ್ಷಗಳನ್ನು ಒಡೆಯುವ ಬಿಜೆಪಿಯವರ ಕಾರ್ಯತಂತ್ರ ಎಂದಿಗೂ ತಮಿಳುನಾಡಿನಲ್ಲಿ ಫಲ ನೀಡುವುದಿಲ್ಲ‘ ಎಂದು ಸ್ಟಾಲಿನ್ ಸ್ಪಷ್ಟವಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>